ರಂಗನಾಥನ ಗೋಪುರ ಪ್ರತಿಷ್ಠಾಪನೆಗೆ ಯದುವೀರ್, ತ್ರಿಷಿಕಾ
ಶ್ರೀರಂಗಪಟ್ಟಣ, ಮಾರ್ಚ್ 03 : ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ ಗೋಪುರದ ಪುನರ್ ಪ್ರತಿಷ್ಠಾಪನಾ ಮಹೋತ್ಸವು ಮೇಲುಕೋಟೆ ಶ್ರೀಯದುಗಿರಿ ಯತಿರಾಜಮಠದ ಶ್ರೀ ನಾರಾಯಣ ರಾಮಾನುಜಜೀಯರ್ ರವರ ಉಪಸ್ಥಿತಿಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು
ಮೈಸೂರು ಸಾಮ್ರಾಜ್ಯದ ವೊಡೆಯರ್ ಕುಟುಂಬದ ಪ್ರತಿಮಾದೇವಿ ಶ್ರೀಕಂಠದತ್ತ ವೊಡೆಯರ್, ಯದುವೀರ್ ಕೃಷ್ಣದತ್ತ ಚಾಮರಾಜ ವೊಡೆಯರ್, ಅವರ ಧರ್ಮಪತ್ನಿ ತ್ರಿಷಿಕಾ ಯದುವೀರ್ ವೊಡೆಯರ್ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಕಳೆ ತಂದರು. [ಜ್ಯೋತಿಷ್ಯ ಪರಿಹಾರ: ದೇವಾಲಯದ ಗೋಪುರ ನೆರಳು ಮನೆ ಮೇಲೆ ಬಿದ್ದರೆ...]

ಸುಮಾರು ಒಂದು ವರ್ಷದ ಹಿಂದೆ ಗೋಪುರದ ಕಳಶ ಕೆಳಗೆ ಬಿದ್ದು ವಿಘ್ನವಾಗಿತ್ತು. ಇದನ್ನು ಸಕಲ ಸಾಂಪ್ರದಾಯಿಕ ಪರಂಪರೆಯ ರೀತಿಯಲ್ಲಿ ಯಜ್ಞ, ವಿಶೇಷ ಪೂಜೆ ಪುನಸ್ಕಾರಗಳಿಂದ ಗೋಪುರದ ಕಳಶವನ್ನು ಪ್ರತಿಷ್ಠಾಪಿಸಲಾಯಿತು. [ಜ್ಯೋತಿಷ್ಯ: ರಾಹು ಗ್ರಹವು ಕೊಟ್ಟರೆ ವರ, ಇಟ್ಟರೆ ಶಾಪ!]

ಮೇಲುಕೋಟೆ ಶ್ರೀಯದುಗಿರಿ ಯತಿರಾಜಮಠದ ಶ್ರೀ ನಾರಾಯಣ ರಾಮಾನುಜಜೀಯರ್ ರವರು ಆಶೀರ್ವಚನ ನೀಡುತ್ತ, ಈ ಬರಗಾಲದ ಸಮಯದಲ್ಲಿ ಶ್ರೀರಂಗನಾಥ ಹಾಗೂ ಶ್ರೀಮದ್ ರಾಮಾನುಜರ ಕೃಪೆಯಿಂದ ಎಲ್ಲ ಕಡೆ ಮಳೆ ಬೆಳೆಯಾಗಲೆಂದು ಭಗವಂತನಲ್ಲಿ ಪ್ರತಿದಿನವು ಪ್ರಾರ್ಥಿಸುತ್ತಿದ್ದೇವೆ ಎಂದರು.
30 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾದರು. ಅಷ್ಟು ಜನರಿಗೂ ದೇವಸ್ಥಾನದ ವತಿಯಿಂದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ಐತಿಹಾಸಿಕ ಸುಪ್ರಸಿದ್ದ ಮಹೋತ್ಸವಕ್ಕೆ ಉಸ್ತುವಾರಿ ಮಂತ್ರಿಯವರ ಗೈರು ಎದ್ದು ಕಾಣುತ್ತಿತ್ತು. [ಮೈಸೂರು ಅರಮನೆ ಆಯುಧ ಪೂಜೆಯ ವೈಖರಿ, ನಲಿದಾಡಿದ ಯದುವೀರ್ ಪತ್ನಿ ತ್ರಿಷಿಕಾ ಕುಮಾರಿ]
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications