Get Updates
Get notified of breaking news, exclusive insights, and must-see stories!

ಅವೈಜ್ಞಾನಿಕವಾಗಿ ರಸ್ತೆ ಗುಂಡಿ ಮುಚ್ಚಿದರೆ ಕ್ರಿಮಿನಲ್ ಕೇಸ್

ಮಂಡ್ಯ, ನವೆಂಬರ್‌ 21 : ಅವೈಜ್ಞಾನಿಕವಾಗಿ ಗುಂಡಿ ಮುಚ್ಚುವ ಕ್ರಮ ಅನುಸರಿಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕಾಗುತ್ತದೆ ಎಂದು ಮಂಡ್ಯ ನಗರಸಭಾಧ್ಯಕ್ಷ ಎಚ್. ಎಸ್. ಮಂಜು ಎಚ್ಚರಿಕೆ ನೀಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, "ಕಳೆದ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ಇದರಿಂದ ಸಣ್ಣ ಪುಟ್ಟ ಅಪಘಾತಗಳು ನಡೆದಿದೆ. ಇದನ್ನೇ ಗುರಿಯಾಗಿಟ್ಟುಕೊಂಡ ಕೆಲವರು ಪ್ರಚಾರ ಗಿಟ್ಟಿಸಿಕೊಳ್ಳಲು ಮುಂದಾಗಿದ್ದಾರೆ" ಎಂದು ದೂರಿದರು.

"ರಸ್ತೆ ಗುಂಡಿಗಳಿಗೆ ವೆಟ್‌ಮಿಕ್ಸ್ ಹಾಕಿರುವುದರಿಂದಾಗಿ ರಸ್ತೆಯಲ್ಲಿ ವಾಹನಗಳು ಚಲಿಸಿದಾಗ ಧೂಳು ಬರುತ್ತದೆ. ಜೊತೆಗೆ ವಾಹನಗಳ ಓಡಾಟದಿಂದಾಗಿ ಕಲ್ಲುಗಳು ಮೇಲೆದ್ದಿವೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗಳನ್ನು ಮಾಡಿಕೊಂಡಿರುವ ಉದಾಹರಣೆಗಳು ಇವೆ" ಎಂದರು.

ಮುಂದಿನ ದಿನಗಳಲ್ಲಿ ಕ್ರಿಮಿನಲ್ ಮೊಕದ್ದಮೆ

ಮುಂದಿನ ದಿನಗಳಲ್ಲಿ ಕ್ರಿಮಿನಲ್ ಮೊಕದ್ದಮೆ

ಸಾರ್ವಜನಿಕ ರಸ್ತೆಗಳು ಸರ್ಕಾರದ ಆಸ್ತಿಗಳಾಗಿವೆ. ಇವುಗಳನ್ನು ಜೋಪಾನ ಮಾಡುವುದು, ಚೆನ್ನಾಗಿ ಇಟ್ಟುಕೊಳ್ಳುವ ಕೆಲಸ ಸಾರ್ವಜನಿಕರದ್ದೂ ಆಗಿದೆ. ಗುಂಡಿಗಳನ್ನು ಮುಚ್ಚುವಾಗ ಇಂಜಿನಿಯರ್‌ಗಳ ಸಲಹೆ ಪಡೆಯಬೇಕು. ವೆಟ್ ಮಿಕ್ಸ್ ಹಾಕಿ ಅದಕ್ಕೆ ರೋಲ್ ಮಾಡಿ ಆಗಿಂದಾಗ್ಗೆ ನೀರು ಹಾಕಿ ಹದ ಮಾಡಬೇಕಾಗಿರುತ್ತದೆ. ಸುಖಾಸುಮ್ಮನೆ ಪುಕ್ಕಟ್ಟೆ ಪ್ರಚಾರಕ್ಕಾಗಿ ಕೆಲವರು ಗುಂಡಿಗಳಿಗೆ ವೆಟ್‌ಮಿಕ್ಸ್ ತಂದು ಸುರಿದು ಗೊಂದಲ ನಿರ್ಮಿಸುತ್ತಿದ್ದಾರೆ. ಈ ಬಗ್ಗೆ ಸಾರ್ವಜನಿಕವಾಗಿಯೂ ದೂರುಗಳು ಬಂದಿವೆ. ಇದನ್ನೇ ಆಧಾರವಾಗಿಟ್ಟುಕೊಂಡು ಅವರ ವಿರುದ್ಧ ಮುಂದಿನ ದಿನಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕಾಗುತ್ತದೆ ಎಂದು ನಗರಸಭೆಯ ಅಧ್ಯಕ್ಷರು ಎಚ್ಚರಿಕೆ ನೀಡಿದರು.

ರಸ್ತೆ ಗುಂಡಿ ವೈಜ್ಞಾನಿಕವಾಗಿ ಮುಚ್ಚಬೇಕು

ರಸ್ತೆ ಗುಂಡಿ ವೈಜ್ಞಾನಿಕವಾಗಿ ಮುಚ್ಚಬೇಕು

ರಸ್ತೆ ಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚಬೇಕಾಗಿರುತ್ತದೆ. ಕಳೆದ ಬಾರಿ ಗುಂಡಿಗಳನ್ನು ಮುಚ್ಚಲಾಗಿತ್ತು. ಆದರೆ ದುರಾದೃಷ್ಟವಶಾತ್ ಗುಂಡಿಗಳನ್ನು ಮುಚ್ಚುವ ಕಾರ್ಯಾಚರಣೆ ನಡೆಸಿದ ಎರಡು ಮೂರು ದಿನಗಳಲ್ಲೇ ಭಾರೀ ಮಳೆ ಬಂದು ಮತ್ತೆ ಗುಂಡಿಗಳಾಗಿವೆ. ರಸ್ತೆ ಗುಂಡಿಗಳನ್ನು ಮಚ್ಚುವುದು, ರಸ್ತೆ ದುರಸ್ತಿ, ಅಭಿವೃದ್ಧಿ ಕಾರ್ಯ ಕೈಗೊಂಡರೆ ಕನಿಷ್ಟ 30 ದಿನಗಳವರೆಗೆ ಮಳೆ ಬೀಳದಿದ್ದರೆ ಯಾವುದೇ ಸಮಸ್ಯೆ ಇರುವುದಿಲ್ಲ. ಅದು ಮೂರ್ನಾಲ್ಕು ವರ್ಷಗಳ ಕಾಲ ಬಾಳಿಕೆ ಬರುತ್ತದೆ. ಈ ಅವಧಿಯೊಳಗೆ ಮಳೆ ಬಂದರೆ ಅದು ಸರಿಯಾಗಿ ರಸ್ತೆಗೆ ಹೊಂದಿಕೆಯಾಗದೆ ಮತ್ತೆ ಕಿತ್ತುಬರುತ್ತದೆ. ಇದನ್ನೇ ಕೆಲವರು ಕಳಪೆ ಕಾಮಗಾರಿ ಎಂದೂ ಸಹ ಕರೆಯುತ್ತಾರೆ. ಇದರ ಬಗ್ಗೆ ವೈಜ್ಞಾನಿಕವಾಗಿ ತಿಳಿದವರು ಯಾರೂ ಸಹ ಮಾತನಾಡುವುದಿಲ್ಲ ಎಂದು ವಿವರಿಸಿದರು.

15ನೇ ಹಣಕಾಸು ಯೋಜನೆಯಲ್ಲಿ 5 ಕೋಟಿ ಅನುದಾನ ಲಭ್ಯ

15ನೇ ಹಣಕಾಸು ಯೋಜನೆಯಲ್ಲಿ 5 ಕೋಟಿ ಅನುದಾನ ಲಭ್ಯ

ರಾಜ್ಯ ಸರ್ಕಾರದ ವತಿಯಿಂದ ಮಂಡ್ಯ ರಸ್ತೆ ದುರಸ್ತಿ 28 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಈಗಾಗಲೇ 1.27 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಉಳಿದಂತೆ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡು ಮಂಗಳವಾರ ಅಥವಾ ಬುಧವಾರದೊಳಗೆ ಎಲ್ಲ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಅಲ್ಲದೇ 15ನೇ ಹಣಕಾಸು ಯೋಜನೆಯಲ್ಲಿ 5 ಕೋಟಿ ಅನುದಾನ ಲಭ್ಯವಿದೆ. ಈ ಪೈಕಿ 3 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳು ಪ್ರಾರಂಭವಾಗಿವೆ. 2 ಕೋಟಿ ರೂ. ವೆಚ್ಚದ ಕಾಮಗಾರಿಗಳು ಡಿಸೆಂಬರ್‌ನಲ್ಲಿ ಪ್ರಾರಂಭವಾಗಲಿವೆ ಎಂದರು.

ಯಾರೂ ಕೂಡ ಅವೈಜ್ಞಾನಿಕವಾಗಿ ಗುಂಡಿ ಮುಚ್ಚಬಾರದು

ಯಾರೂ ಕೂಡ ಅವೈಜ್ಞಾನಿಕವಾಗಿ ಗುಂಡಿ ಮುಚ್ಚಬಾರದು

ಸರ್ಕಾರದಿಂದ ಬಂದಿರುವ ಹಣ ಹಾಗೂ ನಮ್ಮಲ್ಲಿರುವ ಲಭ್ಯ ಅನುದಾನದಲ್ಲಿ ಎರಡು ತಿಂಗಳೊಳಗೆ ಮಂಡ್ಯ ನಗರದ ಎಲ್ಲ ರಸ್ತೆಗಳನ್ನೂ ಸಹ ಸಂಪೂರ್ಣವಾಗಿ ದುರಸ್ತಿ ಮಾಡಲಾಗುವುದು. ಆದರೆ ಮಳೆ ಬಂದರೆ ಕಾಮಗಾರಿಗೆ ಅಡ್ಡಿಯಾಗುತ್ತದೆ. ಇಲ್ಲದಿದ್ದರೆ ಯಾವುದೇ ಸಮಸ್ಯೆಯೂ ಇಲ್ಲದೆ ಸಮರ್ಪಕವಾಗಿ ಕೆಲಸ ಪೂರ್ಣವಾಗಿ ರಸ್ತೆಗಳು ಸಂಚಾರಕ್ಕೆ ಯೋಗ್ಯವಾಗಿರುತ್ತವೆ. ಆದರೆ ಯಾರೂ ಕೂಡ ಅವೈಜ್ಞಾನಿಕವಾಗಿ ಗುಂಡಿ ಮುಚ್ಚುವ ಕ್ರಮ ಅನುಸರಿಸಬಾರದು ಎಂದು ಎಚ್.ಎಸ್. ಮಂಜು ಸ್ಪಷ್ಟಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+