ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೇಂದ್ರ ಶಬರಿಮಲೆಯ ಸಂಪ್ರದಾಯ ಕಾಪಾಡಬೇಕಿತ್ತು: ಯುಟಿ ಖಾದರ್

|
Google Oneindia Kannada News

Recommended Video

Sabarimala Verdict : ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ಬಗ್ಗೆ ಸಚಿವ ಯು ಟಿ ಖಾದರ್ ಪ್ರತಿಕ್ರಿಯೆ

ಮಂಗಳೂರು, ಜನವರಿ 03: ಶಬರಿಮಲೆ ಹಿಂದೂ-ಮುಸ್ಲಿಂ ಸೌಹಾರ್ದತೆಯ ಕ್ಷೇತ್ರ. ಅಲ್ಲಿಯ ಧಾರ್ಮಿಕ ವಿಧಿವಿಧಾನಗಳಿಗೆ ಸಂಬಂಧಪಟ್ಟಂತೆ ಸಂಪ್ರದಾಯ ಉಳಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಬರಿಮಲೆ ದೇವಾಲಯ ಪ್ರವೇಶಿಸಿದ 'ಅವಳು' ಬ್ರಾಹ್ಮಣ ಕುಟುಂಬದವಳುಶಬರಿಮಲೆ ದೇವಾಲಯ ಪ್ರವೇಶಿಸಿದ 'ಅವಳು' ಬ್ರಾಹ್ಮಣ ಕುಟುಂಬದವಳು

ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರವಾಗಿ ಪ್ರತಿಕ್ರಿಯಿಸಿದರು. ಕೇಂದ್ರಕ್ಕೆ ನಿಜವಾದ ಕಾಳಜಿ ಇದ್ದಲ್ಲಿ ಶಬರಿಮಲೆಯ ಸಂಪ್ರದಾಯ ಕಾಪಾಡಬೇಕಿತ್ತು. ಕೇಂದ್ರ ಸರಕಾರ ಅದಕ್ಕೊಂದು ತೀರ್ಮಾನ ತೆಗೆದುಕೊಳ್ಳಬೇಕು.

 ವೈರಲ್ ವಿಡಿಯೋ: ಕೊನೆಗೂ ಶಬರಿಮಲೆ ದೇವಾಲಯ ಪ್ರವೇಶಿಸಿದ ಇಬ್ಬರು ಮಹಿಳೆಯರು ವೈರಲ್ ವಿಡಿಯೋ: ಕೊನೆಗೂ ಶಬರಿಮಲೆ ದೇವಾಲಯ ಪ್ರವೇಶಿಸಿದ ಇಬ್ಬರು ಮಹಿಳೆಯರು

ಹಿರಿಯರ ಜೊತೆಗೆ ಗುರು ಸ್ವಾಮೀಜಿಗಳನ್ನು ಪ್ರಧಾನಿ ಮಾತುಕತೆಗೆ ಕರೆದು ನಿರ್ಣಯ ತೆಗೆದುಕೊಳ್ಳಬೇಕು ಎಂದು ಹೇಳಿದ ಖಾದರ್ ಶಬರಿಮಲೆಯ ಸಂಪ್ರದಾಯವನ್ನು ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಬೇಕು. ಕಂಬಳ, ಜಲ್ಲಿಕಟ್ಟುವಿಗೆ ತಂದಂತೆ ಇದಕ್ಕೆ ಸುಗ್ರಿವಾಜ್ಞೆ ತರಬೇಕು. ಆದರೆ ಶಬರಿಮಲೆ ವಿಚಾರವಾಗಿ ಕೇಂದ್ರ ಸರಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

Central government is playing double game on Sabarimala issue:UT Khadar

ಶಬರಿಮಲೆ ವಿಚಾರವಾಗಿ ಪಾರ್ಲಿಮೆಂಟ್ ‌ನಲ್ಲಿ ಬಿಜೆಪಿ ಸಂಸದರು ಮಾತನಾಡಲಿಲ್ಲ. ಶಬರಿಮಲೆ ವಿವಾದ ಬಗೆಹರಿಸುವುದು ಕೇಂದ್ರ ಸರಕಾರದ ಜವಾಬ್ದಾರಿ. ಆದರೆ ಅವರೇ ಕೇರಳದಲ್ಲಿ ಗಲಾಟೆ ಮಾಡಿಸುತ್ತಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಸುಪ್ರೀಂ ಕೋರ್ಟ್ ಆದೇಶವನ್ನು ಕೇರಳ ರಾಜ್ಯ ಪಾಲಿಸಬೇಕಾದ ಅನಿವಾರ್ಯತೆ ಇದೆ. ಆದರೆ ಕೊನೆಯ ನಿರ್ಧಾರ ಕೇಂದ್ರದ್ದು ಎಂದು ಖಾದರ್ ಸ್ಪಷ್ಟಪಡಿಸಿದರು.

English summary
Mangaluru dakshina kannada diistrict incharge minisiter U T Khadar slams central government over Sabarimala issue. He said central government is playing double game on Sabarimala issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X