ಅಂಧರ ಭವಿಷ್ಯ ಕಟ್ಟುತ್ತಿರುವ 'ಅಮೃತ ಬಿಂದು'
ಪರೀಕ್ಷೆ ಬರೆಯಲು ಕಷ್ಟ ಪಡುವ ಅಂಧ ಮಕ್ಕಳಿಗೆ ನೆರವು ನೀಡಿ ಅವರ ಭವಿಷ್ಯವನ್ನುಉಜ್ವಲಗೊಳಿಸುವ ಸಲುವಾಗಿ ಅಮೃತ ಬಿಂದು ಎಂಬ ಎನ್ ಜಿಒವೊಂದು ಬೆಂಗಳೂರಿನಲ್ಲಿ ಹುಟ್ಟಿಕೊಂಡಿದೆ.
ಮಂಗಳೂರು, ಮೇ 18: 'ನೇತ್ರದಾನ ಮಹಾದಾನ' ಎಂದು ದೊಡ್ಡವರು ಹೇಳಿದ್ದಾರೆ. ಇದೇ ಮಾತಿನಂತೆ ನಟರಾದ ಡಾ. ರಾಜ್ ಕುಮಾರ್, ಲೊಕೇಶ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ತಮ್ಮ ಸಾವಿನ ನಂತರ ಅಂಧರಿಗೆ ತಮ್ಮ ಕಣ್ಣುಗಳನ್ನು ದಾನ ಮಾಡಿ ಇತರರಿಗೆ ಮಾದರಿಯಾದವರು. ಇಷ್ಟಾದರೂ ನಮ್ಮ ಸುತ್ತಮುತ್ತ ಅಸಂಖ್ಯಾತ ಕುರುಡರಿದ್ದಾರೆ.
ಅದರಲ್ಲೂ ಎಲ್ಲಾ ಅಂಗಗಳು ಸರಿಯಾಗಿದ್ದ ನಮ್ಮನ್ನು ಮೀರಿಸುವಂತಹ ಅಪ್ರತಿಮ ಪ್ರತಿಭೆಗಳು ಅವರಲ್ಲಿದೆ. ಇಂತಹ ಪ್ರತಿಭೆಗಳನ್ನು ಗುರುತಿಸುವಂತಹ ಸಂಸ್ಥೆಯೊಂದು ಬೆಂಗಳೂರಿನಲ್ಲಿ ಹುಟ್ಟಿಕೊಂಡಿದೆ. ವಿಶೇಷ ಅಂದರೆ ಅದನ್ನು ವಿದ್ಯಾರ್ಥಿಗಳೇ ನಿರ್ವಹಿಸುತ್ತಿದ್ದಾರೆ.[ಕರ್ನಾಟಕ ಪಿಯುಸಿ ಫಲಿತಾಂಶ: ಇವರ ಫಲಿತಾಂಶ ಕಂಡು ಅಂಧತ್ವವೂ ನಾಚಿತು!]
ಪ್ರಶಾಂತ್.ಎನ್. ರಾವ್ ಎಂಬುವವರು 2012ರಲ್ಲಿ ಬೆಂಗಳೂರಿನಲ್ಲಿ 'ಅಮೃತಬಿಂದು' ಎಂಬ ಸರ್ಕಾರೇತರ ಸಂಸ್ಥೆಯೊಂದನ್ನು ಸ್ಥಾಪಿಸಿ ಆ ಮೂಲಕ ಅಂಧ ಮಕ್ಕಳಿಗೆ ತಮ್ಮಿಂದಾದ ಸಹಾಯಹಸ್ತ ಚಾಚುತ್ತಿದ್ದಾರೆ. ಅದೀಗ ಮಂಗಳೂರಿನಲ್ಲೂ ಕೆಲಸ ನಿರ್ವಹಿಸುತ್ತಿದೆ. ಇವರಿಗೆ ಬೆನ್ನೆಲುಬಾಗಿ ಬಿಂದು, ಅಕ್ಷತಾ, ಅನೂಪ್, ಭಾಸ್ಕರ್, ಕಾರ್ತಿಕ್ ಮತ್ತಿತರರು ಸೇರಿ ತಮ್ಮ ಬಿಡುವಿಲ್ಲದ ಚಟುವಟಿಕೆಗಳ ನಡುವೆ ಇವರಿಗೆ ಸಹಾಯ ಮಾಡುತ್ತಿದ್ದಾರೆ.[ಕಣ್ಣು ಕಾಣದಿದ್ದರೇನಂತೆ, ಚೆಸ್ ಬೋರ್ಡ್ ಮೇಲೆ ಇವರೇ ಚಾಂಪಿಯನ್]
ಈ ಪ್ರತಿಭಾವಂತ ಅಂಧಮಕ್ಕಳು ಪರೀಕ್ಷೆ ಬರೆಯಲು ಅನುವು ಮಾಡಿಕೊಡುವ ದೃಷ್ಟಿಯಿಂದ ಈ ಸಂಸ್ಥೆಯು ರಾಜ್ಯಾದ್ಯಾಂತ ಪ್ರಚಾರ ನಡೆಸಿ ಮಕ್ಕಳ ಪರೀಕ್ಷಾ ಸಮಯದಲ್ಲಿ ಅವರಿಗೆ ಪರೀಕ್ಷೆಗಳನ್ನು ಬರೆದುಕೊಡುವ ನಿಟ್ಟಿನಲ್ಲಿ ಸ್ವಯಂಸೇವಕರನ್ನು ಹುಡುಕುತ್ತಿದ್ದಾರೆ. ಈಗಾಗಲೇ 1500ಕ್ಕಿಂತಲೂ ಅಧಿಕ ಸ್ವಯಂ ಸೇವಕರು ಈ ಸಂಸ್ಥೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಕೆಲಸ ಕೇವಲ ಅಂಧ ಮಕ್ಕಳು ಪರೀಕ್ಷೆಗೆ ಓದಿ ಅದನ್ನು ಪರೀಕ್ಷೆಯಲ್ಲಿ ಹೇಳಿದಂತೆ ಬರೆಯುವ ಕೆಲಸವನ್ನು ಮಾಡುವುದು.

ಸೇವೆಗೆ ಕೈಜೋಡಿಸಿದವರು

ಸುಪ್ರೀಂ ಮಹತ್ತರ ತೀರ್ಪು
ಅಂಧಮಕ್ಕಳು ಬೇರೆಯವರಿಂದ ಪರೀಕ್ಷೆ ಬರೆಯುವ ಕುರಿತು ಉಂಟಾದ ಗೊಂದಲಕ್ಕೆ ತೆರೆ ಎಳೆಯುವ ದೃಷ್ಟಿಯಿಂದ 1994ರಲ್ಲಿ ಮೊದಲ ಬಾರಿ ಸುಪ್ರಿಂ ಕೋರ್ಟ್ ತೀರ್ಪು ನೀಡಿತ್ತು. ಅದರಲ್ಲಿ ಕೆಲವು ಷರತ್ತು ವಿಧಿಸಿತ್ತು. ಮುಖ್ಯವಾಗಿ ಪರೀಕ್ಷೆ ಬರೆಯುವ ಅಂಧ ವಿದ್ಯಾರ್ಥಿಯ ಸಮಾನಂತರವಾದ ಅಂದರೆ ಅಂಧ ವಿದ್ಯಾರ್ಥಿಯು ವಿಜ್ಞಾನ ವಿದ್ಯಾರ್ಥಿಯಾಗಿದ್ದರೆ ಅಂತಹದೇ ವಿಷಯದ ವಿದ್ಯಾರ್ಥಿ ಪರೀಕ್ಷೆ ಬರೆಯಬೇಕಿತ್ತು. ಈ ತೀರ್ಪಿನ ಬಗ್ಗೆ ಅಪಸ್ವರ ಬಂದ ಹಿನ್ನೆಲೆಯಲ್ಲಿ 2003ರಲ್ಲಿ ಈ ಪರೀಕ್ಷೆಗಳನ್ನು ಯಾರೂ ಬೇಕಾದರೂ ಬರೆಯಬಹುದೆಂಬ ತೀರ್ಪು ಹೊರಡಿಸಿತ್ತು.

ಶಾಲೆಗಳಿಂದ ಸಿಗುತ್ತಿಲ್ಲ ಅನುಮತಿ
ಆದ್ದರಿಂದ ಈ ಸಂಸ್ಥೆ ಮೂಲಕ ಇಂತಹ ಅಂಧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾದರೆ ಅಂಥವರಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡುವುದಿಲ್ಲ. ಅವರು ಸುಪ್ರೀಂ ಕೋರ್ಟ್ ಮೊದಲ ತೀರ್ಪು ಉಲ್ಲೇಖಿಸುತ್ತಾರೆ. ಕೆಲವೊಮ್ಮೆ ದೇಶದ ಮುಖ್ಯ ಸರ್ಕಾರೇತರ ಸಂಸ್ಥೆಯಾದ ನ್ಯಾಷನಲ್ ಫೆಡರೇಷನ್ ಆಫ್ ಬ್ಲೈಂಡ್ ಅಧಿಕಾರಿಗಳ ಮೂಲಕ ತಿಳಿಸಿದರೆ ಪರೀಕ್ಷೆಗೆ ಅನುಮತಿ ಕೊಡುವುದುಂಟು ಎನ್ನುತ್ತಾರೆ ಅಮೃತ ಬಿಂದು ಸಂಸ್ಥೆಯವರು.ಅಮೃತ.

ಅರ್ಧದಲ್ಲಿ ಕೈ ಕೊಡುತ್ತಾರೆ:
ಅಂಧಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುವ ರಾಜ್ಯ ಎಂದರೆ ತಮಿಳುನಾಡು. ಅಲ್ಲಿ ಸಂಬಂಧಪಟ್ಟ ಶಿಕ್ಷಕರೇ ತಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಗಳನ್ನು ಕರೆದು ಪರೀಕ್ಷೆ ಬರೆಸುತ್ತಾರೆ. ಜೊತೆಗೆ ಸ್ವಯಂ ಸೇವಾ ಸಂಸ್ಥೆಗಳು ಇವರಿಗೆ ಕೈಜೋಡಿಸುತ್ತಿವೆ. ಆದರೆ ಕರ್ನಾಟಕದಲ್ಲಿ ಮಾತ್ರ ಈ ಪ್ರತಿಭಾವಂತ ಅಂಧಮಕ್ಕಳನ್ನು ಕೇಳುವವರಿಲ್ಲ. ಅಕ್ಷತ
ಈ ಬಗ್ಗೆ ಅಂಧ ಮಕ್ಕಳನ್ನೇ ಕೇಳಿದರೆ, 'ನಾವು ಪರೀಕ್ಷೆ ಬರೆಯಲು ಸಹಾಯ ಕೇಳಿದರೆ ಕೆಲವರು 'ಆಯ್ತು' ಎಂದು ಪರೀಕ್ಷೆ ಸಮಯದಲ್ಲಿ ಕೈಕೊಡುತ್ತಾರೆ. ಇದರಿಂದ ನಮ್ಮ ಭವಿಷ್ಯಕ್ಕೆ ತೊಂದರೆಯಾಗುತ್ತಿದೆ' ಎಂದು ಅಳಲು ತೋಡಿಕೊಳ್ಳುತ್ತಾರೆ.
ನಯನದಿಂದ ಜಾಗೃತಿ
ಈ ಸಂಸ್ಥೆಯು ಅಂಧ ವಿದ್ಯಾರ್ಥಿಗಳಿಗಾಗಿ ರಾಜ್ಯದ ವಿವಿಧ ಕೇಂದ್ರಗಳಾದ ಮಂಗಳೂರು, ಮೈಸೂರು, ಬೆಂಗಳೂರು, ಬೆಳಗಾವಿ, ಹುಬ್ಬಳಿ, ದಾವಣಗೆರೆ ಹಾಗೂ ಕೇರಳ ಮತ್ತು ತಮಿಳುನಾಡು ರಾಜ್ಯಗಳು ಸೇರಿದಂತೆ ವಿವಿಧೆಡೆ 'ನಯನ' ಎಂಬ ವಿಶೇಷ ಕಾರ್ಯಕ್ರಮ ಏರ್ಪಡಿಸುತ್ತಿದೆ. ಇದರ ಮೂಲಕ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಸ್ವಯಂ ಸೇವಕರನ್ನು ಹೆಚ್ಚಿಸುವ ನಿಟ್ಟಿನಲ್ಲಿ www.amruthabindu.in ಎಂಬ ವೆಬ್ಸೈಟ್ ತೆರೆದಿದ್ದಾರೆ. ಈ ಮೂಲಕ ಸಹೃದಯಿಗಳು ಅವರಿಗೆ ಸಹಾಯಹಸ್ತ ಮಾಡುವ ಮೂಲಕ ಭವಿಷ್ಯದ ಕನಸುಗಳಿಗೆ ನೀರೆರೆಯುವ ಕೆಲಸ ಮಾಡಲಿ ಎಂಬುದು ನಮ್ಮ ಹಾರೈಕೆ.
{promotion-urls}
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications