ಬಾಳಿಗ ಹತ್ಯೆ : ಆರೋಪಿ ಶೆಣೈ ವಿರುದ್ಧ 770 ಪುಟಗಳ ಚಾರ್ಜ್ ಶೀಟ್
ಮಂಗಳೂರು, ಜೂ. 27: ಮಾರ್ಚ್ 21ರಂದು ನಗರದ ಕೊಡಿಯಾಲ್ಬೈಲ್ ಬಳಿ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗಾ ಅವರ ಹತ್ಯೆಗೆ ಸಂಬಂಧಿಸಿ ಪ್ರಮುಖ ಆರೋಪಿ ಎಂ.ನರೇಶ್ ಶೆಣೈ(39)ಯನ್ನು ನಗರದ ಸಿಸಿಬಿ ಪೊಲೀಸರು ಉಡುಪಿಯ ಹಜಮಾಡಿಯಿಂದ ಬಂಧಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಭಾನುವಾರ(ಜೂನ್ 26) ಸಂಜೆ ಸುದ್ದಿಗೋಷ್ಠಿಯಲ್ಲಿ ಸಂಜೆ ಮಾತನಾಡಿದ ಅವರು, ಬಂಧಿತ ನರೇಶ್ ಶೆಣೈ ನಗರದ ವಿ.ಟಿ.ರಸ್ತೆಯಲ್ಲಿ ವಿವೇಕ್ ಟ್ರೇಡರ್ಸ್ ಎಂಬ ಆಯುರ್ವೇದಿಕ್ ಔಷಧ ವಿತರಣಾ ಸಂಸ್ಥೆಯನ್ನು ನಡೆಸಿಕೊಂಡಿದ್ದು, ಕೊಲೆಯ ರೂವಾರಿಯಾಗಿದ್ದಾರೆ. ಬಾಳಿಗಾ ಹತ್ಯೆಗಾಗಿ ಇತರ ಆರೋಪಿಗಳೊಂದಿಗೆ ಸಂಚು ರೂಪಿಸಿ, ಹತ್ಯೆ ನಡೆದ ಬಳಿಕ ತಲೆಮರೆಸಿಕೊಂಡು ಸಾಕ್ಷಗಳನ್ನು ನಾಶಪಡಿಸಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದರು.[ವಿನಾಯಕ್ ಬಾಳಿಗ ಕೊಲೆ ಆರೋಪಿ ನರೇಶ್ ಶೆಣೈ ಶರಣು]
ಜಮ್ಮುಕಾಶ್ಮೀರ, ಗೋರಖ್ಪುರ್, ಲಕ್ನೋ, ನೇಪಾಲದಲ್ಲಿ ತಲೆ ಮರೆಸಿಕೊಂಡಿದ್ದರೆಂದು ತನಿಖೆಯಿಂದ ಗೊತ್ತಾಗಿದೆ. ನರೇಶ್ ಶೆಣೈಗೆ ಅಡಗುದಾಣ ಬದಲಾಯಿಸಲು ಹಾಗೂ ಆತನಿಗೆ ತಪ್ಪಿಸಿಕೊಳ್ಳಲು ಸಹಾಯ ಮಾಡುತ್ತಿದ್ದವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಯಾರೆಲ್ಲಾ ಇದರಲ್ಲಿ ಭಾಗಿಯಾಗಿದ್ದಾರೆಂಬುದು ತನಿಖೆ ನಡೆಯಲಿದೆ.

ನರೇಶ್ ಶೆಣೈಯ ಕಚೇರಿ ಉದ್ಯೋಗಿ ಹಾಗೂ ನಿಕಟವರ್ತಿ ವಿಘ್ನೇಶ್ ನನ್ನು ಶೀಘ್ರದಲ್ಲೇ ವಶಕ್ಕೆ ಪಡೆದು ವಿಚಾರಣೆಗೊಳಪಡಿಸುವುದಾಗಿ ಕಮಿಷನರ್ ಚಂದ್ರಶೇಖರ್ ಮಾಹಿತಿ ನೀಡಿದರು. [RTI ಬಾಳಿಗಾ ಕೊಲೆ ಪ್ರಕರಣ: ಜಿ ಎಸ್ ಬಿ ಸಮಾಜದ ಸ್ಪಷ್ಟನೆ]
ನರೇಶ್ ಶೆಣೈಯನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, ಪೊಲೀಸ್ ಕಸ್ಟಡಿಗೆ ಕೋರುವುದಾಗಿ ತಿಳಿಸಿದರು. ಪ್ರಕರಣದ ತನಿಖಾಧಿಕಾರಿ ಎಸಿಪಿ ತಿಲಕ್ಚಂದ್ರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ರವೀಶ್ ನಾಯಕ್, ಶಾಂತರಾಮ, ರಾಜೇಶ್, ಮಾರುತಿ ನಾಯ್ಕ್, ಸಿಸಿಬಿ ಇನ್ಸ್ಪೆಕ್ಟರ್ ವೆಲೆಂಟೈನ್ ಡಿಸೋಜ ಸಹಕಾರದಿಂದ ಆರೋಪಿ ನರೇಶ್ ಶೆಣೈಯನ್ನು ಬಂಧಿಸಲಾಗಿದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ಸಾಕ್ಷಾಧಾರಗಳನ್ನುಸ ಸಂಗ್ರಹಿಸಿದ ಬಳಿಕ ಜೂನ್ 23ರಂದು ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಸಹಿತ ಈ ಹಿಂದೆ ಬಂಧಿಸಲ್ಪಟ್ಟ ಆರೋಪಿಗಳಾದ ಶ್ರೀಕಾಂತ್, ಶಿವಪ್ರಸಾದ್, ವಿನೀತ್ ಪೂಜಾರಿ, ನಿಶಿತ್ ದೇವಾಡಿಗ, ಶೈಲೇಶ್ ಮಂಜುನಾಥ ಶೆಣೈ ಎಂಬವರ ವಿರುದ್ಧ ನಗರದ ಜೆಎಂಎಫ್ಸಿ 3ನೇ ನ್ಯಾಯಾಲಯದಲ್ಲಿ 770 ಪುಟಗಳ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದ್ದು, ಪ್ರಕರಣದಲ್ಲಿ ತನಿಖೆಯನ್ನು ಮುಂದುವರಿಸಲು ನ್ಯಾಯಾಲಯದ ಅನುಮತಿ ಪಡೆಯಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಸಂಜೀವ್ ಎಂ. ಪಾಟಿಲ್, ಕೆ.ಎಂ.ಶಾಂತರಾಜು ಉಪಸ್ಥಿತರಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications