ಅವೈಜ್ಞಾನಿಕವಾಗಿ ರಸ್ತೆ ಗುಂಡಿ ಮುಚ್ಚಿದರೆ ಕ್ರಿಮಿನಲ್ ಕೇಸ್
ಮಂಡ್ಯ, ನವೆಂಬರ್ 21 : ಅವೈಜ್ಞಾನಿಕವಾಗಿ ಗುಂಡಿ ಮುಚ್ಚುವ ಕ್ರಮ ಅನುಸರಿಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕಾಗುತ್ತದೆ ಎಂದು ಮಂಡ್ಯ ನಗರಸಭಾಧ್ಯಕ್ಷ ಎಚ್. ಎಸ್. ಮಂಜು ಎಚ್ಚರಿಕೆ ನೀಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, "ಕಳೆದ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ಇದರಿಂದ ಸಣ್ಣ ಪುಟ್ಟ ಅಪಘಾತಗಳು ನಡೆದಿದೆ. ಇದನ್ನೇ ಗುರಿಯಾಗಿಟ್ಟುಕೊಂಡ ಕೆಲವರು ಪ್ರಚಾರ ಗಿಟ್ಟಿಸಿಕೊಳ್ಳಲು ಮುಂದಾಗಿದ್ದಾರೆ" ಎಂದು ದೂರಿದರು.
"ರಸ್ತೆ ಗುಂಡಿಗಳಿಗೆ ವೆಟ್ಮಿಕ್ಸ್ ಹಾಕಿರುವುದರಿಂದಾಗಿ ರಸ್ತೆಯಲ್ಲಿ ವಾಹನಗಳು ಚಲಿಸಿದಾಗ ಧೂಳು ಬರುತ್ತದೆ. ಜೊತೆಗೆ ವಾಹನಗಳ ಓಡಾಟದಿಂದಾಗಿ ಕಲ್ಲುಗಳು ಮೇಲೆದ್ದಿವೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗಳನ್ನು ಮಾಡಿಕೊಂಡಿರುವ ಉದಾಹರಣೆಗಳು ಇವೆ" ಎಂದರು.

ಮುಂದಿನ ದಿನಗಳಲ್ಲಿ ಕ್ರಿಮಿನಲ್ ಮೊಕದ್ದಮೆ
ಸಾರ್ವಜನಿಕ ರಸ್ತೆಗಳು ಸರ್ಕಾರದ ಆಸ್ತಿಗಳಾಗಿವೆ. ಇವುಗಳನ್ನು ಜೋಪಾನ ಮಾಡುವುದು, ಚೆನ್ನಾಗಿ ಇಟ್ಟುಕೊಳ್ಳುವ ಕೆಲಸ ಸಾರ್ವಜನಿಕರದ್ದೂ ಆಗಿದೆ. ಗುಂಡಿಗಳನ್ನು ಮುಚ್ಚುವಾಗ ಇಂಜಿನಿಯರ್ಗಳ ಸಲಹೆ ಪಡೆಯಬೇಕು. ವೆಟ್ ಮಿಕ್ಸ್ ಹಾಕಿ ಅದಕ್ಕೆ ರೋಲ್ ಮಾಡಿ ಆಗಿಂದಾಗ್ಗೆ ನೀರು ಹಾಕಿ ಹದ ಮಾಡಬೇಕಾಗಿರುತ್ತದೆ. ಸುಖಾಸುಮ್ಮನೆ ಪುಕ್ಕಟ್ಟೆ ಪ್ರಚಾರಕ್ಕಾಗಿ ಕೆಲವರು ಗುಂಡಿಗಳಿಗೆ ವೆಟ್ಮಿಕ್ಸ್ ತಂದು ಸುರಿದು ಗೊಂದಲ ನಿರ್ಮಿಸುತ್ತಿದ್ದಾರೆ. ಈ ಬಗ್ಗೆ ಸಾರ್ವಜನಿಕವಾಗಿಯೂ ದೂರುಗಳು ಬಂದಿವೆ. ಇದನ್ನೇ ಆಧಾರವಾಗಿಟ್ಟುಕೊಂಡು ಅವರ ವಿರುದ್ಧ ಮುಂದಿನ ದಿನಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕಾಗುತ್ತದೆ ಎಂದು ನಗರಸಭೆಯ ಅಧ್ಯಕ್ಷರು ಎಚ್ಚರಿಕೆ ನೀಡಿದರು.

ರಸ್ತೆ ಗುಂಡಿ ವೈಜ್ಞಾನಿಕವಾಗಿ ಮುಚ್ಚಬೇಕು
ರಸ್ತೆ ಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚಬೇಕಾಗಿರುತ್ತದೆ. ಕಳೆದ ಬಾರಿ ಗುಂಡಿಗಳನ್ನು ಮುಚ್ಚಲಾಗಿತ್ತು. ಆದರೆ ದುರಾದೃಷ್ಟವಶಾತ್ ಗುಂಡಿಗಳನ್ನು ಮುಚ್ಚುವ ಕಾರ್ಯಾಚರಣೆ ನಡೆಸಿದ ಎರಡು ಮೂರು ದಿನಗಳಲ್ಲೇ ಭಾರೀ ಮಳೆ ಬಂದು ಮತ್ತೆ ಗುಂಡಿಗಳಾಗಿವೆ. ರಸ್ತೆ ಗುಂಡಿಗಳನ್ನು ಮಚ್ಚುವುದು, ರಸ್ತೆ ದುರಸ್ತಿ, ಅಭಿವೃದ್ಧಿ ಕಾರ್ಯ ಕೈಗೊಂಡರೆ ಕನಿಷ್ಟ 30 ದಿನಗಳವರೆಗೆ ಮಳೆ ಬೀಳದಿದ್ದರೆ ಯಾವುದೇ ಸಮಸ್ಯೆ ಇರುವುದಿಲ್ಲ. ಅದು ಮೂರ್ನಾಲ್ಕು ವರ್ಷಗಳ ಕಾಲ ಬಾಳಿಕೆ ಬರುತ್ತದೆ. ಈ ಅವಧಿಯೊಳಗೆ ಮಳೆ ಬಂದರೆ ಅದು ಸರಿಯಾಗಿ ರಸ್ತೆಗೆ ಹೊಂದಿಕೆಯಾಗದೆ ಮತ್ತೆ ಕಿತ್ತುಬರುತ್ತದೆ. ಇದನ್ನೇ ಕೆಲವರು ಕಳಪೆ ಕಾಮಗಾರಿ ಎಂದೂ ಸಹ ಕರೆಯುತ್ತಾರೆ. ಇದರ ಬಗ್ಗೆ ವೈಜ್ಞಾನಿಕವಾಗಿ ತಿಳಿದವರು ಯಾರೂ ಸಹ ಮಾತನಾಡುವುದಿಲ್ಲ ಎಂದು ವಿವರಿಸಿದರು.

15ನೇ ಹಣಕಾಸು ಯೋಜನೆಯಲ್ಲಿ 5 ಕೋಟಿ ಅನುದಾನ ಲಭ್ಯ
ರಾಜ್ಯ ಸರ್ಕಾರದ ವತಿಯಿಂದ ಮಂಡ್ಯ ರಸ್ತೆ ದುರಸ್ತಿ 28 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಈಗಾಗಲೇ 1.27 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಉಳಿದಂತೆ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡು ಮಂಗಳವಾರ ಅಥವಾ ಬುಧವಾರದೊಳಗೆ ಎಲ್ಲ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಅಲ್ಲದೇ 15ನೇ ಹಣಕಾಸು ಯೋಜನೆಯಲ್ಲಿ 5 ಕೋಟಿ ಅನುದಾನ ಲಭ್ಯವಿದೆ. ಈ ಪೈಕಿ 3 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳು ಪ್ರಾರಂಭವಾಗಿವೆ. 2 ಕೋಟಿ ರೂ. ವೆಚ್ಚದ ಕಾಮಗಾರಿಗಳು ಡಿಸೆಂಬರ್ನಲ್ಲಿ ಪ್ರಾರಂಭವಾಗಲಿವೆ ಎಂದರು.

ಯಾರೂ ಕೂಡ ಅವೈಜ್ಞಾನಿಕವಾಗಿ ಗುಂಡಿ ಮುಚ್ಚಬಾರದು
ಸರ್ಕಾರದಿಂದ ಬಂದಿರುವ ಹಣ ಹಾಗೂ ನಮ್ಮಲ್ಲಿರುವ ಲಭ್ಯ ಅನುದಾನದಲ್ಲಿ ಎರಡು ತಿಂಗಳೊಳಗೆ ಮಂಡ್ಯ ನಗರದ ಎಲ್ಲ ರಸ್ತೆಗಳನ್ನೂ ಸಹ ಸಂಪೂರ್ಣವಾಗಿ ದುರಸ್ತಿ ಮಾಡಲಾಗುವುದು. ಆದರೆ ಮಳೆ ಬಂದರೆ ಕಾಮಗಾರಿಗೆ ಅಡ್ಡಿಯಾಗುತ್ತದೆ. ಇಲ್ಲದಿದ್ದರೆ ಯಾವುದೇ ಸಮಸ್ಯೆಯೂ ಇಲ್ಲದೆ ಸಮರ್ಪಕವಾಗಿ ಕೆಲಸ ಪೂರ್ಣವಾಗಿ ರಸ್ತೆಗಳು ಸಂಚಾರಕ್ಕೆ ಯೋಗ್ಯವಾಗಿರುತ್ತವೆ. ಆದರೆ ಯಾರೂ ಕೂಡ ಅವೈಜ್ಞಾನಿಕವಾಗಿ ಗುಂಡಿ ಮುಚ್ಚುವ ಕ್ರಮ ಅನುಸರಿಸಬಾರದು ಎಂದು ಎಚ್.ಎಸ್. ಮಂಜು ಸ್ಪಷ್ಟಪಡಿಸಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications