ಕಂಬಳ ಉಳಿಸಲು ಮಂಗಳೂರಿನಲ್ಲಿ ‘ಪೋಸ್ಟ್ ಕಾರ್ಡ್’ಚಳವಳಿ
ಮಂಗಳೂರು, ಜನವರಿ 25 : ತುಳುನಾಡಿನ ಸಾಂಸ್ಕೃತಿಕ ಹಾಗೂ ಗ್ರಾಮೀಣ ಕಲೆಯಾದ ಕಂಬಳವನ್ನು ಉಳಿಸಲು ಹಾಗೂ ಹೋರಾಟಕ್ಕೆ ಕರ್ನಾಟ ರಾಜ್ಯ ಅಖಿಲ ಭಾರತ ಹಿಂದೂ ಮಹಾಸಭಾ ಬೆಂಬಲ ನೀಡುತ್ತಿದೆ.
ಈ ಕುರಿತು ಬುಧವಾರ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ವಕ್ತಾರ ಧರ್ಮೇಂದ್ರ, 'ಕಂಬಳ ನಡಪಾಲೆ ಕಂಬಳ ಒರಿಪಾಲೆ' ಅಭಿಯಾನದ ಅಂಗವಾಗಿ 'ಪೋಸ್ಟ್ ಕಾರ್ಡ್' ಚಳವಳಿಯನ್ನು ಜನವರಿ 28ರಂದು ನಡೆಸಲಾಗುವುದು ಎಂದು ಹೇಳಿದರು.[ಕಂಬಳ ಎಂದರೇನು? ಕಂಬಳ ನಮಗೇಕೆ ಬೇಕು?]
'ರಾಜ್ಯ ಸರಕಾರ ಕೂಡಲೇ ಎಚ್ಚೆತ್ತು ತುಳುನಾಡಿನ ಕಂಬಳ ಕ್ರೀಡೆಯ ಕುರಿತು ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿಕೊಡಬೇಕು.[ಕೋರ್ಟ್ ಗೆ ಸೆಡ್ಡು, ಮಂಗ್ಳೂರಿನಲ್ಲಿ ಜ.28ರಂದು ಕಂಬಳ!]
ಇಲ್ಲವಾದಲ್ಲಿ ತಮಿಳುನಾಡಿನಲ್ಲಿ ಜಲ್ಲಿಕಟ್ಟು ನಿಷೇಧ ತೆರವಿಗೆ ನಡೆಯುತ್ತಿರುವ ಪ್ರತಿಭಟನೆಗಳ ಮಾದರಫುಡ್ ಈ ರಾಜ್ಯದಲ್ಲೂ ಆವರ್ತಿಸಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ ಲೋಹಿತ್ ಕುಮಾರ್ ಸುವರ್ಣ, ವಿನಾಯಕ್ ನಾಯಕ್, ಸಮರ್ಥ್ ಭಟ್, ರತೀಶ್ ಮೊದಲಾದವರು ಉಪಸ್ಥಿತರಿದ್ದರು.