ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಟ್ವಾಳದಲ್ಲಿ ರೈ, ಸುಳ್ಯದಿಂದ ಡಾ. ರಘು, ಮುನೀರ್ ನಾಮಪತ್ರ ಸಲ್ಲಿಕೆ

|
Google Oneindia Kannada News

ಮಂಗಳೂರು ಏಪ್ರಿಲ್ 19: ಮುಂಬರುವ ವಿಧಾನ ಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭ್ಯರ್ಥಿಗಳ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ.

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ್ ರೈ ತನ್ನ ಅಪಾರ ಬೆಂಬಲಿಗರೊಂದಿಗೆ ಬಂಟ್ವಾಳ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

Congress and CPIM candidates filed nomination in Dakshina Kannada

ಇದೇ ವೇಳೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಸಿಪಿಐಎಂ ಅಭ್ಯರ್ಥಿಯಾಗಿ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ನಾಮಪತ್ರ ಸಲ್ಲಿಸಿದರು.

ಬಂಟ್ವಾಳದಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ಶಕ್ತಿ ಪ್ರದರ್ಶಿಸಿದ ರಮಾನಾಥ್ ರೈಬಂಟ್ವಾಳದಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ಶಕ್ತಿ ಪ್ರದರ್ಶಿಸಿದ ರಮಾನಾಥ್ ರೈ

Congress and CPIM candidates filed nomination in Dakshina Kannada

ನಗರದ ಪಿವಿಎಸ್ ವೃತ್ತದಿಂದ ಪಾಲಿಕೆ ಕಚೇರಿಯವರೆಗೆ ಸಿಪಿಐಎನ ನೂರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿದ ಮುನೀರ್ ಕಾಟಿಪಳ್ಳ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಚುನಾವಣಾಧಿಕಾರಿ ಎಸ್.ಬಿ. ಪ್ರಶಾಂತ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.

Congress and CPIM candidates filed nomination in Dakshina Kannada

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ರಘು ಇಂದು ನಾಮಪತ್ರ ಸಲ್ಲಿಸಿದರು. ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಸುಳ್ಯ ತಾಲೂಕು ಕಚೇರಿಗೆ ತೆರಳಿದ ಡಾ.ರಘು ನಾಮಪತ್ರ ಸಲ್ಲಿಸಿದರು.

English summary
Karnataka assembly elections 2018: Congress Bantwal candidate Ramanath Rai, Sullia candidate Dr. Ragu, Mangaluru City North CPIM candidate Munir Katipalla filed their nomination for assembly election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X