ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರಾವಳಿ ಉತ್ಸವ ಉದ್ಘಾಟನೆಗೆ ಪ್ರಕಾಶ್ ರೈ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

|
Google Oneindia Kannada News

ಮಂಗಳೂರು, ಡಿಸೆಂಬರ್ 22: ನಗರದಲ್ಲಿ ನಡೆಯಲಿರುವ ಕರಾವಳಿ ಉತ್ಸವಕ್ಕೆ ಇಂದು ಖ್ಯಾತ ಚಿತ್ರನಟ ಪ್ರಕಾಶ ರೈ ಚಾಲನೆ ನೀಡಲಿದ್ದಾರೆ. ಆದರೆ ಕರಾವಳಿ ಉತ್ಸವಕ್ಕೆ ಪ್ರಕಾಶ್ ರೈ ಚಾಲನೆ ನೀಡುತ್ತಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.

ಕರಾವಳಿ ಉತ್ಸವ ಉದ್ಘಾಟನೆಗೆ ಪ್ರಕಾಶ್ ರೈ - ರಮಾನಾಥ ರೈಕರಾವಳಿ ಉತ್ಸವ ಉದ್ಘಾಟನೆಗೆ ಪ್ರಕಾಶ್ ರೈ - ರಮಾನಾಥ ರೈ

ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಪ್ರಕಾಶ್ ರೈ ವಿರುದ್ಧ ಮುಗಿಬಿದ್ದಿದ್ದು, 'ರೈ ಒಬ್ಬ ಕಾಂಗ್ರೆಸ್ ನ ಗಂಜಿ ಗಿರಾಕಿ' ಎಂದು ಲೇವಡಿ ಮಾಡಿದ್ದಾರೆ.

ರೈಗೆ ಕಾರಂತ ಪ್ರಶಸ್ತಿ : ಸಾಮಾಜಿಕ ತಾಣದಲ್ಲಿ ಭುಗಿಲೆದ್ದ ಆಕ್ರೋಶ ರೈಗೆ ಕಾರಂತ ಪ್ರಶಸ್ತಿ : ಸಾಮಾಜಿಕ ತಾಣದಲ್ಲಿ ಭುಗಿಲೆದ್ದ ಆಕ್ರೋಶ

Anger in social media against Prakash Rai for inaugurates Karavali Utsav

'ಕೇರಳದಲ್ಲಿ ಉಸಿರಾಡುವ ಮುಕ್ತ ವಾತಾವರಣ ಇದೆ' ಎಂದು ಹೇಳಿಕೆ ನೀಡಿದ್ದ ಪ್ರಕಾಶ್ ರೈ ವಿರುದ್ದ ಈಗ ನೆಟ್ಟಿಗರು ತಿರುಗಿ ಬಿದ್ದಿದ್ದಾರೆ. ಕೇರಳದಲ್ಲಿ ಉಸಿರಾಡಲು ಉತ್ತಮಗಾಳಿ ಇರುವಾಗ ಕನ್ನಡ ನಾಡಿಗೆ ಯಾಕೆ ಬರ್ತಿಯಾ? ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಲಾಗಿದೆ. ಪ್ರಕಾಶ್ ರೈ ಅವರ ಭಾವಚಿತ್ರಕ್ಕೆ ಚಪ್ಪಲಿಯ ಚಿತ್ರವನ್ನು ಎಡಿಟ್ ಮಾಡಿ 'ಗೊ ಬ್ಯಾಕ್ ಪ್ರಕಾಶ್ ರೈ' ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ.

ಪ್ರಧಾನಿಗಳೇ ಅಭಿನಂದನೆ, ನಿಮ್ಗೆ ನಿಜಕ್ಕೂ ಸಂತೋಷವಾಗಿದೆಯೇ? : ಪ್ರಕಾಶ್ ರೈಪ್ರಧಾನಿಗಳೇ ಅಭಿನಂದನೆ, ನಿಮ್ಗೆ ನಿಜಕ್ಕೂ ಸಂತೋಷವಾಗಿದೆಯೇ? : ಪ್ರಕಾಶ್ ರೈ

ಕಾಂಗ್ರೆಸ್ ಪಕ್ಷದ ಬಕೆಟ್ ಗಿರಾಕಿ ಎಂದು ಪ್ರಕಾಶ್ ರೈ ವಿರುದ್ಧ ಜಾಲತಾಣದಲ್ಲಿ ಬರೆಯಲಾಗಿದ್ದು, ಮುಂಬರುವ ಚುನಾವಣೆಯಲ್ಲಿ ಪ್ರಕಾಶ್ ರೈ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಎಂದು ವ್ಯಂಗ್ಯ ಮಾಡಲಾಗಿದೆ.

ಕರಾವಳಿ ಉತ್ಸವ ಉದ್ಘಾಟನೆಗೆ ಪ್ರಕಾಶ್ ರೈ ಅವರಿಗೆ ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ನೀಡಿದರೆ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಲಾಗಿದೆ.

English summary
Prakash Rai will be inaugurating Karavali Utsav on today evening in Mangaluru. But anger has been erupted in social networking sites against Prakash Rai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X