ಅಂಬರೀಶ್ ಈ ಬಾರಿಯ ಚುನಾವಣೆಗೆ ಸ್ಪರ್ಧಿಸುವುದಿಲ್ಲವೇ?
ಮಂಡ್ಯ, ಮಾರ್ಚ್ 28 : ಮಾಜಿ ಸಚಿವ, ಮಂಡ್ಯ ಕ್ಷೇತ್ರದ ಶಾಸಕ ಅಂಬರೀಶ್ ಈ ಬಾರಿಯ ಚುನಾವಣೆಗೆ ಸ್ಪರ್ಧಿಸುವುದಿಲ್ಲವೇ?. ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿಯೂ ಈ ಕುರಿತು ಚರ್ಚೆ ನಡೆಸಿದೆ.
2018ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು.
ಟಿಕೆಟ್ ಗಾಗಿ ಅರ್ಜಿ ಹಾಕದ ಅಂಬರೀಷ್, ಮುಂದಿನ ನಡೆ?
ಸಭೆಯಲ್ಲಿ ಅಂಬರೀಶ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆಯೇ?, ಇಲ್ಲವೇ ಎಂಬ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎ.ಕೃಷ್ಣಪ್ಪ ಅವರನ್ನು ಸಿದ್ದರಾಮಯ್ಯ ಈ ಕುರಿತು ಪ್ರಶ್ನಿಸಿದರು. 'ಅಂಬರೀಶ್ ಅವರನ್ನೇ ಕೇಳಿ ತೀರ್ಮಾನ ಮಾಡಿ' ಎಂದು ಅವರು ಉತ್ತರ ನೀಡಿದರು.
ಕೆಪಿಸಿಸಿ 2018ರ ಚುನಾವಣೆ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿತ್ತು. ಆಗ ಅಂಬರೀಶ್ ಅವರು ಅರ್ಜಿ ಸಲ್ಲಿಸಿಲ್ಲ. ಸಿದ್ದರಾಮಯ್ಯ ಅವರೇ ಅರ್ಜಿ ಸಲ್ಲಿಸಿದರೂ ಅಂಬರೀಶ್ ಮೌನವಾಗಿದ್ದಾರೆ.
ಕುತೂಹಲ ಕೆರಳಿಸಿರುವ ಮಂಡ್ಯದ ಗಂಡು ಯಾರಾಗಲಿದ್ದಾರೆ?
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಳೆದ ವಾರ ಮಂಡ್ಯಕ್ಕೆ ಭೇಟಿ ನೀಡಿದ್ದರು. ಆದರೆ, ರಾಹುಲ್ ಗಾಂಧಿ ಕಾರ್ಯಕ್ರಮಗಳಲ್ಲಿ ಅಂಬರೀಶ್ ಪಾಲ್ಗೊಂಡಿರಲಿಲ್ಲ. ಹೈಕಮಾಂಡ್ ಜೊತೆಗೂ ಟಿಕೆಟ್ ಬಗ್ಗೆ ಯಾವುದೇ ಚರ್ಚೆಯನ್ನು ನಡೆಸಿಲ್ಲ.
ಸಲ್ಲದ ಗಾಳಿ ಸುದ್ದಿಗಳಿಗೆ ಸೂಜಿ ಚುಚ್ಚಿದ ಅಂಬರೀಶ್
ಕೆಲವು ದಿನಗಳ ಹಿಂದೆ ಅಂಬರೀಶ್, 'ಮಂಡ್ಯದಲ್ಲಿ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದರೆ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ' ಎಂದು ಹೇಳಿಕೆ ನೀಡಿದ್ದರು. ಆದ್ದರಿಂದ, ಅಂಬರೀಶ್ ಅವರ ಮುಂದಿನ ನಡೆ ಏನು? ಎಂಬುದು ನಿಗೂಢವಾಗಿದೆ.