ಕಾವ್ಯಾ ಸಾವಿಗೆ ನ್ಯಾಯಕ್ಕೆ ಆಗ್ರಹಿಸಿ ಮಂಗಳೂರಿನಲ್ಲಿ ಉಪವಾಸ ಸತ್ಯಗ್ರಹ
ಮಂಗಳೂರು, ಆಗಸ್ಟ್ 27: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವಿನ ಪ್ರಕರಣದ ತನಿಖೆಯಲ್ಲಿ ವಿಳಂಬ ನೀತಿ ಖಂಡಿಸಿ ಮತ್ತು ಕಾವ್ಯಾ ಕುಟುಂಬಕ್ಕೆ 25 ಲಕ್ಷ ಪರಿಹಾರ ಆಗ್ರಹಿಸಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘಟನೆ ಶನಿವಾರ ಮಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿತು.
ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವಿನ ಕುರಿತು ಪೊಲೀಸ್ ತನಿಖೆಯಲ್ಲಿ ಯಾವುದೇ ಪ್ರಗತಿ ಆಗಿಲ್ಲ ಎಂದು ವಿದ್ಯಾರ್ಥಿ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಆಯೋಜಿಸಿದ್ದ ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹಲ್ಲಿ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕಾವ್ಯಾಳ ತಂದೆ- ತಾಯಿ ಕೂಡ ಈ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.
ರಾಷ್ಟ್ರ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದ ಕಾವ್ಯಾ ಜು.20 ರಂದು ಮೂಡಬಿದಿರೆಯ ಆಳ್ವಾಸ್ ಹಾಸ್ಟೆಲಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಳು.
Comments
English summary
The All college students association held protest seeking justice for Alva's student Kavya Poojary here at Mangaluru DC office on Aug 26.
Story first published: Sunday, August 27, 2017, 10:25 [IST]