ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ವಿದ್ಯಾರ್ಥಿ ಬೆಳ್ತಂಗಡಿಯ ಕೆರೆಯಲ್ಲಿ ಶವವಾಗಿ ಪತ್ತೆ!

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜುಲೈ.26: ಬೆಳ್ತಂಗಡಿಯ ಗುರುವಾಯನ ಕೆರೆಯಲ್ಲಿ ವಿದ್ಯಾರ್ಥಿಯೊಬ್ಬನ ಮೃತದೇಹ ಪತ್ತೆಯಾಗಿದೆ. ನಿನ್ನೆ ಬುಧವಾರ(ಜು.25) ಸಂಜೆ ಕೆರೆಯ ದಡದಲ್ಲಿ ವಿದ್ಯಾರ್ಥಿ ಬ್ಯಾಗ್ ಪತ್ತೆಯಾಗಿತ್ತು. ಇಂದು ಬೆಳಗ್ಗೆ ಗುರುವಾರ ಕೆರೆಯಲ್ಲಿ ‌ವಿದ್ಯಾರ್ಥಿಯ ಮೃತದೇಹ ಕಾಣಿಸಿಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದಲ್ಲಿ ಈ ಗುರುವಾಯನಕೆರೆ ಇದೆ. ಮೃತ ವಿದ್ಯಾರ್ಥಿಯನ್ನು ಯಶವಂತ್ ಸಾಯಿ ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ಐಟಿಐ ವಿದ್ಯಾಮಂದಿರ ಹೈಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿ ಎಂದು ಹೇಳಲಾಗಿದೆ.

Body of a student was found at Guruvayana Lake in Belthangady

ಹಾಸನ: ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆಹಾಸನ: ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ

ಸಂಜೆ ಕೆರೆ ಗುರುವಾಯನಕೆರೆಯ ದಡದಲ್ಲಿ ವಿದ್ಯಾರ್ಥಿ ಬ್ಯಾಗ್ ಪತ್ತೆಯಾಗಿತ್ತು. ಸಂಶಯಗೊಂಡ ಸ್ಥಳೀಯರು, ಅಗ್ನಿಶಾಮಕದಳದ ಸಿಬ್ಬಂದಿಗಳು ವಿದ್ಯಾರ್ಥಿಯ ಹುಡುಕಾಟ ನಡೆಸಿದ್ದರು.

Body of a student was found at Guruvayana Lake in Belthangady

ಕೆರೆಯ ದಡದಲ್ಲಿ ದೊರೆತಿದ್ದ ಬ್ಯಾಗ್ ನಲ್ಲಿ ವಿದ್ಯಾರ್ಥಿಯ ಶಾಲೆ ಐಡಿ ಕಾರ್ಡ್, ಆಧಾರ್ ಕಾರ್ಡ್, ಬೆಂಗಳೂರಿನಿಂದ ಮಂಗಳೂರಿಗೆ ಬಂದಿರುವ ಬಸ್ ಟಿಕೆಟ್ ಕೂಡ ಪತ್ತೆಯಾಗಿತ್ತು.

Body of a student was found at Guruvayana Lake in Belthangady

ಆದರೆ ಬೆಂಗಳೂರಿನ ವಿದ್ಯಾರ್ಥಿ ಇಲ್ಲಿಗೆ ಬಂದಿದ್ದಾದರೂ ಏಕೆ ಎಂಬ ಪ್ರಶ್ನೆ ಕಾಡಲಾರಂಭಿಸಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

English summary
Body of a student was found at Guruvayana Lake in Belthangady. Deceased has been identified as Yashwant Sai, a student of ITI Vidya Mandir High School, Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X