ಮಹಾಮಳೆಗೆ ಕೊಚ್ಚಿಹೋಗಿವೆ ರಂಗನತಿಟ್ಟಿನ ನಡುಗಡ್ಡೆಗಳು
ಮೈಸೂರು, ಆಗಸ್ಟ್ 24: ಕಾವೇರಿ ನದಿಯ ರಭಸಕ್ಕೆ ಕೆಆರ್ ಎಸ್ ಜಲಾಶಯದ ಒಳಹರಿವು ಏರಿಕೆಯಾಗಿದ್ದರ ಪರಿಣಾಮ ರಂಗನತಿಟ್ಟು ಪಕ್ಷಿಧಾಮದ ಮೇಲೂ ಆಗಿದೆ.
ನೀರಿನ ಹರಿವಿನ ಪ್ರಮಾಣ ಅಧಿಕಗೊಂಡ ಹಿನ್ನೆಲೆ ಪಕ್ಷಿಧಾಮದಲ್ಲಿದ್ದ 23 ನಡುಗಡ್ಡೆಗಳ ಪೈಕಿ 10 ನಡುಗಡ್ಡೆಗಳು ಕೊಚ್ಚಿ ಹೋಗಿವೆ. ಈ ನಡುಗಡ್ಡೆಗಳಲ್ಲಿದ್ದ ಮರಗಳೂ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಅಲ್ಲಿ ನಡುಗಡ್ಡೆ ಇತ್ತು ಎಂಬುದಕ್ಕೂ ಕುರುಹು ಸಿಗದಂತಾಗಿದೆ. ಇವನ್ನು ಪುನರ್ ನಿರ್ಮಾಣ ಮಾಡಬೇಕಾದರೆ ಕೋಟ್ಯಾಂತರ ರೂ. ವೆಚ್ಚವಾಗಲಿದ್ದು, ಸುಮಾರು ವರ್ಷಗಳೇ ಹಿಡಿಯಬಹುದು.

ಪ್ರತಿ ನಡುಗಡ್ಡೆ ಮೇಲೂ ಹಲವು ಪ್ರಭೇದದ ಪಕ್ಷಿಗಳು ವಾಸ್ತವ್ಯ ಹೂಡುತ್ತಿದ್ದವು. ಈ ಬಾರಿಯ ಪ್ರವಾಹ ರಂಗನತಿಟ್ಟು ಪಕ್ಷಿಧಾಮಕ್ಕೆ ದೊಡ್ಡ ಮಟ್ಟದ ನಷ್ಟ ಉಂಟು ಮಾಡಿದೆ. ಕೆಆರ್ ಎಸ್ ನಿಂದ ನೀರನ್ನು ಹೊರಬಿಟ್ಟಾಗ ರಂಗನತಿಟ್ಟು ಪಕ್ಷಿಧಾಮದಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿತ್ತು. ಪಕ್ಷಿ ಧಾಮಕ್ಕೆ ಪ್ರವಾಸಿಗರಿರಲಿ, ಅಲ್ಲಿನ ಸಿಬ್ಬಂದಿಯೇ ಹೋಗಲಾರದಷ್ಟು ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಆ ಸಂದರ್ಭದಲ್ಲಿ ಪಕ್ಷಿಧಾಮಕ್ಕೆ ಸುಮಾರು 30 ಲಕ್ಷದಷ್ಟು ಆದಾಯ ನಷ್ಟವಾಗಿತ್ತು. ಇದರೊಟ್ಟಿಗೆ ಇವುಗಳ ಪುನರ್ ನಿರ್ಮಾಣವೂ ಈಗ ಹೊರೆಯಾಗಿದೆ.

ಕಾವೇರಿ ನದಿಯಲ್ಲಿ ಪ್ರವಾಹ ಸಂಪೂರ್ಣ ನಿಂತ ಬಳಿಕವಷ್ಟೇ ನಷ್ಟದ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ಹಿರಿಯ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. ನಾಶವಾಗಿರುವ ನಡುಗಡ್ಡೆಗಳ ಅಭಿವೃದ್ಧಿ ಕಾರ್ಯವನ್ನು ನವೆಂಬರ್ ನಂತರ ಆರಂಭಿಸಲಾಗುತ್ತದೆ ಎನ್ನುತ್ತಾರೆ ಅಧಿಕಾರಿಗಳು.
-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications