ಗೊತ್ತಿಲ್ಲದ ವಿಷಯ ಮಾತಾಡುವ ರಮ್ಯಾಗೆ ಯಾಕ್ರೀ ಇಷ್ಟೊಂದು ಪ್ರಚಾರ?
ಮಂಡ್ಯ, ಆಗಸ್ಟ್ 31: ಮಾಜಿ ಸಂಸದೆ, ನಟಿ ರಮ್ಯಾ ಸೂಕ್ಷ್ಮ, ಗಂಭೀರವಾದ ವಿಷಯ ಮಾತನಾಡಿ ಜೇನುಗೂಡಿಗೆ ಕೈ ಹಾಕಿದಂತೆ ಕಾಣಿಸ್ತಿದ್ದಾರೆ. ಇವೆಲ್ಲ ಆಕೆಯ ತಿಳಿವಳಿಕೆ, ಆಲೋಚನೆಗೆ ಮೀರಿದ ಸಂಗತಿಗಳು. ಕೆಲವರಂತೂ ಆಕೆಯ ಹೇಳಿಕೆಗಳನ್ನೇ ಮುಂದು ಮಾಡಿಕೊಂಡು ರಮ್ಮಿ ಆಡ್ತಿದ್ದಾರೆ ಎಂದಿದ್ದಾರೆ ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ.
ಆರ್ ಎಸ್ ಎಸ್ ಹಾಗೂ ಸಂಘಪರಿವಾರದ ಬಗ್ಗೆ ರಮ್ಯಾ ನೀಡಿದ ಹೇಳಿಕೆಗಳ ಬಗ್ಗೆ ಮಾಧ್ಯಮಗಳ ಜೊತೆಗೆ ಬುಧವಾರ ಮಾತನಾಡುತ್ತಾ, ಸ್ವಾತಂತ್ರ್ಯ ಹೋರಾಟದ ಬಗ್ಗೆ ರಮ್ಯಾಗಿರುವ ತಿಳಿವಳಿಕೆ ಕೊರತೆ ಇದರಿಂದಲೇ ಗೊತ್ತಾಗುತ್ತೆ. ದೊಡ್ಡ ಸಂಖ್ಯೆಯಲ್ಲಿ ಜನರು ಹೋರಾಟದಲ್ಲಿ ಪಾಲ್ಗೊಂಡಿದ್ದರು. ಆಗ ಯಾವುದೇ ಸಂಘ-ಸಂಘಟನೆ ಬ್ಯಾನರ್ ಇರಲಿಲ್ಲ ಎಂಬುದು ಕೂಡ ಆಕೆಗೆ ಗೊತ್ತಿಲ್ಲ ಎಂದಿದ್ದಾರೆ.['ರಮ್ಯಾ ಅವರ ಹಿಂದಿನ ಜನ್ಮದ ಬಗ್ಗೆ ಗೊತ್ತಿಲ್ಲ']

ಈ ರಮ್ಯಾ ಯಾರ್ರೀ? ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಆಕೆಯ ಪ್ರಸ್ತುತತೆ ಏನ್ರೀ? ರಾಜ್ಯದ ಜನ ಸಾಮಾನ್ಯರು, ರೈತರ ಇಷ್ಟೊಂದು ಸಮಸ್ಯೆಗಳ ಮಧ್ಯೆ ಆಕೆ ಅಭಿಪ್ರಾಯಕ್ಕೆ ಯಾಕೆ ಅಷ್ಟೊಂದು ಪ್ರಾಮುಖ್ಯ? ಆಕೆಗೆ ಯಾವುದೇ ವಿಷಯದ ಬಗ್ಗೆ ತಿಳಿವಳಿಕೆಯೂ ಇಲ್ಲ. ಆದರೂ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ ಎಂದು ಪುಟ್ಟಣ್ಣಯ್ಯ ಟೀಕಿಸಿದ್ದಾರೆ.[ಸ್ವತಂತ್ರ ಸಂಗ್ರಾಮದಲ್ಲಿ ಬಿಜೆಪಿ, ಆರೆಸ್ಸೆಸ್ ಭಾಗವಹಿಸಿಲ್ಲ: ರಮ್ಯಾ]
ಆಕೆಯ ಮಾತುಗಳು ಹಾಗೂ ಅದರ ಸುತ್ತಲ ವಿವಾದಗಳ ಬಗ್ಗೆ ಮಾತನಾಡುವುದಕ್ಕಿಂತ, ರಮ್ಯಾಗೆ ನನ್ನದೊಂದು ಸಲಹೆ ಇದೆ: ಗೊತ್ತಿಲ್ಲದ ವಿಷಯ, ವಿವಾದಗಳ ಬಗ್ಗೆ ಮಾತನಾಡುವುದನ್ನು ನಿಲ್ಲಿಸಲಿ ಎಂದು ಅವರು ಹೇಳಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications