ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೂರು ನೀಡಲು ಹೋದ ಮಹಿಳೆಯನ್ನು ಮಂಚಕ್ಕೆ ಕರೆದ ಎಎಸ್‌ಐ

By ಬಿ.ಎಂ.ಲವಕುಮಾರ್
|
Google Oneindia Kannada News

ಮಂಡ್ಯ, ಜುಲೈ 26 : ದೂರು ನೀಡಲು ತೆರಳಿದ ಮಹಿಳೆಯೊಂದಿಗೆ ಠಾಣೆಯಲ್ಲಿದ್ದ ಎಎಸ್‍ಐಯೊಬ್ಬರು ಅನುಚಿತವಾಗಿ ವರ್ತಿಸಿರುವ ಘಟನೆ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಎಎಸ್‌ಐ ವಿರುದ್ಧ ತನಿಖೆ ನಡೆಸಲಾಗುತ್ತಿದೆ.

ಎಎಸ್‍ಐ ಶಾಂತಕುಮಾರ್ ಎಂಬುವವರು ನ್ಯಾಯ ಕೇಳಲು ಹೋದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಮಹಿಳೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಬೆಂಗಳೂರು: ಸೊಸೆಗೆ ಲೈಂಗಿಕ ಕಿರುಕುಳ: ಕಾಮುಕ ಮಾವ ಬಂಧನಬೆಂಗಳೂರು: ಸೊಸೆಗೆ ಲೈಂಗಿಕ ಕಿರುಕುಳ: ಕಾಮುಕ ಮಾವ ಬಂಧನ

ಎಸ್ಪಿ ರಾಧಿಕಾ ಅವರು ನೊಂದ ಮಹಿಳೆಯ ದೂರನ್ನು ಪಡೆದಿದ್ದು, ಈಗಾಗಲೇ ಡಿವೈಎಸ್ಪಿ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿದ್ದಾರೆ. ತನಿಖಾ ವರದಿ ಬಂದ ನಂತರ ಎಎಸ್‍ಐ ಶಾಂತಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Woman harassed by ASI in Nagamangala, Mandya

ಠಾಣೆಗೆ ಬಂದಿದ್ದರು : ತುಪ್ಪದಮಡು ಗ್ರಾಮದ ಲೀಲಾವತಿ ಎಂಬಾಕೆ ಪಟ್ಟಣದ ಹೋಟೆಲ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಹಪಾಠಿ ಮಹಿಳೆ ಕಷ್ಷಕ್ಕೆಂದು ಕೇಳಿದ್ದರಿಂದ ಚಿನ್ನದ ಸರ ನೀಡಿದ್ದರು. ಚಿನ್ನದ ಸರವನ್ನು ಗಿರವಿ ಇಟ್ಟುಕೊಂಡಿದ್ದ ಆ ಮಹಿಳೆ, ವಾಪಸ್ ಕೊಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಕಳೆದ ಜು.14ರಂದು ಲೀಲಾವತಿ ನಾಗಮಂಗಲ ಪಟ್ಟಣ ಠಾಣೆಗೆ ದೂರು ನೀಡಲು ತೆರಳಿದ್ದರು.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮದರಸಾದ ವೃದ್ಧ ಶಿಕ್ಷಕನ ಬಂಧನ!ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮದರಸಾದ ವೃದ್ಧ ಶಿಕ್ಷಕನ ಬಂಧನ!

ಆಗ ಠಾಣೆಯ ಎಎಸ್‍ಐ ಶಾಂತಕುಮಾರ್ ಕೇಸು ದಾಖಲಿಸಿಕೊಳ್ಳಬೇಕಾದಲ್ಲಿ ಒಂದು ದಿನ ತಮ್ಮ ಮನೆಗೆ ಬರುವಂತೆ ಬಲವಂತ ಮಾಡಿದ್ದಾನೆ. ಇದಕ್ಕೆ ಆಕೆ ನಿರಾಕರಿಸಿ ಠಾಣೆಯಿಂದ ಮನೆಗೆ ಹೋಗಿದ್ದಾರೆ. ಆದರೆ, ಆಕೆಯನ್ನು ಹಿಂಬಾಲಿಸಿಕೊಂಡು ಮನೆಗೇ ಹೋದ ಶಾಂತಕುಮಾರ್, ತನ್ನ ಜೊತೆ ಬರುವಂತೆ ಪೀಡಿಸಿದ್ದಾನೆ ಎಂದು ಆರೋಪಿಸಲಾಗಿದೆ.

English summary
Nagamangala based women alleged that Assistant Sub-Inspector of Police of the Nagamangala town police station harassing her sexually. Mandya SP order for probe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X