ಮಂಡ್ಯದಲ್ಲಿ ಮೇಕೆ ಹಿಡಿಯಲು ಬಂದು ಕೊಟ್ಟಿಗೆಯಲ್ಲಿ ಸಿಕ್ಕಿಬಿದ್ದ ಚಿರತೆ: ಇಬ್ಬರು ಗಾಯಾಳು
ಮೇಕೆ ತಿನ್ನಲು ಬಂದು ವೃದ್ಧ ದಂಪತಿಯನ್ನು ಗಾಯಗೊಳಿಸಿದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.
ಮಂಡ್ಯ , ಫೆಬ್ರವರಿ. 10: ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ದಂಪತಿಯನ್ನು ಗಾಯಗೊಳಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.
ಬುಧವಾರ ರಾತ್ರಿ 2 ಗಂಟೆ ಸುಮಾರಿಗೆ ಮೂಡನಹಳ್ಳಿ ಗ್ರಾಮದ ನಿಂಗೇಗೌಡ ಎಂಬುವವರ ತೋಟದ ಮನೆಗೆ ನುಗ್ಗಿದ ಚಿರತೆ ಮನೆಯಲ್ಲಿದ್ದ ಇಬ್ಬರ ಮೇಲೆ ದಾಳಿ ಮಾಡಿತ್ತು.
#Karnataka
— Kiran Parashar (@KiranParashar21) February 10, 2023
Two persons were injured after the leopard attack in mandya district and eventually a couple locked the room door in which leopard stayed for more than 2 hours.
Later forest officials caught the leopard. @IndianExpress pic.twitter.com/xXPzjS9sXX
ಮನೆಗೆ ನುಗ್ಗಿದ ಚಿರತೆ ಕೊಟ್ಟಿಯಲ್ಲಿದ್ದ ಮೇಕೆಗಳ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದ ರೈತ ನಿಂಗೇಗೌಡ (75) ಮತ್ತು ಅವರ ಪತ್ನಿ ಗೌರಮ್ಮ ಅವರ ಮೇಲೂ ಚಿರತೆ ದಾಳಿ ಮಾಡಿತ್ತು. ಇಬ್ಬರು ಗಾಯಗೊಂಡಿದ್ದು, ಅವರ ಕೂಗಾಟ ಕೇಳಿ ಜನರು ಗುಂಪುಗೂಡಿದ್ದಾರೆ. ಜನರನ್ನು ಕಂಡು ಬೆದರಿದ ಚಿರತೆ ರೇಷ್ಮೆ ಸಾಕಾಣಿಕೆ ಮನೆಗೆ ನುಗ್ಗಿದೆ. ಅಲ್ಲಿಯೇ ಅನ್ನು ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಬಂಧಿಸಲಾಗಿತ್ತು.

ವೃದ್ಧ ದಂಪತಿಯನ್ನು ಗಾಯಗೊಳಿಸಿದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಸೆರೆ ಹಿಡಿದಿದ್ದಾರೆ. ಈ ಹಿಂದೆಯೂ ಈ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಚಿರತೆ, ಕುರಿ, ಮೇಕೆಗಳನ್ನು ಬೇಟೆಯಾಡಲು ಹಳ್ಳಿಗೆ ನುಗ್ಗಿತ್ತು.
ದಂಪತಿ ಕಿರುಚಾಟವನ್ನು ಕೇಳಿದ ನೆರೆಹೊರೆಯವರು ಅವರ ಸಹಾಯಕ್ಕೆ ಧಾವಿಸಿ ಗಾಯಗೊಂಡ ನಿಂಗೇಗೌಡರನ್ನು ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಕೈಗಳಿಗೆ ಪರಚಿದ ಗಾಯವಾಗಿದ್ದ ಅವರ ಪತ್ನಿ ಗೌರಮ್ಮಗೆ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಿದ್ದಾರೆ.
ಇನ್ನು, ಜಿಲ್ಲೆಯ ಕೊಳಗೆರೆ ಗ್ರಾಮದಲ್ಲಿ ಜಮೀನಿನಲ್ಲಿ ಸಿಕ್ಕ ಎರಡು ಚಿರತೆ ಮರಿಗಳನ್ನು ಯುವಕರ ಗುಂಪೊಂದು ಮನೆಗೆ ತೆಗೆದುಕೊಂಡು ಬಂದಿದೆ. ಇದಾಗಿ ಕೆಲವೇ ಗಂಟೆಗಳಲ್ಲಿ ಅರಣ್ಯಾಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ.
ಕೊಳಗೆರೆ ಗ್ರಾಮದ ಜಮೀನಿನ ಬಳಿಯ ಕಲ್ಲುಬಂಡೆಯ ಕೆಳಗೆ ಸಿಲುಕಿದ್ದ ಎರಡು ಚಿರತೆ ಮರಿಗಳನ್ನು ಶಿವಮೂರ್ತಿ, ಕೀರ್ತಿ ಕುಮಾರ್ ಮತ್ತು ಅವರ ಸ್ನೇಹಿತರು ರಕ್ಷಿಸಿದ್ದಾರೆ. ಯುವಕರು ಗ್ರಾಮಕ್ಕೆ ಚಿರತೆ ಮರಿಗಳನ್ನು ಕೊಂಡೊಯ್ದ ಬಳಿಕ ನೂರಾರು ಗ್ರಾಮಸ್ಥರು ಮರಿಗಳನ್ನು ನೋಡಲು ಮುಗಿಬಿದ್ದರು. ಆದರೆ, ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಇದು ಅಪರಾಧವಾಗಿದ್ದು, ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಮರಿಗಳನ್ನು ವಶಕ್ಕೆ ಪಡೆದಿದ್ದಾರೆ.
-
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ -
ಬಿಸಿಲಿನ ತಾಪಕ್ಕೆ ಕಳೆಗುಂದಿದೆಯೇ ಮುಖದ ಕಾಂತಿ? ಬೇಸಿಗೆಯಲ್ಲಿ ತ್ವಚೆಯ ರಕ್ಷಣೆಗೆ ಇಲ್ಲಿವೆ 12 ಸರಳ ಸೂತ್ರ -
Powerful Vastu Plants: ಮನೆಗೆ ಪಾಸಿಟಿವ್ ಎನರ್ಜಿ ಬೇಕಾ? ಈ ಸಸ್ಯಗಳನ್ನು ಇಡಿ, ಜೀವನವೇ ಬದಲಾಗುತ್ತದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications