ಮಂಡ್ಯ: ಹೊಸ ವರ್ಷ ಪಾರ್ಟಿ ಮುಗಿಸಿ ಬರ್ತಿದ್ದಾಗ ಗೆಳೆಯರಿಬ್ಬರು ಸಾವು
ಮಂಡ್ಯ, ಜನವರಿ 02: ಹೊಸವರ್ಷಾಚರಣೆ ಮುಗಿಸಿಕೊಂಡು ಬೈಕ್ ನಲ್ಲಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಚೌಡೇನಹಳ್ಳಿ ಸಮೀಪ ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿ ಹೊಡೆದು ಗೆಳೆಯರಿಬ್ಬರು ಮೃತಪಟ್ಟಿದ್ದಾರೆ.
ನಾಗಮಂಗಲದ ನಿವಾಸಿಗಳಾದ ಪವನ್ ಮತ್ತು ಪ್ರದೀಪ್ ಮೃತ ದುರ್ದೈವಿಗಳು. ಇವರಿಬ್ಬರು ಹೊಸ ವರ್ಷದ ಪಾರ್ಟಿ ಮುಗಿಸಿಕೊಂಡು ಸೋಮವಾರ ತಡರಾತ್ರಿ ಬೆಳ್ಳೂರು ಕ್ರಾಸ್ ಕಡೆಯಿಂದ ನಾಗಮಂಗಲಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಚೌಡೇನಹಳ್ಳಿ ಸಮೀಪ ಚೆಕ್ ಪೋಸ್ಟ್ ಬಳಿ ಹಾಕಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದಿದೆ.

ದುರ್ಘಟನೆಯಲ್ಲಿ ಗೆಳೆಯರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರೂ ಯುವಕರು ನಾಗಮಂಗಲ ಪಟ್ಟಣದ ನಿವಾಸಿಗಳಾಗಿದ್ದು, ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications