ಮಂಡ್ಯ: ನೀತಿ ಸಂಹಿತೆ ಜಾರಿಯಲ್ಲಿದ್ದರೂ ಎಲ್ಲಲ್ಲೂ ಸರ್ಕಾರಿ ಜಾಹೀರಾತು!
ಮಂಡ್ಯ, ಏಪ್ರಿಲ್ 11: ಚುನಾವಣಾ ನೀತಿ ಸಂಹಿತೆ ಜಾರಿಯಾದ ತಕ್ಷಣದಿಂದಲೇ ಎಲ್ಲೆಡೆ ಹಾಕಲಾಗಿದ್ದ ಜಾಹೀರಾತುಫಲಕಗಳನ್ನು ತೆರವುಗೊಳಿಸಲಾಗಿದೆಯಾದರೂ ಮಂಡ್ಯ ವೈದ್ಯಕೀಯ ಶಿಕ್ಷಣ ಸಂಸ್ಥೆ ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ಅಳವಡಿಸಿರುವ ಜಾಹೀರಾತು ಫಲಕ ಮಾತ್ರ ಚುನಾವಣಾಧಿಕಾರಿಗಳ ಕಣ್ಣಿಗೆ ಬೀಳದಿರುವುದು ಅಚ್ಚರಿಗೆ ಕಾರಣವಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
2018ರ ವಿಧಾನಸಭಾ ಚುನಾವಣೆ ನಿಮಿತ್ತ ರಾಜ್ಯದ ಎಲ್ಲೆಡೆ ಸರ್ಕಾರದ ಜಾಹೀರಾತುಗಳನ್ನು ತ್ವರಿತವಾಗಿ ತೆರವುಗೊಳಿಸಿದ್ದರೂ ಇಲ್ಲಿ ಮಾತ್ರ ಏಕೆ ತೆರವುಗೊಳಿಸಿಲ್ಲ? ಇದೇನು ನಿರ್ಜನ ಪ್ರದೇಶವಂತೂ ಅಲ್ಲವೇ ಅಲ್ಲ. ಹೀಗಿದ್ದರೂ ಯಾರ ಕಣ್ಣಿಗೂ ಬಿದ್ದಿಲ್ಲವೆ ಎಂದು ಜಾಹೀರಾತು ಫಲಕವನ್ನು ನೋಡಿ ಜನ ಪ್ರಶ್ನೆ ಕೇಳುತ್ತಿದ್ದಾರೆ.
ಹಾಗೆನೋಡಿದರೆ ಜಿಲ್ಲಾಸ್ಪತ್ರೆಗೆ ನಿತ್ಯ ಸಾವಿರಾರು ಜನತೆ ಚಿಕಿತ್ಸೆ, ರೋಗಿಗಳನ್ನು ನೋಡಲು ಬರುತ್ತಾರೆ. ಹಾಗೆ ಬಂದವರು ಈ ಜಾಹೀರಾತನ್ನು ನೋಡಿಯೇ ಇರುತ್ತಾರೆ. ಹೀಗಿದ್ದೂ ತೆರವುಗೊಳಿಸದೆ ಇರುವುದು ನೀತಿ ಸಂಹಿತೆ ಉಲ್ಲಂಘನೆ ಎಂಬ ಮಾತು ಕೇಳಿ ಬರುತ್ತಿದೆ.

ನಗರಕ್ಕೊಂದು ಸುತ್ತು ಹೊಡೆದರೆ ಇಂತಹ ಅವಾಂತರಗಳು ಅಲ್ಲಲ್ಲಿ ಕಂಡು ಬರುತ್ತಿದೆ. ಆರ್.ಪಿ. ರಸ್ತೆಯಲ್ಲಿ ಹಿಂದೆ ಇದ್ದ ಕಾಂಗ್ರೆಸ್ ಕಚೇರಿಯ ಮೇಲೆ ಪಕ್ಷದ ಹೆಸರಿದೆ. ಇನ್ನು ಮುಂದುವರೆದು ವಿವಿಧೆಡೆ ಈ ಬಾರಿ ಬಿಜೆಪಿ ಎಂದು ಬರೆದಿದ್ದರ ಮೇಲೆ ಬಣ್ಣ ಬಳಿಯಲಾಗಿದೆ. ಆದರೆ, ಕಾಂಗ್ರೆಸ್ ಕಚೇರಿಯ ಮೇಲೆ ಬಣ್ಣ ಬಳಿಯದೆ ಹಾಗೆಯೇ ಬಿಡಲಾಗಿದೆ. ಕಾವೇರಿ ವನದ ಅಕ್ಕಪಕ್ಕದಲ್ಲಿ ಕಲ್ಲುಬೆಂಚುಗಳ ಮೇಲೆ ಎಸ್.ಎಂ.ಕೃಷ್ಣ ಅನುದಾನ ಎಂದು ಬರೆಯಲಾಗಿದೆ. ಒಟ್ಟಾರೆ ಒಂದಷ್ಟು ಚುನಾವಣಾನೀತಿ ಉಲ್ಲಂಘನೆಗೆ ಹತ್ತಿರವಾಗಿರುವ ಕೆಲವೊಂದು ನಿದರ್ಶನಗಳು ಕಣ್ಣಿಗೆ ಕಾಣುತ್ತಿದ್ದು, ಸಂಬಂಧಿಸಿದವರು ಇತ್ತ ಗಮನಹರಿಸಬೇಕಾದ ಅಗತ್ಯವಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications