ಶ್ರೀರಂಗಪಟ್ಟಣ: 18 ವರ್ಷದಿಂದ ಬಾಗಿಲು ಮುಚ್ಚಿದ್ದ ಚಾಮುಂಡೇಶ್ವರಿ ದೇವಾಲಯ ಓಪನ್

ಮಂಡ್ಯ,ಜು6: ದಲಿತರು ಮತ್ತು ಸವರ್ಣಿಯರ ನಡುವಿನ ಜಾತಿಯ ಕಾರಣಕ್ಕೆ ಕಳೆದ 18 ವರ್ಷಗಳಿಂದ ಮುಚ್ಚಿದ್ದ ದೇವಾಲಯಕ್ಕಿಂದು ಮುಕ್ತಿ ಸಿಕ್ಕಿತ್ತು. ಪರಿಣಾಮ ಶ್ರೀರಂಗಪಟ್ಟಣದಲ್ಲಿ 18 ವರ್ಷಗಳಿಂದ ಬಾಗಿಲು ಮುಚ್ಚಿದ್ದ ಶ್ರೀ ಚಾಮುಂಡೇಶ್ವರಿ ದೇವಾಲಯದ ಬಾಗಿಲ ಬೀಗ ತೆಗೆದು ಪೂಜೆ ಸಲ್ಲಿಸಲಾಯಿತು.

ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ತಹಸೀಲ್ದಾರ್ ಶ್ವೇತಾ ಅವರ ಸಮ್ಮುಖದಲ್ಲಿ ನಡೆದ ಶಾಂತಿ ಸಭೆಯಲ್ಲಿ ಗ್ರಾಮದ ಸವರ್ಣಿಯರು ಹಾಗೂ ದಲಿತರು ತಮ್ಮೊಳಗಿನ ವೈಮನಸ್ಸನ್ನು ಮರೆತು ಪ್ರೀತಿ, ವಿಶ್ವಾಸದಿಂದ ಜೊತೆಗೂಡಿ ದೇವರ ಪೂಜೆ ಮಾಡುವ ನಿರ್ಣಯಕ್ಕೆ ಬಂದರು.

Villagers open Chamundeshwari temple in SriRangapatna after 18 Years of conflict


ನಂತರ ಚಾಮುಂಡೇಶ್ವರಿ ಹಾಗೂ ಈಶ್ವರನ ದೇವಸ್ಥಾನ ಪ್ರವೇಶಿಸಿದ ಗ್ರಾಮದ ಎಲ್ಲಾ ಸಮುದಾಯದ ಜನರು ಇನ್ನು ಮುಂದೆ ನಮ್ಮಲ್ಲಿರುವ ದ್ವೇಷವನ್ನು ಮರೆತು ಒಂದಾಗಿ ಹೋಗುವುದಾಗಿ ಹೇಳಿದರು.

ಶಾಸಕ ರವೀಂದ್ರ ಶ್ರಿಕಂಠಯ್ಯ ಹಾಗೂ ತಹಸೀಲ್ದಾರ್ ಶ್ವೇತಾ ಅವರ ಪ್ರಯತ್ನಕ್ಕೆ ಎರಡೂ ಸಮುದಾಯದ ಮುಖಂಡರು ಮತ್ತು ಗ್ರಾಮಸ್ಥರು ಎರಡೂ ಕೈಗಳೆತ್ತಿ ಹರ್ಷದಿಂದ ನಾವು ಒಂದಾಗಿದ್ದೇವೆ. ಪೂಜೆ, ಧಾರ್ಮಿಕ ಕಾರ್ಯಕ್ರಮದಲ್ಲಿ ಎಲ್ಲ ಸಮುದಾಯದವರೂ ಪಾಲ್ಗೊಳ್ಳುತ್ತೇವೆ ಎಂದು ಕೂಗಿದರು.

Villagers open Chamundeshwari temple in SriRangapatna after 18 Years of conflict

ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಮಧ್ಯ ಪ್ರವೇಶದಿಂದಾಗಿ ಕಳೆದ 18 ವರ್ಷಗಳಿಂದ ಬಾಗಿಲು ಮುಚ್ಚಿದ್ದ ದೇವಾಲಯಗಳು ಬಾಗಿಲು ತೆರೆದು ಭಕ್ತರ ಪೂಜೆಗೆ ಅನುವು ಮಾಡಿಕೊಡುವ ಮೂಲಕ ಜಾತಿ ಸಂಘರ್ಷಕ್ಕೆ ತೆರೆ ಎಳೆಯಲಾಯಿತು.

Recommended Video

      ಚಿರಂಜೀವಿ‌ ಹೆಸರು ಬದಲಾಯಿಸುವುದರಿಂದ ಹಣೆಬರಹ ಬದಲಾಗುತ್ತಾ? ನೆಟ್ಟಿಗರ ಕಾಮೆಂಟ್ ಏನು? | OneIndia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+