ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನವರಿ 2ನೇ ವಾರದಿಂದ 5 ತಿಂಗಳು ಶಿರಾಡಿ ಘಾಟ್ ರಸ್ತೆ ಬಂದ್‌

|
Google Oneindia Kannada News

ಮಂಗಳೂರು, ಡಿಸೆಂಬರ್ 21: ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡನೇ ಹಂತದ ಕಾಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜನವರಿ 2ನೇ ವಾರದಿಂದ ಐದು ತಿಂಗಳ ಕಾಲ ಈ ಮಾರ್ಗದಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಜನವರಿಯಿಂದ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಬಂದ್ಜನವರಿಯಿಂದ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಬಂದ್

ಶಿರಾಡಿ ಘಾಟಿಯಲ್ಲಿ ಬಾಕಿ ಉಳಿದಿರುವ 12.38 ಕಿ.ಮೀ. ಉದ್ದದ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಜನವರಿ ಎರಡನೇ ವಾರದಿಂದ ಐದು ತಿಂಗಳ ಕಾಲ ಈ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿದೆ.

2nd phase road work: Shiradi Ghat road closed from January 2nd week

ಕಾಮಗಾರಿ ಕಾರಣದಿಂದ ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸುವ ಸಂಬಂಧ ಮುಂದಿನ ವಾರ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಈ ಬಗ್ಗೆ ಈಗಾಗಲೇ ಇತ್ತೀಚೆಗೆ ನಡೆದ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಮಾಹಿತಿ ನೀಡಿದ್ದಾರೆ.

English summary
The Shiradi Ghat stretch along the Bengaluru-Mangaluru highway will be closed for traffic from January 2nd week to 5 months for 2nd phase of road work.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X