ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಟ್ವಾಳ ಚೂರಿ ಇರಿತ ಪ್ರಕರಣ: ನಾಲ್ಕು ಆರೋಪಿಗಳ ಬಂಧನ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಡಿಸೆಂಬರ್, 22: ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಲ್ಪನೆ ಎಂಬಲ್ಲಿ ಸೋಮವಾರ ಸಂಜೆ ವಿದ್ಯಾರ್ಥಿ ಸಹಿತ ಇಬ್ಬರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.

ದೇವದಾಸ ಯಾನೆ ದೇವು(30), ಪ್ರಶಾಂತ್(28), ಸತೀಶ ಯಾನೆ ಕಾಳು(30), ಉಮೇಶ(30) ಬಂಧಿತ ಆರೋಪಿಗಳು.

ಗುರುಪುರ ಕೈಕಂಬದಲ್ಲಿ ಮದುವೆ ಕಾರ್ಯ ಮುಗಿಸಿ ಬೈಕ್ ನಲ್ಲಿ ಬರುತ್ತಿದ್ದ ಮಲ್ಲೂರು ಬದ್ರಿಯಾ ನಗರದ ನಿವಾಸಿ ಮುಹಮ್ಮದ್ ಜುನೈದ್(17) ಮತ್ತು ಬಿ.ಸಿ.ರೋಡ್ ಶಾಂತಿ ಅಂಗಡಿ ನಿವಾಸಿ ಮುಹಮ್ಮದ್ ಸಿನಾನ್(18) ಎಂಬುವರಿಗೆ ಇನ್ನೊಂದು ಬೈಕ್ ನಲ್ಲಿ ಬಂದ ಆರೋಪಿಗಳು ಚೂರಿಯಿಂದ ಇರಿದಿದ್ದರು.

Dakshina Kannada: DCIB sleuths nab four for assault on youths

ಈ ಬಗ್ಗೆ ಪ್ರಕರಣದ ದಾಖಲಿಸಿದ್ದ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು.

ಬುಧವಾರ ಮುಂಜಾನೆ ಆರೋಪಿಗಳು ಉಡುಪಿ ಕಡೆಗೆ ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಕೊಡ್ಮಾಣ್ ಅಬ್ಬೆಟ್ಟು ಶಾಲೆಯ ಬಳಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ ನಿರ್ದೇಶನದಂತೆ, ಡಿಸಿಐಬಿ ನಿರೀಕ್ಷಕರಾದ ಎ.ಅಮಾನುಲ್ಲಾ, ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್, ವೃತ್ತ ನಿರೀಕ್ಷಕ ಬಿ.ಕೆ.ಮಂಜಯ್ಯ ಮಾರ್ಗದರ್ಶನದಂತೆ ಡಿಸಿಐಬಿ ಸಿಬ್ಬಂದಿ ಸಂಜೀವ ಪುರುಷ, ಲಕ್ಷ್ಮಣ ಕೆ.ಜಿ., ಪಳನಿವೇಲು, ಇಕ್ಬಾಲ್, ಉದಯ ರೈ, ಸತೀಶ, ವಾಸು ನಾಯ್ಕ ಮತ್ತು ವಿಜಯ ಗೌಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

English summary
Sleuths of District Crime Intelligence Bureau (DCIB) of Dakshina Kannada District Police have nabbed four accused in connection with case of assault reported at Kalpane near Benjana Padavu under Bantwal rural PS limits on December 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X