ಕನ್ನಡ ಸಿನಿಮಾಗಳು ಸೋಲುವುದಕ್ಕೆ ಪ್ರಮುಖ ಕಾರಣ ತಿಳಿಸಿದ ವಿ.ಮನೋಹರ್: ಏನದು?, ಇಲ್ಲಿದೆ ವಿವರ
ಮಂಡ್ಯ, ಮೇ, 25: ಇಂದಿನ ಬಹುತೇಕ ಚಿತ್ರಗಳ ಕಥೆಯಲ್ಲಿ ಜೀವಾಳವಿಲ್ಲದಿರುವುದೇ ಸೋಲಿಗೆ ಪ್ರಮುಖ ಕಾರಣ ಎಂದು ಖ್ಯಾತ ಸಂಗೀತ ನಿರ್ದೇಶಕ ಹಾಗೂ ಚಿತ್ರ ನಿರ್ದೇಶಕ ವಿ.ಮನೋಹರ್ ಅಸಮಾಧನ ವ್ಯಕ್ತಪಡಿಸಿದ್ದಾರೆ.
ಯಾವುದೇ ಸಿನಿಮಾ ಜನರನ್ನು ಆಕರ್ಷಿಸಬೇಕಾದರೆ ಕಥೆ ಬಹಳ ಮುಖ್ಯ ಆಗುತ್ತದೆ. ಕೇವಲ ಹೀರೋಯಿಸಂ, ಹೀರೋಗೆ ಬಿಲ್ಡಪ್ ಕೊಡುವ ಡೈಲಾಗ್ಗಳು, ಡಬಲ್ ಮೀನಿಂಗ್ ಡೈಲಾಗ್ಗಳಿಂದ ಕೂಡಿರುವ ಚಿತ್ರಗಳು ಜನರನ್ನು ತಲುಪುವುದಿಲ್ಲ. ಇಂತಹ ಎಷ್ಟೋ ಸಿನಿಮಾಗಳು ಒಂದೇ ದಿನಕ್ಕೆ ಮಾಯ ಆಗಿರುವುದನ್ನು ನೋಡಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಂಗಿತರಂಗ, ಒಂದು ಮೊಟ್ಟೆಯ ಕಥೆ, ಯು- ಟರ್ನ್, ಕೆಜಿಎಫ್, ಕಾಂತಾರದಂತಹ ಕೆಲವು ಚಿತ್ರಗಳು ಜನರ ಮನಸ್ಸನ್ನು ಗೆದ್ದವು. ಹೊಸಬರು ಮಾಡುವ ಹೊಸ ಪ್ರಯೋಗಗಳನ್ನು ಜನರು ಇಷ್ಟಪಟ್ಟಿದ್ದಾರೆ. ಅವುಗಳಲ್ಲಿ ಕಥೆಗೆ ಹೆಚ್ಚಿನ ಪ್ರಾಮುಖ್ಯತೆ ಇದ್ದುದರಿಂದ ಜನರು ಆ ಚಿತ್ರಗಳತ್ತ ಆಕರ್ಷಿತರಾದರು. ಇಂತಹ ಏರಿಳಿತಗಳು ಕನ್ನಡ ಚಿತ್ರರಂಗದಲ್ಲಿ ಉಂಟಾಗುತ್ತಿರುತ್ತವೆ ಎಂದರು.
ಯುವ ನಿರ್ದೇಶಕರು ಹಾಗೂ ನಿರ್ಮಾಪಕರು ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಲು ಒಲವು ತೋರಿದರೆ ಚಿತ್ರರಂಗ ಇನ್ನಷ್ಟು ಬೆಳೆಯಲು ಸಾಧ್ಯ ಆಗುತ್ತದೆ. ಹಣ ಮಾಡುವುದಕ್ಕೆ ಚಿತ್ರವನ್ನು ನಿರ್ಮಿಸುವುದಾದರೆ ಅವುಗಳಿಗೆ ಉಳಿಗಾಲ ಇರುವುದಿಲ್ಲ ಎಂದು ಹೇಳಿದರು.
ಹಾಗೆಯೆ ಉತ್ತಮ ಚಿತ್ರಗಳಿಗೆ ಅತ್ಯುತ್ತಮ ಹಾಡುಗಳನ್ನು ಬರೆಯುವ ಪ್ರತಿಭಾವಂತ ಸಾಹಿತಿಗಳು ಈಗಲೂ ಇದ್ದಾರೆ. ಆದರೆ ಚಿತ್ರದ ಸನ್ನಿವೇಶಕ್ಕೆ ಪೂರಕ ಆಗುವಂತಹ ಹಾಡುಗಳನ್ನು ರಚಿಸುವ ಅವಕಾಶಗಳು ಅವರಿಗೆ ಸಿಗುತ್ತಿಲ್ಲ ಎಂದರು.
ಜಯಂತ್ ಕಾಯ್ಕಿಣಿ, ಕವಿರಾಜ್, ನಾಗೇಂದ್ರ ಪ್ರಸಾದ್ ಸೇರಿದಂತೆ ಅನೇಕ ಸಾಹಿತಿಗಳಿದ್ದಾರೆ. ಪ್ರಸ್ತುತ ಸಂಗೀತ ನಿರ್ದೇಶಕರು ನೀಡುವ ರೆಡಿಮೇಡ್ ಟ್ಯೂನ್ಗಳಿಗೆ ಸಾಹಿತ್ಯ ಬರೆಯುವಂತಹ ಸನ್ನಿವೇಶ ಸೃಷ್ಟಿ ಆಗಿದೆ. ಅಂತಹ ಸಾಮರ್ಥ್ಯ ಕೂಡ ಜಯಂತ್ ಕಾಯ್ಕಿಣಿ ಅವರಲ್ಲಿದೆ. ಆದರೆ ಕಥೆಗೆ ಹೊಂದಿಕೊಂಡಂತೆ ಮೂಡಿ ಬರುವ ಸಾಹಿತ್ಯ ಹೆಚ್ಚು ಸತ್ವಯುತ ಆಗಿರುತ್ತದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications