ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗ್ಳೂರಲ್ಲಿ ಗೃಹ ಸಚಿವರ ಎದುರೇ ಕೈ ಮಿಲಾಯಿಸಿದ ಕಾಂಗ್ರೆಸ್ ನಾಯಕರು

By ಐಸಾಕ್ ರಿಚರ್ಡ್
|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 20: ರಾಜ್ಯ ಗೃಹ ಸಚಿವರ ಎದುರೇ ಕಾಂಗ್ರೆಸ್ ಮುಖಂಡರ ಮಾರಾಮಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಜಗದೀಶ್ ಕಾರಂತ್ ವಿರುದ್ಧ ಕೇಸ್ ದಾಖಲಿಸಲು ರಾಮಲಿಂಗಾ ರೆಡ್ಡಿ ಸೂಚನೆಜಗದೀಶ್ ಕಾರಂತ್ ವಿರುದ್ಧ ಕೇಸ್ ದಾಖಲಿಸಲು ರಾಮಲಿಂಗಾ ರೆಡ್ಡಿ ಸೂಚನೆ

ನಗರದ ಕಾಂಗ್ರೆಸ್ ಭವನದಲ್ಲಿ ಘಟನೆ ನಡೆದಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ಹೊತ್ತಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ ಎದುರೇ ಕಾಂಗ್ರೆಸ್ ಮುಖಂಡರು ಕೈ ಕೈ ಮಿಲಾಯಿಸಿದ್ದು ಮುಜುಗರಕ್ಕೆ ಕಾರಣವಾಗಿದೆ.

Clash erupts between Mangaluru Congress leaders in front of Home Minister Ramalinga Reddy

ಗೃಹ ಸಚಿವ ರಾಮಲಿಂಗ ರೆಡ್ಡಿ ಅವರು ಬುಧವಾರ ಮಂಗಳೂರಿಗೆ ಆಗಮಿಸಿದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಬಳಿಕ ಮಧ್ಯಾಹ್ನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು. ಅಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿತ್ತು.

ಈ ಸಭೆಯಲ್ಲಿ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಸಭಾ ವೇದಿಕೆಯ ಮೇಲೆ ಆಸೀನರಾಗಿದ್ದು, ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಕೆರಳಿಸಿದೆ. ಆಗ ವಿಜಯಕುಮಾರ್ ಶೆಟ್ಟಿ ಅವರನ್ನು ಏಕ ವಚನದಲ್ಲಿ ನಿಂದಿಸಿದ್ದಾರೆ. ಸಭೆ ಮುಗಿದ ಬಳಿಕ ಗೃಹ ಸಚಿವ ರಾಮಲಿಂಗಾರೆಡ್ಡಿ ಎದುರಲ್ಲೇ ವಿಜಯಕುಮಾರ್ ಶೆಟ್ಟಿಯವರನ್ನು ಚಂದ್ರಪ್ರಕಾಶ್ ಶೆಟ್ಟಿ ತುಂಬೆ ತರಾಟೆಗೆ ತೆಗೆದುಕೊಂಡು, ಹಲ್ಲೆ ನಡೆಸಿದ್ದಾರೆ.

ಗೃಹ ಸಚಿವ ರಾಮಲಿಂಗಾ ರೆಡ್ಡಿ ದಕ್ಷಿಣ ಕನ್ನಡ ಭೇಟಿಗೃಹ ಸಚಿವ ರಾಮಲಿಂಗಾ ರೆಡ್ಡಿ ದಕ್ಷಿಣ ಕನ್ನಡ ಭೇಟಿ

ಕಾಂಗ್ರೆಸ್ ಪಕ್ಷ ಹಾಗೂ ರೈ ಅವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ, ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವ ನೀವು ಪಕ್ಷದ ಸಭೆ ಹಾಗೂ ಕಚೇರಿಗೆ ಬರುವ ಅಗತ್ಯ ಏನಿದೆ, ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಚಂದ್ರಪ್ರಕಾಶ್ ಶೆಟ್ಟಿ ತುಂಬೆಯವರು ವಿಜಯಕುಮಾರ್ ಶೆಟ್ಟಿಯವರನ್ನು ತರಾಟೆಗೆ ತೆಗೆದುಕೊಂಡು, ಹಲ್ಲೆ ನಡೆಸಿದ್ದಾರೆ.

English summary
Clash erupts between Congress leader Chandrapraksh Shetty and Ex MLA Vijay Kumar shetty in front of Home Minister Ramalinga Reddy here at Congress office on Sep 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X