ಬಿಬಿಎಂಪಿ ವಿಭಜನೆ ವಿಧೇಯಕ ರಾಷ್ಟ್ರಪತಿ ಭವನಕ್ಕೆ
ಬೆಂಗಳೂರು, ಜುಲೈ 28 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡುವ ತಿದ್ದುಪಡಿ ವಿಧೇಯಕವನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ. ಉಭಯ ಸದನಗಳಲ್ಲಿ ಅಂಗೀಕಾರಗೊಂಡ ವಿಧೇಯಕವನ್ನು ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿತ್ತು.
ಬಿಬಿಎಂಪಿಯನ್ನು ವಿಭಜನೆ ಮಾಡುವ ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ 2015 ಕಳೆದ ವಾರ ವಿಧಾನಮಂಡಲದ ಉಭಯ ಸದನಗಳಲ್ಲಿ ಅನುಮೋದನೆಗೊಂಡಿತ್ತು. ಸರ್ಕಾರ ರಾಜ್ಯಪಾಲರ ಒಪ್ಪಿಗೆಗಾಗಿ ವಿಧೇಯಕವನ್ನು ಕಳುಹಿಸಿತ್ತು. [ವಿಧೇಯಕಕ್ಕೆ ಸಹಿ ಹಾಕಬೇಡಿ]

ರಾಜ್ಯಪಾಲ ವಜುಭಾಯಿ ವಾಲಾ ಅವರು ಈ ವಿಧೇಯಕಕ್ಕೆ ಸಹಿ ಹಾಕದೇ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ. ವಿಧೇಯಕಕ್ಕೆ ಏಕೆ ಸಹಿ ಹಾಕುತ್ತಿಲ್ಲ? ಎಂಬುದಕ್ಕೆ ಅವರು 4 ಕಾರಣಗಳನ್ನು ನೀಡಿ, ವಿವರಣೆ ಸಹಿತ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ. [ಬಿಬಿಎಂಪಿ ಚುನಾವಣೆ ವೇಳಾಪಟ್ಟಿ]
ಬಿಬಿಎಂಪಿಯನ್ನು ವಿಭಜನೆ ಮಾಡಬೇಕು ಎಂದು ಹಠ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎರಡು ಬಾರಿ ವಿಧಾನಭೆ ಮತ್ತು ವಿಧಾನ ಪರಿಷತ್ತಿನಲ್ಲಿ ವಿಧೇಯಕವನ್ನು ಮಂಡನೆ ಮಾಡಿ ಪ್ರತಿಪಕ್ಷಗಳ ವಿರೋಧದ ನಡುವೆಯೇ ಅನುಮೋದನೆ ಪಡೆದುಕೊಂಡಿತ್ತು. [ಬಿಬಿಎಂಪಿಯನ್ನು 5 ಭಾಗ ಮಾಡಿ]
ಈ ವಿಧೇಯಕಕ್ಕೆ ಅಂಕಿತ ಹಾಕಬಾರದು ಎಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ರಾಜ್ಯಪಾಲರನ್ನು ಭೇಟಿ ಮಾಡಿ ಪ್ರತ್ಯೇಕವಾಗಿ ಮನವಿ ಮಾಡಿದ್ದವು. ಸದ್ಯ, ರಾಜ್ಯಪಾಲರು ವಿಧೇಯಕವನ್ನು ರಾಷ್ಟ್ರಪತಿಗಳಿಗೆ ಕಳುಹಿಸಿಕೊಟ್ಟಿದ್ದಾರೆ. ವಿಧೇಯಕಕ್ಕೆ ಒಪ್ಪಿಗೆ ಸಿಗುವುದೇ? ಎಂದು ಕಾದು ನೋಡಬೇಕಾಗಿದೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications