ಮಂಡ್ಯ: ಕೆರೆಕಟ್ಟೆಗೆ ನೀರು ತುಂಬಿಸಲು ಆಗ್ರಹಿಸಿ ಪ್ರತಿಭಟನೆ
ಮಂಡ್ಯ, ಜುಲೈ 14: ಹೇಮಾವತಿ ಜಲಾಶಯದಿಂದ ತಾಲೂಕಿನ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಬೇಕು ಹಾಗೂ 100 ವರ್ಷಗಳ ಹಿಂದಿನ ಕಾವೇರಿ ಒಪ್ಪಂದವನ್ನು ರದ್ದು ಮಾಡಿ ಹೊಸ ವೈಜ್ಞಾನಿಕ ಒಪ್ಪಂದವನ್ನು ರಚಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕೆ.ಆರ್.ಪೇಟೆಯಲ್ಲಿ ರೈತರು ತಮ್ಮ ಎತ್ತಿನ ಗಾಡಿಗಳು ಮತ್ತು ಜಾನುವಾರುಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ಪಟ್ಟಣದ ಪ್ರವಾಸಿ ಮಂದಿರ ವೃತ್ತಕ್ಕೆ ತಮ್ಮ ಎತ್ತಿನ ಗಾಡಿಗಳೊಂದಿಗೆ ಜಮಾಯಿಸಿದ ಸಾವಿರಾರು ಸಂಖ್ಯೆಯ ರೈತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಬಳಿಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ರೈತರು ಮಿನಿ ವಿಧಾನ ಸೌಧದ ಆವರಣದಲ್ಲಿ ಬೃಹತ್ ಬಹಿರಂಗ ಸಭೆ ನಡೆಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರು ಕಾವೇರಿ ಜಲ ವಿವಾದ ಆರಂಭಕ್ಕೆ ಮೊದಲೇ ರಾಜ ಮಹಾರಾಜರ ಕಾಲದಲ್ಲಿ ನಿರ್ಮಿಸಿದ ಮಂದಗರೆ, ಹೇಮಗಿರಿ ಮತ್ತು ಅಕ್ಕಿಹೆಬ್ಬಾಳು ನದಿ ಅಣೆಕಟ್ಟೆ ನಾಲೆಗಳು ತಾಲೂಕಿನಲ್ಲಿದ್ದು, ಈ ನಾಲೆಗಳ ನೀರು ಬಳಕೆದಾರರು ಹೇಮಾವತಿ ನದಿ ನೀರಿನ ಮೂಲ ಹಕ್ಕುದಾರರು.
ರಾಜ್ಯ ಸರಕಾರ ನದಿಯ ನೀರನ್ನು ಕಾಲುವೆಗಳಲ್ಲಿ ಹರಿಸದೆ ಹೇಮಾವತಿ ಜಲಾಶಯದಲ್ಲಿ ಸಂಗ್ರಹಿಸಿಡುವ ಮೂಲಕ ರೈತರ ನೀರಿನ ಹಕ್ಕನ್ನು ಕಿತ್ತು ತಮಿಳುನಾಡಿಗೆ ಕೊಡುಗೆಯಾಗಿ ನೀರುತ್ತಿದೆ ಹಾಗಾಗಿ ತಕ್ಷಣವೇ ನದಿ ಅಣೆಕಟ್ಟೆಯ ನಾಲೆಗಳಲ್ಲಿ ನೀರು ಹರಿಸಬೇಕು. ಹೇಮಾವತಿ ನೀರಿನಿಂದ ತಾಲೂಕಿನ ಕೆರೆ-ಕಟ್ಟೆಗಳನ್ನು ತುಂಬಿಸಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಬೇಕೆಂದು ಒತ್ತಾಯಿಸಿದರು.

ರಾಜ್ಯದಲ್ಲಿ ಇಂದು ಮಳೆಯಾಗದಿದ್ದರೂ ಮೋಡ ಕವಿದ ವಾತಾವರಣವಿದ್ದು ಇದು ಮೋಡ ಬಿತ್ತನೆ ಅತ್ಯಂತ ಸೂಕ್ತವಾಗಿದೆ. ಸೂಕ್ತ ಕಾಲದಲ್ಲಿ ಮೋಡ ಬಿತ್ತನೆ ಮಾಡದೆ ಮೋಡಗಳು ಖಾಲಿಯಾದ ಅನಂತರ ನಮ್ಮ ಸರಕಾರಗಳು ಮೋಡ ಬಿತ್ತನೆಗೆ ಮುಂದಾಗುವ ಮೂಲಕ ಸಾರ್ವಜನಿಕರ ಹಣವನ್ನು ಲೂಟಿ ಹೊಡೆಯುತ್ತಿವೆ ಎಂದು ಪುಟ್ಟಣ್ಣಯ್ಯ ಕಿಡಿ ಕಾರಿದರು.
ಪ್ರತಿಭಟನೆಯ ಅಂಗವಾಗಿ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಎತ್ತಿನಗಾಡಿಗಳೊಂದಿಗೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ಚಳವಳಿ ನಡೆಸಿದ ಸಾವಿರಾರು ಪ್ರತಿಭಟನಾಕಾರರು ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಿ, ತಾಲೂಕಿಗೆ ನೀರು ಹರಿಸಿ ಎಂದು ಘೋಷಣೆಗಳನ್ನು ಕೂಗುತ್ತಾ ತಾಲೂಕು ಕಚೇರಿ ವರೆಗೆ ಬೃಹತ್ ಮೆರವಣಿಗೆ ನಡೆಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications