ಮಂಡ್ಯದ ತೋಟದ ಮನೆಯಲ್ಲಿ ಕಾರ್ಮಿಕರ ಜೋಡಿ ಕೊಲೆ
ಮಂಡ್ಯ, ಸೆಪ್ಟೆಂಬರ್ 4: ತೋಟದ ಮನೆಯಲ್ಲಿ ಮಲಗಿದ್ದ ಇಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ಮಂಡ್ಯದ ಯಲಿಯೂರು ಸಮೀಪದ ತೋಟದ ಮನೆಯಲ್ಲಿ ನಡೆದಿದೆ.
Recommended Video
BBMP
Election
ಮುಂದೂಡಲು
ಪಾಲಿಕೆ
ಪಾಲಿಟಿಕ್ಸ್!!
|
Oneindia
Kannada
ಕೊಲೆಯಾದ ಇಬ್ಬರನ್ನು ರಾಮಮೂರ್ತಿ (46), ಬಸವರಾಜು (44) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಇಟ್ಟಿಗೆ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮೈಸೂರು; 8 ವರ್ಷಗಳ ನಂತರ ಪತ್ತೆಯಾದರು ಕೊಲೆಗೆ ಯತ್ನಿಸಿದ್ದ ಆರೋಪಿಗಳು
ಇವರು ಮಲಗಿದ್ದ ವೇಳೆ ರಾತ್ರಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕೊಲೆಗೆ ಕಾರಣ ಇನ್ನೂ ತಿಳಿದಯಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Comments
English summary
Two brick factory workers killed at yaliyuru in mandya district,