KRS Water Level: ಬೆಂಗಳೂರಿಗೆ ನೀರು ಕೊಡುವ ಕೆಆರ್ಎಸ್ನಲ್ಲಿ ಎಷ್ಟು ನೀರಿದೆ?
ಬೆಂಗಳೂರು, ಮಾರ್ಚ್ 11: ರಾಜ್ಯದಲ್ಲಿ ಈ ಬಾರಿ ನಿರೀಕ್ಷೆಗೂ ಮೊದಲೇ ಬರ ಆವರಿಸಿದೆ. ನದಿಗಳು ಬರಿದಾಗುತ್ತಿದೆ, ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಗರಿಷ್ಠ ಇಳಿಕೆಯಾಗಿದೆ. ಕುಡಿಯುವ ನೀರಿಗಾಗಿ ಜನ ಪರದಾಡುತ್ತಿದ್ದಾರೆ, ಇನ್ನೂ ಬೆಂಗಳೂರು, ಮೈಸೂರಿನಂತಹ ಬೃಹತ್ ನಗರಗಳಲ್ಲಿ ಜನ ಬಳಕೆಗೆ ನೀರು ಪೂರೈಸುವುದೇ ಸವಾಲಾಗಿದೆ.
ರಾಜ್ಯದಲ್ಲಿ ನೀರಿನ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಂಗಳೂರು ಸೇರಿದಂತೆ ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ನಲ್ಲೂ ದಿನದಿಂದ ದಿನಕ್ಕೆ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ನೀರು ಕಳ್ಳತನ, ಅಕ್ರಮ ನೀರು ಸರಬರಾಜು, ತಮಿಳುನಾಡಿಗೆ ನೀರು ಬಿಡುವುದು ಈ ಎಲ್ಲಾ ಸಮಸ್ಯೆಗಳಿಂದ ಕೆಆರ್ಎಸ್ ನೀರಿನ ಪ್ರಮಾಣ ಕಡಿಮೆಯಾಗಿದೆ.

ಕರ್ನಾಟಕದಲ್ಲಿಯೇ ನೀರಿಲ್ಲ, ಜನ ನೀರಿಗಾಗಿ ಪರದಾಡುತ್ತಿದ್ದಾರೆ. ಇಂತಹ ಸಂಕಷ್ಟ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ಕೆಆರ್ಎಸ್ ಡ್ಯಾಂನ ಹೊರ ಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ ಎನ್ನುವ ಆಕ್ರೋಶ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ಕೆಆರ್ಎಸ್ ಡ್ಯಾಂನ ಹೊರ ಹರಿವಿನ ಪ್ರಮಾಣ ಇಳಿಕೆಯಾಗಿದ್ದು, 1,468 ಕ್ಯೂಸೆಕ್ ಹೊರ ಹರಿವು ಇಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೆಆರ್ಎಸ್ ಡ್ಯಾಂನ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.
ಕೆಆರ್ಎಸ್ ಡ್ಯಾಂನ ಗರಿಷ್ಠ ಮಟ್ಟ- 124.80 ಅಡಿಗಳು
ಕೆಆರ್ಎಸ್ ಡ್ಯಾಂನ ಇಂದಿನ ಮಟ್ಟ- 88.35 ಅಡಿಗಳು
ಕೆಆರ್ಎಸ್ ಡ್ಯಾಂನ ಇಂದಿನ ಒಳಹರಿವು- 169 ಕ್ಯೂಸೆಕ್ನಷ್ಟಿದೆ.
ಕೆಆರ್ಎಸ್ ಡ್ಯಾಂನ ಹೊರಹರಿವು-1468 ಕ್ಯೂಸೆಕ್ನಷ್ಟಿದೆ.
ಕೆಆರ್ಎಸ್ ಡ್ಯಾಂನ ಹೊರಹರಿವಿನ ವಿವರ
ಶಿವ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಗರಿಷ್ಠ ಮಟ್ಟದಲ್ಲಿ ಇಳಿಕೆಯಾಗಿತ್ತು. ಇದರಿಂದ ಬೆಂಗಳೂರಿಗೆ ನೀರಿನ ಸಮಸ್ಯೆ ಉಂಟಾಗಿತ್ತು. ಹೀಗಾಗಿ ಸಮಸ್ಯೆ ಸರಿಪಡಿಸಲು ಅಧಿಕಾರಿಗಳು ಕೆಆಎರ್ಎಸ್ನಿಂದ 4,579 ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದರು. ಸದ್ಯ ಶಿವ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಕೆಆಎರ್ಎಸ್ ಹೊರ ಹರಿವು ಇಳಿಕೆಯಾಗಿದೆ ಎನ್ನಲಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications