ಪಿಎಫ್ಐ ಬೆದರಿಕೆ:ಮೇಲುಕೋಟೆ ಶ್ರೀನಾರಾಯಣ ರಾಮಾನುಜೀಯರ್ಗೆ ವೈ ಮಾದರಿ ಭದ್ರತೆ
ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಎದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತ ಪಿಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ಆದೇಶಿಸಿದೆ ಎನ್ನಲಾಗಿದೆ.
ಮಂಡ್ಯ, ಫೆಬ್ರವರಿ 8: ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಎದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತ ಪಿಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ಆದೇಶಿಸಿದೆ ಎನ್ನಲಾಗಿದೆ.
ಯತಿರಾಜ ಜಿಯರ್ ಅವರಿಗೆ ಇತ್ತೀಚೆಗೆ ಪಿಎಫ್ಐ ಸಂಘಟನೆ ವಿಡಿಯೋ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಿರುವ ಸುದ್ದಿ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಬಿತ್ತರವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.
ಯದುಗಿರಿ ಯತಿರಾಜ ಮಠದ ಯತಿರಾಜ ಜಿಯರ್ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶಾಖ ಮಠದಲ್ಲಿ ವಾಸವಾಗಿದ್ದು, ಮೇಲುಕೋಟೆ ವೈರಮುಡಿ, ಶ್ರೀರಾಮಾನುಜ ತಿರುನಕ್ಷತ್ರ ಸೇರಿದಂತೆ ವಿಶೇಷ ದಿನಗಳನ್ನು ಮಾತ್ರ ಮೇಲುಕೋಟೆಗೆ ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ತೊಡಗುತ್ತಿದ್ದರು.

ಕಾಶ್ಮೀರದಲ್ಲಿ ಶ್ರೀಶಂಕರಾಚಾರ್ಯರು ಮತ್ತು ಶ್ರೀ ರಾಮಾನುಜಾಚಾರ್ಯರು ಸಂಚಾರ ಮಾಡಿದ್ದರಿಂದ ಶೃಂಗೇರಿ ಮಠದ ವತಿಯಿಂದ ಅಲ್ಲಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದರೆ, ಯತಿರಾಜ ಜಿಯರ್ ಅವರು ಭಾರತ ಸರ್ಕಾರದ ಅನುಮತಿ ಮೇರೆಗೆ ಅಲ್ಲಿಗೆ ತೆರಳಿ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು. ಆ ಸಮಯದಲ್ಲಿ ಕಾಶ್ಮೀರ ಸರಸ್ವತಿಯ ನೆಲೆವೀಡು. ಭಾರತದ ಅವಿಭಾಜ್ಯ ಅಂಗ ಎಂದು ರಾಮಾನು ಜಿಯರ್ ಹೇಳಿದ್ದರು.
ಈ ಮಾತಿನಿಂದ ಕೆರಳಿದ ಪಿ.ಎಫ್.ಐ. ಸಂಘಟನೆ ಅವರಿಗೆ ವಿಡಿಯೋ ಸಂದೇಶದ ಮೂಲಕ ಬೆದರಿಕೆ ಕರೆ ಹಾಕಿತ್ತು ಎಂದು ಹೇಳಲಾಗಿದೆ. ಈ ಕಾರಣದಿಂದ ರಾಮಾನುಜ ಜಿಯರ್ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ಭಾರತ ಸರ್ಕಾರ ಸೂಚಿಸಿದೆ.
ಶ್ರೀಗಳಿಗೆ ಈ ಹಿಂದೆಯೂ ಭದ್ರತೆ ನೀಡಿದ್ದು,ಇತ್ತೀಚೆಗೆ ಅದನ್ನು ವಾಪಸ್ಸು ಪಡೆಯಲಾಗಿತ್ತು. ಪಿಎಫ್ಐ ಸಂಘಟನೆಯ ಬೆದರಿಕೆಯ ಹಿನ್ನೆಲೆಯಲ್ಲಿ ಮತ್ತೆ ಅವರಿಗೆ ವೈ ಮಾದರಿ ಭದ್ರತೆ ಒದಗಿಸುವಂತೆ ಸೂಚಿಸಲಾಗಿದೆ. ಸದ್ಯ ಶ್ರೀಗಳು ತಮಿಳುನಾಡಿನಲ್ಲಿರುವ ಶಾಖಾ ಮಠಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ತಮಗೆ ಮಾಹಿತಿ ಇಲ್ಲ, ಕೇಂದ್ರ ಗುಪ್ತಚರ ಇಲಾಖೆಯಿಂದ ರಾಜ್ಯ ಗುಪ್ತಚರ ಇಲಾಖೆಗೆ ಸೂಚನೆ ಬರಲಿದ್ದು, ನಂತರ ನಮಗೆ ತಿಳಿಯಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ತಿಳಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications