ಮಂಡ್ಯ: ನೀತಿ ಸಂಹಿತೆ ಜಾರಿಯಲ್ಲಿದ್ದರೂ ಎಲ್ಲಲ್ಲೂ ಸರ್ಕಾರಿ ಜಾಹೀರಾತು!
ಮಂಡ್ಯ, ಏಪ್ರಿಲ್ 11: ಚುನಾವಣಾ ನೀತಿ ಸಂಹಿತೆ ಜಾರಿಯಾದ ತಕ್ಷಣದಿಂದಲೇ ಎಲ್ಲೆಡೆ ಹಾಕಲಾಗಿದ್ದ ಜಾಹೀರಾತುಫಲಕಗಳನ್ನು ತೆರವುಗೊಳಿಸಲಾಗಿದೆಯಾದರೂ ಮಂಡ್ಯ ವೈದ್ಯಕೀಯ ಶಿಕ್ಷಣ ಸಂಸ್ಥೆ ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ಅಳವಡಿಸಿರುವ ಜಾಹೀರಾತು ಫಲಕ ಮಾತ್ರ ಚುನಾವಣಾಧಿಕಾರಿಗಳ ಕಣ್ಣಿಗೆ ಬೀಳದಿರುವುದು ಅಚ್ಚರಿಗೆ ಕಾರಣವಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
2018ರ ವಿಧಾನಸಭಾ ಚುನಾವಣೆ ನಿಮಿತ್ತ ರಾಜ್ಯದ ಎಲ್ಲೆಡೆ ಸರ್ಕಾರದ ಜಾಹೀರಾತುಗಳನ್ನು ತ್ವರಿತವಾಗಿ ತೆರವುಗೊಳಿಸಿದ್ದರೂ ಇಲ್ಲಿ ಮಾತ್ರ ಏಕೆ ತೆರವುಗೊಳಿಸಿಲ್ಲ? ಇದೇನು ನಿರ್ಜನ ಪ್ರದೇಶವಂತೂ ಅಲ್ಲವೇ ಅಲ್ಲ. ಹೀಗಿದ್ದರೂ ಯಾರ ಕಣ್ಣಿಗೂ ಬಿದ್ದಿಲ್ಲವೆ ಎಂದು ಜಾಹೀರಾತು ಫಲಕವನ್ನು ನೋಡಿ ಜನ ಪ್ರಶ್ನೆ ಕೇಳುತ್ತಿದ್ದಾರೆ.
ಹಾಗೆನೋಡಿದರೆ ಜಿಲ್ಲಾಸ್ಪತ್ರೆಗೆ ನಿತ್ಯ ಸಾವಿರಾರು ಜನತೆ ಚಿಕಿತ್ಸೆ, ರೋಗಿಗಳನ್ನು ನೋಡಲು ಬರುತ್ತಾರೆ. ಹಾಗೆ ಬಂದವರು ಈ ಜಾಹೀರಾತನ್ನು ನೋಡಿಯೇ ಇರುತ್ತಾರೆ. ಹೀಗಿದ್ದೂ ತೆರವುಗೊಳಿಸದೆ ಇರುವುದು ನೀತಿ ಸಂಹಿತೆ ಉಲ್ಲಂಘನೆ ಎಂಬ ಮಾತು ಕೇಳಿ ಬರುತ್ತಿದೆ.

ನಗರಕ್ಕೊಂದು ಸುತ್ತು ಹೊಡೆದರೆ ಇಂತಹ ಅವಾಂತರಗಳು ಅಲ್ಲಲ್ಲಿ ಕಂಡು ಬರುತ್ತಿದೆ. ಆರ್.ಪಿ. ರಸ್ತೆಯಲ್ಲಿ ಹಿಂದೆ ಇದ್ದ ಕಾಂಗ್ರೆಸ್ ಕಚೇರಿಯ ಮೇಲೆ ಪಕ್ಷದ ಹೆಸರಿದೆ. ಇನ್ನು ಮುಂದುವರೆದು ವಿವಿಧೆಡೆ ಈ ಬಾರಿ ಬಿಜೆಪಿ ಎಂದು ಬರೆದಿದ್ದರ ಮೇಲೆ ಬಣ್ಣ ಬಳಿಯಲಾಗಿದೆ. ಆದರೆ, ಕಾಂಗ್ರೆಸ್ ಕಚೇರಿಯ ಮೇಲೆ ಬಣ್ಣ ಬಳಿಯದೆ ಹಾಗೆಯೇ ಬಿಡಲಾಗಿದೆ. ಕಾವೇರಿ ವನದ ಅಕ್ಕಪಕ್ಕದಲ್ಲಿ ಕಲ್ಲುಬೆಂಚುಗಳ ಮೇಲೆ ಎಸ್.ಎಂ.ಕೃಷ್ಣ ಅನುದಾನ ಎಂದು ಬರೆಯಲಾಗಿದೆ. ಒಟ್ಟಾರೆ ಒಂದಷ್ಟು ಚುನಾವಣಾನೀತಿ ಉಲ್ಲಂಘನೆಗೆ ಹತ್ತಿರವಾಗಿರುವ ಕೆಲವೊಂದು ನಿದರ್ಶನಗಳು ಕಣ್ಣಿಗೆ ಕಾಣುತ್ತಿದ್ದು, ಸಂಬಂಧಿಸಿದವರು ಇತ್ತ ಗಮನಹರಿಸಬೇಕಾದ ಅಗತ್ಯವಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications