ಶಾಸಕರ ಬೆಂಬಲಿಗರಿಂದ ಹಲ್ಲೆ: ಮನನೊಂದು ಯುವಕ ಆತ್ಮಹತ್ಯೆ
ಮಂಡ್ಯ, ಆಗಸ್ಟ್ 6: ಶ್ರೀರಂಗಪಟ್ಟಣ ಶಾಸಕರ ಬೆಂಬಲಿಗರಿಂದ ಹಲ್ಲೆಗೊಳಗಾದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೊಬ್ಬರಗಾಲ ಗ್ರಾಮದ ಬಳಿ ಭಾನುವಾರ ರಾತ್ರಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಬೆಂಬಲಿಗರು ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದ ಮನನೊಂದ ಯುವಕಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಲ್ಲೆಗೆ ಕಾರಣವೇನು ಎಂದು ತಿಳಿದುಬರುವ ಮೊದಲೇ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ನಾಗೇಂದ್ರ ಮೃತ ಯುವಕ, ಶಾಸಕರ ಏಳು ಮಂದಿ ಬೆಂಬಲಿಗರ ವಿರುದ್ಧ ಆತ್ಮಹತ್ಯೆ ಪ್ರಚೋದನೆಯಡಿ ದೂರು ದಾಖಲಿಸಲಾಗಿದ್ದು, ಬೆಂಬಲಿಗರಾದ ರವಿ, ಮಧು, ದಿಲೀಪ್ ಸೇರಿ ಏಳು ಜನರ ವಿರುದ್ಧ ಅರಕೆರೆ ಪೊಲೀಸರು ದೂರು ದಾಖಲಿಸಿದ್ದಾರೆ, ಅವರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಮೃತನ ದೇವನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.












Click it and Unblock the Notifications