ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನ ಸುರತ್ಕಲ್‌ನಲ್ಲಿ ಗೋಣಿಚೀಲದಲ್ಲಿ ಮೃತದೇಹ ಪತ್ತೆ, ಕೊಲೆ ಶಂಕೆ

|
Google Oneindia Kannada News

ಮಂಗಳೂರು, ಜೂನ್ 2: ವ್ಯಕ್ತಿಯೊಬ್ಬರ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾಗಿದೆ. ಮಂಗಳೂರು ಹೊರವಲಯದ ಸುರತ್ಕಲ್ ಕೃಷ್ಣಾಪುರ ರಸ್ತೆಯ ಬದಿಯ ಚರಂಡಿಯಲ್ಲಿ ಗೋಣಿಚೀಲದ ಒಳಗೆ ಮೃತದೇಹ ಪತ್ತೆಯಾಗಿದೆ.

ಮೃತ ದೇಹ ದೊರೆತ ಸ್ಥಳಕ್ಕೆ ಸುರತ್ಕಲ್ ಠಾಣೆಯ ಪೊಲೀಸರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿ ಕೊಪ್ಪಳ ಜಿಲ್ಲೆಯ ಕಬ್ಬರಗಿ ನಿವಾಸಿ ಮರಿಯಪ್ಪ (50) ಎಂದು ಗುರುತಿಸಲಾಗಿದೆ.

ಮಂಗಳೂರು: ನಿಂತಲ್ಲಿಯೇ ಧಗಧಗ ಹೊತ್ತಿ ಉರಿದ ಕಾರುಮಂಗಳೂರು: ನಿಂತಲ್ಲಿಯೇ ಧಗಧಗ ಹೊತ್ತಿ ಉರಿದ ಕಾರು

ದುಷ್ಕರ್ಮಿಗಳು ಮರಿಯಪ್ಪ (50) ಅವರನ್ನು ಬೇರ ಎಲ್ಲೋ ಕೊಲೆ ಮಾಡಿ ಮೃತದೇಹವನ್ನು ಗೋಣಿಚೀಲದಲ್ಲಿ ಕಟ್ಟಿ ವಾಹನದಲ್ಲಿ ತಂದು ರಸ್ತೆಬದಿಯ ಚರಂಡಿಗೆ ಹಾಕಿದ್ದಾರೆ ಎಂದು ಶಂಕಿಸಲಾಗಿದೆ.

Dead body found in sand bag at Suratkal

ಚರಂಡಿಯಲ್ಲಿ ಪತ್ತೆಯಾಗಿದ್ದ ಮರಿಯಪ್ಪ ಅವರ ಮೃತದೇಹವನ್ನು ಮಂಗಳೂರಿನ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಸುರತ್ಕಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.

English summary
Body found in a sand bag under the bridge here in Suratkal. The deceased has been identified as Mariyappa (50) native of Koppala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X