ಮಂಡ್ಯದ ತೋಟದ ಮನೆಯಲ್ಲಿ ಕಾರ್ಮಿಕರ ಜೋಡಿ ಕೊಲೆ

ಮಂಡ್ಯ, ಸೆಪ್ಟೆಂಬರ್ 4: ತೋಟದ ಮನೆಯಲ್ಲಿ ಮಲಗಿದ್ದ ಇಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ಮಂಡ್ಯದ ಯಲಿಯೂರು ಸಮೀಪದ ತೋಟದ ಮನೆಯಲ್ಲಿ ನಡೆದಿದೆ.

Recommended Video

      BBMP Election ಮುಂದೂಡಲು ಪಾಲಿಕೆ ಪಾಲಿಟಿಕ್ಸ್!! | Oneindia Kannada

      ಕೊಲೆಯಾದ ಇಬ್ಬರನ್ನು ರಾಮಮೂರ್ತಿ (46), ಬಸವರಾಜು (44) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಇಟ್ಟಿಗೆ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

      Mandya: Two Brick Factory Workers Killed At Yaliyuru


      ಇವರು ಮಲಗಿದ್ದ ವೇಳೆ ರಾತ್ರಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕೊಲೆಗೆ ಕಾರಣ ಇನ್ನೂ ತಿಳಿದಯಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+