ಮಂಡ್ಯದಲ್ಲಿ ಮೇಕೆ ಹಿಡಿಯಲು ಬಂದು ಕೊಟ್ಟಿಗೆಯಲ್ಲಿ ಸಿಕ್ಕಿಬಿದ್ದ ಚಿರತೆ: ಇಬ್ಬರು ಗಾಯಾಳು
ಮೇಕೆ ತಿನ್ನಲು ಬಂದು ವೃದ್ಧ ದಂಪತಿಯನ್ನು ಗಾಯಗೊಳಿಸಿದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.
ಮಂಡ್ಯ , ಫೆಬ್ರವರಿ. 10: ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ದಂಪತಿಯನ್ನು ಗಾಯಗೊಳಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.
ಬುಧವಾರ ರಾತ್ರಿ 2 ಗಂಟೆ ಸುಮಾರಿಗೆ ಮೂಡನಹಳ್ಳಿ ಗ್ರಾಮದ ನಿಂಗೇಗೌಡ ಎಂಬುವವರ ತೋಟದ ಮನೆಗೆ ನುಗ್ಗಿದ ಚಿರತೆ ಮನೆಯಲ್ಲಿದ್ದ ಇಬ್ಬರ ಮೇಲೆ ದಾಳಿ ಮಾಡಿತ್ತು.
#Karnataka
— Kiran Parashar (@KiranParashar21) February 10, 2023
Two persons were injured after the leopard attack in mandya district and eventually a couple locked the room door in which leopard stayed for more than 2 hours.
Later forest officials caught the leopard. @IndianExpress pic.twitter.com/xXPzjS9sXX
ಮನೆಗೆ ನುಗ್ಗಿದ ಚಿರತೆ ಕೊಟ್ಟಿಯಲ್ಲಿದ್ದ ಮೇಕೆಗಳ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದ ರೈತ ನಿಂಗೇಗೌಡ (75) ಮತ್ತು ಅವರ ಪತ್ನಿ ಗೌರಮ್ಮ ಅವರ ಮೇಲೂ ಚಿರತೆ ದಾಳಿ ಮಾಡಿತ್ತು. ಇಬ್ಬರು ಗಾಯಗೊಂಡಿದ್ದು, ಅವರ ಕೂಗಾಟ ಕೇಳಿ ಜನರು ಗುಂಪುಗೂಡಿದ್ದಾರೆ. ಜನರನ್ನು ಕಂಡು ಬೆದರಿದ ಚಿರತೆ ರೇಷ್ಮೆ ಸಾಕಾಣಿಕೆ ಮನೆಗೆ ನುಗ್ಗಿದೆ. ಅಲ್ಲಿಯೇ ಅನ್ನು ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಬಂಧಿಸಲಾಗಿತ್ತು.

ವೃದ್ಧ ದಂಪತಿಯನ್ನು ಗಾಯಗೊಳಿಸಿದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಸೆರೆ ಹಿಡಿದಿದ್ದಾರೆ. ಈ ಹಿಂದೆಯೂ ಈ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಚಿರತೆ, ಕುರಿ, ಮೇಕೆಗಳನ್ನು ಬೇಟೆಯಾಡಲು ಹಳ್ಳಿಗೆ ನುಗ್ಗಿತ್ತು.
ದಂಪತಿ ಕಿರುಚಾಟವನ್ನು ಕೇಳಿದ ನೆರೆಹೊರೆಯವರು ಅವರ ಸಹಾಯಕ್ಕೆ ಧಾವಿಸಿ ಗಾಯಗೊಂಡ ನಿಂಗೇಗೌಡರನ್ನು ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಕೈಗಳಿಗೆ ಪರಚಿದ ಗಾಯವಾಗಿದ್ದ ಅವರ ಪತ್ನಿ ಗೌರಮ್ಮಗೆ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಿದ್ದಾರೆ.
ಇನ್ನು, ಜಿಲ್ಲೆಯ ಕೊಳಗೆರೆ ಗ್ರಾಮದಲ್ಲಿ ಜಮೀನಿನಲ್ಲಿ ಸಿಕ್ಕ ಎರಡು ಚಿರತೆ ಮರಿಗಳನ್ನು ಯುವಕರ ಗುಂಪೊಂದು ಮನೆಗೆ ತೆಗೆದುಕೊಂಡು ಬಂದಿದೆ. ಇದಾಗಿ ಕೆಲವೇ ಗಂಟೆಗಳಲ್ಲಿ ಅರಣ್ಯಾಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ.
ಕೊಳಗೆರೆ ಗ್ರಾಮದ ಜಮೀನಿನ ಬಳಿಯ ಕಲ್ಲುಬಂಡೆಯ ಕೆಳಗೆ ಸಿಲುಕಿದ್ದ ಎರಡು ಚಿರತೆ ಮರಿಗಳನ್ನು ಶಿವಮೂರ್ತಿ, ಕೀರ್ತಿ ಕುಮಾರ್ ಮತ್ತು ಅವರ ಸ್ನೇಹಿತರು ರಕ್ಷಿಸಿದ್ದಾರೆ. ಯುವಕರು ಗ್ರಾಮಕ್ಕೆ ಚಿರತೆ ಮರಿಗಳನ್ನು ಕೊಂಡೊಯ್ದ ಬಳಿಕ ನೂರಾರು ಗ್ರಾಮಸ್ಥರು ಮರಿಗಳನ್ನು ನೋಡಲು ಮುಗಿಬಿದ್ದರು. ಆದರೆ, ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಇದು ಅಪರಾಧವಾಗಿದ್ದು, ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಮರಿಗಳನ್ನು ವಶಕ್ಕೆ ಪಡೆದಿದ್ದಾರೆ.
-
Holi 2026: ಹೋಳಿ ಹಬ್ಬದ ಬಣ್ಣಗಳಿಂದ ಬರಬಹುದು ಕಿವಿ ನೋವು ಮತ್ತು ಸೈನಸ್ ಸೋಂಕು; ತಜ್ಞರ ಸುರಕ್ಷತಾ ಸಲಹೆಗಳು -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ












Click it and Unblock the Notifications