ಪಿಎಫ್ಐ ಬೆದರಿಕೆ:ಮೇಲುಕೋಟೆ ಶ್ರೀನಾರಾಯಣ ರಾಮಾನುಜೀಯರ್ಗೆ ವೈ ಮಾದರಿ ಭದ್ರತೆ
ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಎದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತ ಪಿಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ಆದೇಶಿಸಿದೆ ಎನ್ನಲಾಗಿದೆ.
ಮಂಡ್ಯ, ಫೆಬ್ರವರಿ 8: ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಎದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತ ಪಿಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ಆದೇಶಿಸಿದೆ ಎನ್ನಲಾಗಿದೆ.
ಯತಿರಾಜ ಜಿಯರ್ ಅವರಿಗೆ ಇತ್ತೀಚೆಗೆ ಪಿಎಫ್ಐ ಸಂಘಟನೆ ವಿಡಿಯೋ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಿರುವ ಸುದ್ದಿ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಬಿತ್ತರವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.
ಯದುಗಿರಿ ಯತಿರಾಜ ಮಠದ ಯತಿರಾಜ ಜಿಯರ್ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶಾಖ ಮಠದಲ್ಲಿ ವಾಸವಾಗಿದ್ದು, ಮೇಲುಕೋಟೆ ವೈರಮುಡಿ, ಶ್ರೀರಾಮಾನುಜ ತಿರುನಕ್ಷತ್ರ ಸೇರಿದಂತೆ ವಿಶೇಷ ದಿನಗಳನ್ನು ಮಾತ್ರ ಮೇಲುಕೋಟೆಗೆ ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ತೊಡಗುತ್ತಿದ್ದರು.

ಕಾಶ್ಮೀರದಲ್ಲಿ ಶ್ರೀಶಂಕರಾಚಾರ್ಯರು ಮತ್ತು ಶ್ರೀ ರಾಮಾನುಜಾಚಾರ್ಯರು ಸಂಚಾರ ಮಾಡಿದ್ದರಿಂದ ಶೃಂಗೇರಿ ಮಠದ ವತಿಯಿಂದ ಅಲ್ಲಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದರೆ, ಯತಿರಾಜ ಜಿಯರ್ ಅವರು ಭಾರತ ಸರ್ಕಾರದ ಅನುಮತಿ ಮೇರೆಗೆ ಅಲ್ಲಿಗೆ ತೆರಳಿ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು. ಆ ಸಮಯದಲ್ಲಿ ಕಾಶ್ಮೀರ ಸರಸ್ವತಿಯ ನೆಲೆವೀಡು. ಭಾರತದ ಅವಿಭಾಜ್ಯ ಅಂಗ ಎಂದು ರಾಮಾನು ಜಿಯರ್ ಹೇಳಿದ್ದರು.
ಈ ಮಾತಿನಿಂದ ಕೆರಳಿದ ಪಿ.ಎಫ್.ಐ. ಸಂಘಟನೆ ಅವರಿಗೆ ವಿಡಿಯೋ ಸಂದೇಶದ ಮೂಲಕ ಬೆದರಿಕೆ ಕರೆ ಹಾಕಿತ್ತು ಎಂದು ಹೇಳಲಾಗಿದೆ. ಈ ಕಾರಣದಿಂದ ರಾಮಾನುಜ ಜಿಯರ್ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ಭಾರತ ಸರ್ಕಾರ ಸೂಚಿಸಿದೆ.
ಶ್ರೀಗಳಿಗೆ ಈ ಹಿಂದೆಯೂ ಭದ್ರತೆ ನೀಡಿದ್ದು,ಇತ್ತೀಚೆಗೆ ಅದನ್ನು ವಾಪಸ್ಸು ಪಡೆಯಲಾಗಿತ್ತು. ಪಿಎಫ್ಐ ಸಂಘಟನೆಯ ಬೆದರಿಕೆಯ ಹಿನ್ನೆಲೆಯಲ್ಲಿ ಮತ್ತೆ ಅವರಿಗೆ ವೈ ಮಾದರಿ ಭದ್ರತೆ ಒದಗಿಸುವಂತೆ ಸೂಚಿಸಲಾಗಿದೆ. ಸದ್ಯ ಶ್ರೀಗಳು ತಮಿಳುನಾಡಿನಲ್ಲಿರುವ ಶಾಖಾ ಮಠಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ತಮಗೆ ಮಾಹಿತಿ ಇಲ್ಲ, ಕೇಂದ್ರ ಗುಪ್ತಚರ ಇಲಾಖೆಯಿಂದ ರಾಜ್ಯ ಗುಪ್ತಚರ ಇಲಾಖೆಗೆ ಸೂಚನೆ ಬರಲಿದ್ದು, ನಂತರ ನಮಗೆ ತಿಳಿಯಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ತಿಳಿಸಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications