Yaduveer: ಮಂಡ್ಯ ಮತ್ತು ಮೈಸೂರು ಸಂಸ್ಥಾನದ ನಡುವಿನ ನಂಟು ಎಂತಹದ್ದು ಗೊತ್ತಾ?, ಇಲ್ಲಿದೆ ವಿವರ
ಮಂಡ್ಯ, ಸೆಪ್ಟೆಂಬರ್, 11: ಮೈಸೂರು ಸಂಸ್ಥಾನದ ಮೂಲ ಬೇರು ಮಂಡ್ಯ ಜಿಲ್ಲೆಯಲ್ಲಿದೆ. ಹಾಗಾಗಿ ನಮಗೆ ಮಂಡ್ಯದೊಂದಿಗೆ ಹೃದಯಪೂರ್ವಕ ನಂಟಿದೆ ಎಂದು ಮೈಸೂರು ಅರಸು ಮನೆತನದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಮಾನದಿಂದ ನುಡಿದರು.
ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಮೀರಾ ಶಿವಲಿಂಗಯ್ಯ ಅವರು ರಚಿಸಿರುವ ಮರೆಯಲಾಗದ ಮಹಾನುಭಾವ ನಾಲ್ವಡಿ ಕೃಷ್ಣರಾಜ ಒಡೆಯರ್ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೈಸೂರು ಸಂಸ್ಥಾನದ ಮೊದಲ ರಾಜಧಾನಿ ಶ್ರೀರಂಗಪಟ್ಟಣ. ಇಲ್ಲಿಯೇ ನಮ್ಮ ಹಿರಿಯರಾದ ಮುಮ್ಮಡಿ ಕೃಷ್ಣರಾಜ ಒಡೆಯರ್, ಚಿಕ್ಕದೇವರಾಜ ಒಡೆಯರ್ ಸೇರಿದಂತೆ ಸಂಸ್ಥಾನದ ಕೀರ್ತಿ ಕಳಶರು ಜನಿಸಿ ಆಳ್ವಿಕೆ ಆರಂಭಿಸಿದರು ಎಂದು ಬಣ್ಣಿಸಿದರು.

ಶಿಂಷಾದಲ್ಲಿ ದೇಶದ ಪ್ರಪ್ರಥಮ ಜಲವಿದ್ಯುದಾಗಾರ ನಿರ್ಮಿಸಿದ್ದು ನಾಲ್ವಡಿಯವರಾದರೆ, ಮೈಷುಗರ್ ಕಾರ್ಖಾನೆ ಕೂಡ ಮೈಸೂರು ಸಂಸ್ಥಾನದ ಆಳ್ವಿಕೆಯಲ್ಲೇ ಜನ್ಮ ತಳೆದಿದ್ದು. ನಂತರದಲ್ಲಿ ಜಿಲ್ಲೆಯ ಜನರ ಜೀವನಾಡಿಯಾದ ಕನ್ನಂಬಾಡಿ ಅಣೆಕಟ್ಟು ನಿರ್ಮಾಣ ಕೂಡ ಒಡೆಯರ್ ಅವರ ಕೀರ್ತಿ ಕಳಶವಾಗಿವೆ. ಹಾಗಾಗಿ ಮಂಡ್ಯದಲ್ಲಿ ಮೈಸೂರು ಸಂಸ್ಥಾನದ ಬೇರು ಗಟ್ಟಿಯಾಗಿ ತಳವೂರಿದೆ ಎಂದು ಹೇಳಿದರು.
ನಾವು ನಮ್ಮ ಸಂಸ್ಥಾನದ ಬಗ್ಗೆ ಮಾತನಾಡುವುದಕ್ಕಿಂತ ಜನತೆ ಕೃತಜ್ಞತಾ ಪೂರ್ವಕವಾಗಿ ಸ್ಮರಿಸುವಂತಹ ಕೆಲಸ ಮಾಡಿರುವ ನಮ್ಮ ಹಿರಿಯರ ಮಾದರಿ ಪ್ರಸ್ತುತದಲ್ಲಿ ಮೈಸೂರು ಬ್ರಾಂಡ್ ಆಗಬೇಕಿದೆ. ಮೈಸೂರಿನ ರಾಜರು ನಿರ್ಮಿಸಿದ ಸಂಸ್ಥೆಗಳು ಶತಮಾನೋತ್ಸವ ಕಂಡಿದೆ. ಹಾಗಾಗಿ ಮೈಸೂರಿನ ಸುವರ್ಣ ಕಾಲ ಮತ್ತೆ ಮರುಕಳಿಸುವಂತೆ ನಾವುಗಳು ವರ್ತಮಾನದಲ್ಲಿ ನಾಲ್ವಡಿಯವರ ದೂರದೃಷ್ಠಿಯನ್ನು ಮಾದರಿಯಾಗಿಸಿಕೊಳ್ಳಬೇಕು ಎಂದರು.
ಮುಂದಿನ ಪೀಳಿಗೆಗೆ ನಾವು ಕೊಡಬಹುದಾದ ಕೊಡುಗೆ ಏನು? ಇಂದು ನಮ್ಮ ಪ್ರಕೃತಿ ವಿಕೃತಿಯಾಗುತ್ತಿದೆ. ಆಧುನಿಕ ಸೈಬರ್ ಯುಗ ಭದ್ರತೆಯಿಲ್ಲದೆ ನರಳುತ್ತಿದೆ. ಈ ಎರಡೂ ಅಂಶಗಳನ್ನು ಮುನ್ನೆಲೆಗೆ ತಂದು ಸಂರಕ್ಷಿಸಿದರೆ ಮಾತ್ರ ವಿಕೃತಿ ಹೋಗಿ ನೈಜ ಪ್ರಕೃತಿ ಬರಲಿದೆ. ಅದಕ್ಕಾಗಿ ಪ್ರತಿಯೊಬ್ಬರೂ ನಮ್ಮ ಪೂರ್ವಿಕರಂತೆ ಬಟ್ಟೆ ಬ್ಯಾಗ್ ಬಳಸುವುದನ್ನು ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್. ನಾಗರಾಜು ಕೃತಿ ಕುರಿತು ಮಾತನಾಡಿ, ಮೀರಾ ಶಿವಲಿಂಗಯ್ಯ ಅವರು ದೇಶದ ರಾಜರುಗಳ ಎಲ್ಲ ವಿಚಾರಗಳನ್ನೂ ಮಂಥನ ಮಾಡಿ ಅದರಲ್ಲಿ ನಾಲ್ವಡಿಯವರ ಕೊಡುಗೆಯನ್ನು ತುಲನೆ ಮಾಡಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಷ್ಟು ವೈಜ್ಞಾನಿಕ ಮತ್ತು ಆಧ್ಯಾತ್ಮಿಕವಾಗಿ ಆಳ್ವಿಕೆ ಮಾಡಿದ ಮತ್ತೊಬ್ಬ ರಾಜನಿಲ್ಲ ಎಂಬುದನ್ನು ತಮ್ಮ ಗಹನ ಸಂಶೋಧನೆಯಲ್ಲಿ ಕಂಡುಕೊಂಡು ಪ್ರತಿಯೊಂದು ಹಂತವನ್ನೂ ಕೂಡ ಸಾಧ್ಯಂತವಾಗಿ ನಿದರ್ಶನಗಳ ಮೂಲಕ ದಾಖಲಿಸುತ್ತಾ ಹೋಗಿದ್ದಾರೆ ಎಂದರು.
ಪಾಶ್ಚಿಮಾತ್ಯ ವಿದ್ವಾಂಸರೇ ಒಪ್ಪಿದಂತೆ ಕೃಷ್ಣರಾಜಭೂಪ ಮನೆ ಮನೆಗೆ ದೀಪ ಎಂಬ ಮನೆ ಮಾತು ಈಗ ವರ್ತಮಾನಕ್ಕೆ ಅನ್ವಯಿಸುತ್ತಿದೆ. ಲಾರ್ಡ್ ಕರ್ಜನ್ ಅವರು 1902ರಲ್ಲಿ ಕೃಷ್ಣರಾಜ ಒಡೆಯರ್ ಅವರ ಪಟ್ಟಾಭಿಷೇಕದ ಸಂದರ್ಭದಲ್ಲಿ ಮಾಡಿದ್ದ ಭಾಷಣವನ್ನು ನಾವೆಲ್ಲರೂ ತಿಳಿಯಬೇಕು. ಅದರಲ್ಲೂ ವಿದ್ಯಾರ್ಥಿ ಯುವಜನತೆ ಅರಿಯಬೇಕಾದ ಅಗತ್ಯವಿದೆ ಎಂದು ಬೆಳಕು ಚೆಲ್ಲಿದರು.
ಈ ವೇಳೆ ಖ್ಯಾತ ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಬಿ. ಜಯಪ್ರಕಾಶಗೌಡ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಅಧ್ಯಕ್ಷ ಪ್ರೊ. ಬಿ.ಶಿವಲಿಂಗಯ್ಯ, ಡಾ. ಹೇಮಾ, ವಿಸ್ಮಯ ಬುಕ್ಹೌಸ್ನ ಪ್ರಕಾಶ್ ಚಿಕ್ಕಪಾಳ್ಯ, ಜಾನಪದ ಜನ್ನೆಯರು ಸಂಘಟನೆಯ ಡಾ.ಕಾರ್ಕಳ್ಳಿ ಕೆಂಪಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications