ತುಳು ಚಿತ್ರರಂಗ ರಾಜಕೀಯದಿಂದ ದೂರ ಉಳಿಯಲು ಕಾರಣಗಳೇನು?
ಮಂಗಳೂರು, ಏಪ್ರಿಲ್ 25 : ಚುನಾವಣೆ ವಿಷಯ ಬಂದಾಗ ಚಿತ್ರರಂಗ ಹಾಗೂ ರಾಜಕೀಯ ರಂಗಗಳು ಒಂದಕ್ಕೊಂದು ಬೆಸೆದುಕೊಂಡಿವೆ. ದೇಶದ ಎಲ್ಲಾ ರಾಜ್ಯಗಳ ಚಿತ್ರರಂಗಗಳು ಅಲ್ಲದೆ ಕರ್ನಾಟಕದ ಚಿತ್ರರಂಗವೂ ಇದಕ್ಕೆ ಹೊರತಾಗಿಲ್ಲ. ನಟರು ರಾಜಕೀಯ ನಾಯಕರಾಗಿ ಆಯ್ಕೆಯಾಗಿದ್ದಾರೆ. ರಾಜಕೀಯ ಮುಖಂಡರು ಸಿನಿಮಾಗಳಲ್ಲಿ ನಟನೆ ಮಾಡಿ ಹೀರೋಗಳು ಕೂಡ ಆಗಿದ್ದಾರೆ.
ಆದರೆ ಇಲ್ಲೊಂದು ಚಿತ್ರರಂಗವಿದೆ. ಅದು ಮಾತ್ರ ರಾಜಕೀಯ ರಂಗದ ವಿಷಯದಲ್ಲಿ ಸಂಪೂರ್ಣ ವಿಭಿನ್ನ. ಅದೇ ತುಳುನಾಡಿನ ಕೋಸ್ಟಲ್ ವುಡ್. ತುಳು ಚಿತ್ರರಂಗ ರಾಜಕೀಯ ವಿಷಯದಲ್ಲಿ ಅಂತರ ಕಾಯ್ದುಕೊಂಡಿದೆ. ಕನ್ನಡ ಚಿತ್ರರಂಗದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಂಡವರು ಬಹಳ ಮಂದಿ ಕಾಣಸಿಗುತ್ತಾರೆ. ಕೆಲವರು ನಟರಾಗಿ ರಾಜಕೀಯ ರಂಗ ಪ್ರವೇಶಿಸಿ ಮಂತ್ರಿಗಳಾಗಿ ಅಧಿಕಾರವನ್ನೂ ಅನುಭವಿಸಿದ್ದಾರೆ.
ತಮಿಳು ಚಿತ್ರರಂಗದಲ್ಲಿ ಬಹುತೇಕ ನಟರು ಯಾವುದಾದರೂ ಒಂದು ಪಕ್ಷದಲ್ಲಿ ಗುರುತಿಸಿಕೊಂಡಿರುತ್ತಾರೆ. ಅಲ್ಲದೇ ಮುಖ್ಯಮಂತ್ರಿಗಳಾಗಿ ಮೆರೆದವರೂ ಇದ್ದಾರೆ. ಚುನಾವಣೆ ಬರುತ್ತಿದ್ದಂತೆ ಚಲನಚಿತ್ರ ನಟರಿಗೆ, ನಟಿಯರಿಗೆ ಇನ್ನಿಲ್ಲದ ಬೇಡಿಕೆ ಬರುತ್ತದೆ. ಕೆಲವರಿಗೆ ಚುನಾವಣೆ ನಿಲ್ಲಲು ಅಭ್ಯರ್ಥಿಯಾಗಲು ಅವಕಾಶ ಬಂದರೆ ಕೆಲವರಿಗೆ ಚುನಾವಣೆಯಲ್ಲಿ ಪ್ರಚಾರಕ್ಕೆ ಪಕ್ಷಗಳಿಂದ ಆಹ್ವಾನ ಬರುತ್ತದೆ.

ಆದರೆ ಈ ಎಲ್ಲಾ ಚಿತ್ರರಂಗಕ್ಕೆ ವಿರುದ್ಧವಾಗಿರುವುದು ತುಳು ಚಿತ್ರರಂಗ. ಇಲ್ಲಿ ಚಿತ್ರರಂಗದಲ್ಲಿ ಗುರುತಿಸಿಕೊಂಡ ಒಂದಿಬ್ಬರು ಮಾತ್ರ ರಾಜಕೀಯದಲ್ಲಿದ್ದಾರೆ. ಅದು ಬಿಟ್ಟರೆ ಸದ್ಯ ಚಿತ್ರರಂಗದಲ್ಲಿರುವ ಯಾವುದೇ ನಟ, ನಟಿ, ಕಲಾವಿದರು ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿಲ್ಲ. ಅಲ್ಲದೆ ರಾಜಕೀಯವನ್ನು ದೂರವೇ ಇಟ್ಟಿದ್ದಾರೆ ಎಂದು ಹೇಳಬಹುದು. ಪಕ್ಷದ ಮುಖಂಡರ ಜೊತೆ ಗುರುತಿಸಿಕೊಳ್ಳುವುದಾಗಲಿ, ಅವರ ಪರ ಪ್ರಚಾರ ಚಟುವಟಿಕೆಗಳಲ್ಲಿ ಭಾಗವಹಿಸುವುದಾಗಲೀ ಇಲ್ಲ.
ಸೀಮಿತ ಪ್ರೇಕ್ಷಕರು ಇರುವುದರಿಂದ ಒಂದು ಪಕ್ಷದೊಂದಿಗೆ ಗುರುತಿಸಿಕೊಂಡರೆ ತಮ್ಮ ಚಿತ್ರಗಳ ಮೇಲೆ ಪರಿಣಾಮ ಬೀರಬಹುದು ಎನ್ನುವುದು ಒಂದು ಕಾರಣವಾದರೆ , ಕಲಾವಿದನಾದವ ಒಂದು ಜಾತಿ, ಧರ್ಮ, ಪಕ್ಷದೊಂದಿಗೆ ಗುರುತಿಸಿಕೊಳ್ಳಬಾರದು ಎನ್ನುವುದು ಇನ್ನೊಂದು ಕಾರಣ ಎನ್ನುವುದು ಹಿರಿಯ ಕಲಾವಿದರ ಅಭಿಮತ. ಇಲ್ಲಿಯ ರಾಜಕೀಯ ಮುಖಂಡರು ತುಳು ಚಿತ್ರರಂಗದ ನಟ ನಟಿಯರನ್ನು ಪಕ್ಷದ ಪ್ರಚಾರಕ್ಕೆ ಕರೆಯುವುದು ಬಹಳ ಕಡಿಮೆ. ಅಲ್ಲದೆ ತುಳು ಚಿತ್ರರಂಗದ ಬಹುತೇಕ ಕಲಾವಿದರು ಎಲ್ಲಾ ಪಕ್ಷಗಳ ಮುಖಂಡರ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ.
ಕರಾವಳಿಯಲ್ಲಿ ಸಿನಿಮಾ ನಟರ ಪ್ರಚಾರ ನೋಡಲು ಬರುವ ಜನರು ಕಡಿಮೆ. ಇಲ್ಲಿ ನಟ, ನಟಿಯರನ್ನು ನೋಡಲು ಮುಗಿಬೀಳುವುದು ಅಥವಾ ಅವರನ್ನು ಮಾತನಾಡಿಸಲು ಮುಗಿ ಬೀಳುವರ ಸಂಖ್ಯೆಯೂ ಕಡಿಮೆ. ಹಿರಿಯ ತುಳು ಚಿತ್ರರಂಗದ ಕೆಲವೊಬ್ಬರು ರಾಜಕೀಯ ರಂಗದಲ್ಲಿ ಗುರುತಿಸಿಕೊಂಡಿದ್ದರು. 1971ರಲ್ಲಿ ಬಿಡುಗಡೆಯಾಗಿದ್ದ 'ಎನ್ನ ತಂಗಡಿ' ಚಿತ್ರದಲ್ಲಿ ನಟಿಸಿದ್ದ ಲೋಕಯ್ಯ ಶೆಟ್ಟಿ ರಾಜಕೀಯದಲ್ಲಿ ಗುರುತಿಸಿಕೊಂಡು ಸುರತ್ಕಲ್ ಶಾಸಕರಾಗಿದ್ದರು. 1978ರಲ್ಲಿ ಬಿಡುಗಡೆಯಾಗಿದ್ದ 'ಸಂಗಮ ಸಾಕ್ಷಿ' ಚಿತ್ರದ ನಿರ್ಮಾಪಕರಾಗಿದ್ದ ವಸಂತ ಬಂಗೇರ ಬೆಳ್ತಂಗಡಿ ಶಾಸಕರಾಗಿದ್ದಾರೆ. ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿ ಅವರು 2011ರಲ್ಲಿ ಬಿಡುಗಡೆಯಾದ ಕಂಚಿಲ್ದ ಬಾಲೆ ಚಿತ್ರದಲ್ಲಿ ನಟಿಸಿದ್ದರು.
"ಕಲಾವಿದರು ಎಲ್ಲಾ ಪಕ್ಷದ ನಾಯಕರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿರುತ್ತಾರೆ. ಒಂದು ಪಕ್ಷದಲ್ಲಿ ಗುರುತಿಸಿಕೊಂಡರೆ ಇನ್ನೊಂದು ಪಕ್ಷದವರೊಂದಿಗೆ ಇದ್ದ ಸಂಬಂಧ ಕಳೆದುಕೊಳ್ಳಬೇಕಾಗುತ್ತದೆ. ಅಲ್ಲದೆ ಅಭಿಮಾನಿಗಳು ತಾವು ಇಷ್ಟ ಪಡುವ ನಟರು ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಳ್ಳುವುದನ್ನು ಇಷ್ಟಪಡುವುದಿಲ್ಲ, ಈ ಹಿನ್ನಲೆಯಲ್ಲಿ ನಟರು ತಟಸ್ಥರಾಗಿರುವುದು ಉತ್ತಮ" ಎನ್ನುತ್ತಾರೆ ನಟ, ನಿರ್ದೇಶಕ ದೇವದಾಸ್ ಕಾಪಿಕಾಡ್.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications