ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡ: ಕಾಡು ಹಂದಿ ದಾಳಿಗೆ ವ್ಯಕ್ತಿ ಸಾವು

|
Google Oneindia Kannada News

ದಕ್ಷಿಣ ಕನ್ನಡ, ನವೆಂಬರ್ 02 : ಕಾಡು ಹಂದಿಯ ದಾಳಿಗೆ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪುತ್ತಿಲ ಗ್ರಾಮದ ಮಡಪ್ಪಾಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ .

ಮಂಗಳೂರು: ಕಟೀಲು ದುರ್ಗಾ ಪರಮೇಶ್ವರಿಗೆ ಮತ್ತೆ ಅವಮಾನಮಂಗಳೂರು: ಕಟೀಲು ದುರ್ಗಾ ಪರಮೇಶ್ವರಿಗೆ ಮತ್ತೆ ಅವಮಾನ

ಶಾಂತಪ್ಪ ಪೂಜಾರಿ ಅವರ ಪುತ್ರ ಗಂಗಾಧರ್ ಪೂಜಾರಿ (44) ಎಂಬವರು ಬಳ್ಳಿ ತರಲು ಕಾಡಿಗೆ ತೆರಳಿದ್ದ. ಆದರೆ ಸಂಜೆಯಾದರೂ ಗಂಗಾಧರ ಪೂಜಾರಿ ಮನೆಗೆ ಮರಳಿರಲಿಲ್ಲ .ಈ ಹಿನ್ನೆಲೆಯಲ್ಲಿ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಕಾಡಿನಲ್ಲಿ ಹುಡುಕಾಟ ನಡೆಸುವ ಸಂದರ್ಭದಲ್ಲಿ ನೀರು ಹರಿಯುವ ತೊರೆಯ ಬಳಿ ಗಂಗಾಧರ್ ಪೂಜಾರಿ ಅವರ ಮೃತದೇಹ ಪತ್ತೆಯಾಗಿದೆ.

A man was killed by wild boar near Uppinangady

ಈ ಬಗ್ಗೆ ಮೃತರ ಪತ್ನಿ ಜಯಶ್ರೀ ಎಂಬುವರು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತನ್ನ ಗಂಡ ಕಾಡು ಹಂದಿ ತಿವಿದು ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

English summary
In a shocking incident where a man was killed by wild boar in Puthila near Uppinangady Dakshina Kannada disrict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X