ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಪರಿಚಿತ ವಾಹನ ಡಿಕ್ಕಿ-ಹೆದ್ದಾರಿ ದಾಟುತ್ತಿದ್ದ ಜಿಂಕೆ ಸಾವು

|
Google Oneindia Kannada News

ಮಂಡ್ಯ, ಜೂ.21: ಹೆದ್ದಾರಿ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ತಾಲೂಕಿನ ನಿಡಘಟ್ಟ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಜರುಗಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ, ಕೊಂಬಿನಕಲ್ಲು ಅರಣ್ಯಧಾಮದಿಂದ ಆಹಾರ ಅರಸಿ ವಲಸೆ ಬಂದಿದ್ದ ಜಿಂಕೆ ಗುಂಪಿನಿಂದ ದಾರಿತಪ್ಪಿತ್ತು. ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಹೆದ್ದಾರಿ ದಾಟುತ್ತಿದ್ದಾಗ ಅಪರಿಚಿತ ವಾಹನ ಜಿಂಕೆಗೆ ಡಿಕ್ಕಿ ಹೊಡೆದಿದೆ. ಇದರಿಂದ ಜಿಂಕೆಯ ಕಾಲುಗಳಿಗೆ ತೀವ್ರ ಗಾಯಗಳಾಗಿತ್ತು.

ವಿಡಿಯೋ: ಮಾಹಿತಿ ನೀಡಲು ತಡಮಾಡಿದ ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಶಾಸಕವಿಡಿಯೋ: ಮಾಹಿತಿ ನೀಡಲು ತಡಮಾಡಿದ ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಶಾಸಕ

ಈ ಮಾರ್ಗದಲ್ಲಿ ಬರುತ್ತಿದ್ದ ವಾಹನ ಸವಾರರು ಜಿಂಕೆಯನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆ ಅಧಿಕಾರಿಗಳು ಗಾಯಗೊಂಡ ಜಿಂಕೆಯನ್ನು ಮದ್ದೂರು ಪಶು ವೈದ್ಯ ಆಸ್ಪತ್ರೆಗೆ ತಂದು ಪ್ರಥಮ ಚಿಕಿತ್ಸೆ ನೀಡಿದ ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದೆ.

vehicle-animal accident: deer death

ಕೊಂಬಿನಕಲ್ಲು ಅರಣ್ಯಧಾಮದಿಂದ ಆಹಾರ ಅರಸಿ ಜಿಂಕೆಗಳ ಗುಂಪು ಚಂದಳ್ಳಿದೊಡ್ಡಿ ಗ್ರಾಮ ಸಮೀಪಕ್ಕೆ ಬಂದಿದ್ದವು. ಗುಂಪಿನಿಂದ ತಪ್ಪಿಸಿಕೊಂಡು ಬಂದು ಅಪಘಾತಕ್ಕೆ ಸಿಲುಕಿ ಸಾವನ್ನಪ್ಪಿದೆ. ವಲಯ ಅರಣ್ಯಾಧಿಕಾರಿ ಮಹದೇವ, ಉಪ ವಲಯ ಅರಣ್ಯಾಧಿಕಾರಿಗಳಾದ ರವಿ, ರತ್ನಾಕರ್ ಹಾಗೂ ಸಿಬ್ಬಂದಿಗಳು ಸ್ಥಳೀಯ ವೈದ್ಯರ ಮರಣೋತ್ತರ ಪರೀಕ್ಷೆಯ ನಂತರ ಇಲಾಖೆಯ ಆವರಣದಲ್ಲಿ ಅಂತ್ಯಕ್ರಿಯೆ ನಡೆಸಿದ್ದಾರೆ.

ಪೈಪ್‌ಲೈನ್ ಒಡೆದು ಅದಕ್ಕೆ ಕಲುಷಿತ ನೀರು ಸೇರ್ಪಡೆ: ನಗರಕೆರೆಯಲ್ಲಿ ಕಟ್ಟೆಚ್ಚರಪೈಪ್‌ಲೈನ್ ಒಡೆದು ಅದಕ್ಕೆ ಕಲುಷಿತ ನೀರು ಸೇರ್ಪಡೆ: ನಗರಕೆರೆಯಲ್ಲಿ ಕಟ್ಟೆಚ್ಚರ

Recommended Video

Virat Kohli ಗೆ Covid Positive: BCCI ಮಾಡಿದ್ದೇನು? ನೆಕ್ಸ್ಟ್ ಮ್ಯಾಚ್ ಕಥೆ ಏನು? | *Cricket | OneIndia

English summary
mandya: Unknown vehicle collision with deer crossing highway, The injured deer has died in Bengaluru-Mysuru National Highway on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X