ತ್ರಿಶಂಕು ಸ್ಥಿತಿಯಲ್ಲಿ ಬಿಜೆಪಿ ಶಾಸಕ ನಾರಾಯಣ ಗೌಡ: ಸಚಿವರ ಮುಂದಿನ ನಡೆಯೇನು..?
ಮುಂದಿನ ಚುನಾವಣೆ ವೇಳೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರೆ ಸುಲಭವಾಗಿ ಗೆಲುವು ಸಾಧಿಸಿ ಇನ್ನು ಐದು ವರ್ಷಗಳ ಕಾಲ ನೆಮ್ಮದಿಯಾಗಿರಬಹುದು ಎಂಬ ಚಿಂತನೆಯಲ್ಲಿದ್ದ ನಾರಾಯಣಗೌಡರಿಗೆ ಕ್ಷೇತ್ರದ ಕಾಂಗ್ರೆಸ್ಸಿಗರು ಸಿಡಿದೆದ್ದಿರುವುದು ಚಿಂತೆ ಮಾಡುವಂತಾಗಿದೆ.
ಮಂಡ್ಯ, ಮಾರ್ಚ್ 8: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಸಚಿವರೂ ಆಗಿರುವ ಡಾ.ನಾರಾಯಣಗೌಡರು ಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ವಿರೋಧದ ನಡುವೆಯೂ ಕಮಲ ಬಿಟ್ಟು ಕೈ ಹಿಡಿತ್ತಾರಾ? ಎಂಬ ವಿಚಾರ ಮಂಡ್ಯ ರಾಜಕಾರಣದಲ್ಲಿ ಭಾರಿ ಸುದ್ದಿ ಮಾಡುತ್ತಿದ್ದು, ರಾಜ್ಯದ ಜನ ಮುಂದೆ ಆಗಬಹುದಾದ ರಾಜಕೀಯ ಬೆಳವಣಿಗೆಯತ್ತ ದೃಷ್ಟಿ ನೆಟ್ಟಿದ್ದಾರೆ.
ಅವಕಾಶವಾದಿ ರಾಜಕಾರಣ ಮಾಡಿಕೊಂಡು ಬಂದಿರುವ ಸಚಿವ ಡಾ.ನಾರಾಯಣಗೌಡ ಅವರು ಮುಂದೇನಾದರೂ ಬಿಜೆಪಿ ಸೋಲು ಕಂಡರೆ ತಮ್ಮ ರಾಜಕೀಯ ಭವಿಷ್ಯಕ್ಕೆ ಧಕ್ಕೆ ಯಾಗಬಹುದು ಅಧಿಕಾರ ಕೈ ತಪ್ಪಿ ಹೋಗಬಹುದು ಎಂಬ ಲೆಕ್ಕಾಚಾರದಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ನಿರ್ಧಾರಕ್ಕೆ ಬಂದಿದ್ದಾರೆ. ಆದರೆ ಕ್ಷೇತ್ರದಲ್ಲಿ ಭುಗಿಲೆದ್ದಿರುವ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸಚಿವ ನಾರಾಯಣ ಗೌಡ ಮತ್ತು ಕಾಂಗ್ರೆಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಮುಂದಿನ ಚುನಾವಣೆ ವೇಳೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರೆ ಸುಲಭವಾಗಿ ಗೆಲುವು ಸಾಧಿಸಿ ಇನ್ನು ಐದು ವರ್ಷಗಳ ಕಾಲ ನೆಮ್ಮದಿಯಾಗಿರಬಹುದು ಎಂಬ ಚಿಂತನೆಯಲ್ಲಿದ್ದ ನಾರಾಯಣಗೌಡರಿಗೆ ಕ್ಷೇತ್ರದ ಕಾಂಗ್ರೆಸ್ಸಿಗರು ಸಿಡಿದೆದ್ದಿರುವುದು ಚಿಂತೆ ಮಾಡುವಂತಾಗಿದೆ. ಒಂದು ವೇಳೆ ಕ್ಷೇತ್ರದ ಕಾಂಗ್ರೆಸ್ ಮುಖಂಡರ ವಿರೋಧವನ್ನು ಮೀರಿ ರಾಜ್ಯನಾಯಕರು ನಾರಾಯಣಗೌಡರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡರೂ ಅದರ ಪರಿಣಾಮಗಳು ಪಕ್ಷ ಮತ್ತು ನಾರಾಯಣಗೌಡರ ಮೇಲೆ ಆಗುವುದರಲ್ಲಿ ಎರಡು ಮಾತಿಲ್ಲ.
ಕಾಂಗ್ರೆಸ್ ಮುಖಂಡರ ಆಕ್ರೋಶಕ್ಕೆ ಕಾರಣವಾದ ನಾರಾಯಣಗೌಡ ಹೇಳಿಕೆ
ಬಿಎಸ್ಪಿ, ಜೆಡಿಎಸ್ ಮತ್ತು ಬಿಜೆಪಿ ಹೀಗೆ ಪಕ್ಷದಿಂದ ಪಕ್ಷಕ್ಕೆ ಹಾರುತ್ತಾ ರಾಜಕೀಯ ಮಾಡಿಕೊಂಡು ಬಂದ ನಾರಾಯಣಗೌಡರು ಅವಕಾಶವಾದಿ ರಾಜಕಾರಣಿಯಾಗಿ ಅಧಿಕಾರ ಅನುಭವಿಸಿದರು. ಈ ನಡುವೆ ಕ್ಷೇತ್ರದಲ್ಲಿ ಬಿಜೆಪಿಯನ್ನು ಗಟ್ಟಿಗೊಳಿಸುವ ಕೆಲಸವನ್ನು ಕೂಡ ಮಾಡಿದರು. ಜಿಲ್ಲೆಯಲ್ಲಿ ಕಮಲ ಅರಳಿಸುವ ಸಂಕಲ್ಪ ಮಾಡಿದ ಅವರು ಇತ್ತೀಚೆಗೆ ಪಕ್ಷದಲ್ಲಿ ತಟಸ್ಥರಾಗಿ ಉಳಿಯುವ ಪ್ರಯತ್ನ ಮಾಡಿದರಲ್ಲದೆ, ಕಾಂಗ್ರೆಸ್ ನತ್ತ ವಾಲತೊಡಗಿದ್ದರು.

ಕಾಂಗ್ರೆಸ್ ನಾಯಕರು ಕೂಡ ಆಪರೇಷನ್ ಹಸ್ತದ ಮೂಲಕ ಬಿಜೆಪಿಗೆ ಟಾಂಗ್ ನೀಡಬಹುದು ಎಂಬ ಚಿಂತನೆಯಲ್ಲಿದ್ದರು. ನಾರಾಯಣಗೌಡರು ಪಕ್ಷಕ್ಕೆ ಬರುತ್ತಾರೆ ಎಂಬ ಖುಷಿಯಲ್ಲಿಯೇ ಬಿಜೆಪಿಯ ಹಲವು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರುತ್ತಾರೆ ಎಂಬಿತ್ಯಾದಿ ಮಾತುಗಳನ್ನಾಡಿದರು. ಆದರೆ ಯಾವಾಗ ನಾರಾಯಣಗೌಡರು ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ನಲ್ಲಿ ಸಮರ್ಥ ನಾಯಕರಿಲ್ಲ ಹೀಗಾಗಿ ನನಗೆ ಕಾಂಗ್ರೆಸ್ನಿಂದ ಬುಲಾವ್ ಬಂದಿದೆ ಎಂಬ ಹೇಳಿಕೆ ನೀಡಿದರುವು ಕ್ಷೇತ್ರದ ಕಾಂಗ್ರೆಸ್ ನಾಯಕರು ಸೇರಿದಂತೆ ಕಾರ್ಯಕರ್ತರು ಆಕ್ರೋಶ ಭರಿತರಾದರು.
ಕೆ.ಆರ್ ಪೇಟೆ ಟಿಕೆಟ್ಗಾಗಿ ಆರು ಜನರಿಂದ ಅರ್ಜಿ
ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಆರು ಮಂದಿ ಟಿಕೆಟ್ ಬಯಸಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಹೀಗಿರುವಾಗ ಈ ಆರು ಮಂದಿಯನ್ನು ಬದಿಗೆ ಸರಿಸಿ ಪಕ್ಷಾಂತರ ಮಾಡಿದ ನಾಯಕನಿಗೆ ಪಕ್ಷದಿಂದ ಟಿಕೆಟ್ ನೀಡಲು ಮುಂದಾಗುತ್ತಿರುವುದು ಪಕ್ಷಕ್ಕಾಗಿ ದುಡಿಯುತ್ತಾ ಬಂದ ನಾಯಕರು ಮತ್ತು ಕಾರ್ಯಕರ್ತರನ್ನು ಕೆರಳಿಸಿತು. ಇಂತಹದೊಂದು ಬೆಳವಣಿಗೆ ಕ್ಷೇತ್ರದಲ್ಲಿ ಆಗುತ್ತದೆ. ಕಾಂಗ್ರೆಸ್ ಕಾರ್ಯಕರ್ತರು ತಿರುಗಿ ಬೀಳುತ್ತಾರೆ ಎಂಬ ಸಣ್ಣ ಆಲೋಚನೆಯನ್ನು ಮಾಡದ ಡಾ.ನಾರಾಯಣಗೌಡ ಮತ್ತು ಕಾಂಗ್ರೆಸ್ನ ರಾಜ್ಯ ನಾಯಕರು ಇದೀಗ ಆಗಿರುವ ಬೆಳವಣಿಗೆಯಿಂದ ತಲೆಕೆಡಿಸಿಕೊಳ್ಳುವಂತಾಗಿದೆ.

ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಮಂಡ್ಯ ರಾಜಕಾರಣ ಸ್ವಲ್ಪ ಭಿನ್ನವಾಗಿದೆ. ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಅವರನ್ನು ಸೆಳೆಯುವ ತಂತ್ರಗಳನ್ನು ರಾಜಕೀಯ ಪಕ್ಷಗಳು ಮಾಡುತ್ತಲೇ ಬರುತ್ತಿವೆ. ಆದರೆ ಒಕ್ಕಲಿಗರು ಅದರಲ್ಲೂ ರೈತಾಪಿ ವರ್ಗವನ್ನು ಸೆಳೆದ ಜೆಡಿಎಸ್ ಜಿಲ್ಲೆಯಲ್ಲಿ ಪ್ರಾಬಲ್ಯ ಸಾಧಿಸಿತ್ತು. ಆದರೆ ಜೆಡಿಎಸ್ನಿಂದ ಬಿಜೆಪಿಯತ್ತ ಮುಖ ಮಾಡಿದ ನಾರಾಯಣಗೌಡರು ಜಿಲ್ಲೆಯಲ್ಲಿ ಬಿಜೆಪಿ ಖಾತೆ ತೆರೆದ ಶಾಸಕ ಎಂಬ ಖ್ಯಾತಿಗೊಳಗಾಗಿದ್ದರು.
ಚುನಾವಣೆ ಸಮೀಪಿಸುತ್ತಿದಂತೆ ಪಕ್ಷಾಂತರಕ್ಕೆ ಮುಂದಾದ ಸಚಿವ ನಾರಾಯಣ ಗೌಡ
ಇದೀಗ ಚುನಾವಣೆ ಹತ್ತಿರ ಬರುತ್ತಿರುವಾಗಲೇ ಬಿಜೆಪಿಯಿಂದ ಒಂದು ಕಾಲನ್ನು ಹೊರ ಇಟ್ಟ ನಾರಾಯಣ ಗೌಡರು ಕಾಂಗ್ರೆಸ್ ಭವ್ಯ ಸ್ವಾಗತದೊಂದಿಗೆ ತಮ್ಮನ್ನು ಬರಮಾಡಿಕೊಳ್ಳುತ್ತದೆ ಎಂಬ ಭ್ರಮೆಯಲ್ಲಿದ್ದರು. ಆದರೆ ಕ್ಷೇತ್ರದ ಕಾಂಗ್ರೆಸ್ನಲ್ಲಿ ಎದ್ದಿರುವ ಅಸಮಾಧಾನ ಇಕ್ಕಟ್ಟಿನಲ್ಲಿ ಸಿಲುಕುವಂತೆ ಮಾಡಿದೆ. ಇತ್ತ ಬಿಜೆಪಿ ನಾಯಕರು ಅವರನ್ನು ಅನುಮಾನದಿಂದ ನೋಡುವಂತಾಗಿದೆ. ಅತ್ತ ಕಾಂಗ್ರೆಸ್ಗೆ ಹೋದರೂ ಕ್ಷೇತ್ರದ ನಾಯಕರು ಮತ್ತು ಕಾರ್ಯಕರ್ತರ ವಿರೋಧ ಎದುರಿಸಿ ಗೆಲುವು ಸಾಧಿಸುವುದು ಅಷ್ಟೇನು ಸುಲಭವಲ್ಲ. ಜೊತೆಗೆ ಸೇಡು ತೀರಿಸಿಕೊಳ್ಳಲು ಜೆಡಿಎಸ್ ನಾಯಕರು ಕಾಯುತ್ತಿರುವುದು ಸುಳ್ಳೇನಲ್ಲ.
ಒಂದು ವೇಳೆ ಕ್ಷೇತ್ರದ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಹೆದರಿ ಬಿಜೆಪಿಯಲ್ಲಿ ಉಳಿದರೂ ಅವರಿಗೆ ಪಕ್ಷದಲ್ಲಿ ಮೊದಲಿನ ಗೌರವ ಸಿಗುವುದು ಕಷ್ಟವೇ. ಜತೆಗೆ ಅವರನ್ನು ಅನುಮಾನದಿಂದಲೇ ನೋಡುವುದಂತು ಖಚಿತ. ಸದ್ಯ ಇದೆಲ್ಲವನ್ನು ಗಮನಿಸಿದರೆ ಡಾ.ನಾರಾಯಣಗೌಡರು ತ್ರಿಶಂಕು ಸ್ಥಿತಿಯಲ್ಲಿದ್ದಾರೆ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಮುಂದೇನು ಎನ್ನುವುದನ್ನು ಕಾಲವೇ ಹೇಳಬೇಕಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications