ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೈಲ್ವೆ ಸಿಬ್ಬಂದಿ ನಿರ್ಲಕ್ಷ್ಯ, ನರಿಮೊಗರುವಿನಲ್ಲಿ ತಪ್ಪಿದ ಭಾರೀ ಅನಾಹುತ

|
Google Oneindia Kannada News

ಮಂಗಳೂರು, ನವೆಂಬರ್ 14:ರೈಲು ಬರುವ ಸಂದರ್ಭದಲ್ಲಿ ರೈಲ್ವೆ ಸಿಬ್ಬಂದಿ ರೈಲ್ವೆ ಗೇಟ್ ಹಾಕದೇ ನಿರ್ಲಕ್ಷ್ಯ ತೋರಿದ ಆಘಾತಕಾರಿ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಕಬಕ ಪುತ್ತೂರು ನೆಟ್ಟಣ ಎಂಬಲ್ಲಿ ಈ ಅಚಾತುರ್ಯ ನಡೆದಿದೆ.

ಇಲ್ಲಿಯ ನರಿಮೊಗರುವಿನಲ್ಲಿ ರೈಲ್ವೆ ಗೇಟ್ ಹಾಕದೆ ಇರುವ ಸಂದರ್ಭದಲ್ಲಿ ರೈಲು ಚಲಿಸಿದೆ. ಆದರೆ ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ. ರೈಲು ಬರುವ ಸಮಯದಲ್ಲಿ ಗೇಟು ಹಾಕಬೇಕಾದ ಸಿಬ್ಬಂದಿ ಗೇಟು ಹಾಕದೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಇದೀಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜನರ ಜೀವ ಉಳಿಸಲು ಹೋಗಿ ತಾನೇ ಬಲಿಯಾದ 'ರಾವಣ'ಜನರ ಜೀವ ಉಳಿಸಲು ಹೋಗಿ ತಾನೇ ಬಲಿಯಾದ 'ರಾವಣ'

ನರಿಮೊಗರು ಸಾಂದೀಪಿನಿ ವಿದ್ಯಾಸಂಸ್ಥೆ ಬಳಿ ಇರುವ ರೈಲ್ವೆ ಗೇಟ್ ಅನ್ನು ಹಾಕದೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದರು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸದೆ ದುರಂತ ತಪ್ಪಿದೆ. ರೈಲ್ವೆ ಗೇಟ್ ಮುಚ್ಚದ ಕಾರಣ ಮಹಿಳೆಯೊಬ್ಬರು ತಮ್ಮ ದ್ವಿಚಕ್ರ ವಾಹನವನ್ನು ಹಳಿ ದಾಟಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಆ ಸಂದರ್ಭದಲ್ಲಿ ರೈಲು ಬರುವ ಶಬ್ದ ಮಹಿಳೆಗೆ ಕೇಳಿದೆ.

Deadly escape for residents of Puttur as railway gate unclosed

ಮೈಸೂರಿನಲ್ಲಿ ಹಳಿ ತಪ್ಪಿದ ಪೆಟ್ರೋಲಿಯಂ ತುಂಬಿದ ರೈಲು ಮೈಸೂರಿನಲ್ಲಿ ಹಳಿ ತಪ್ಪಿದ ಪೆಟ್ರೋಲಿಯಂ ತುಂಬಿದ ರೈಲು

ಆಗ ಅವರು ಕೂಡಲೇ ಹಿಂದೆ ಸರಿದು ಪಾರಾಗಿದ್ದಾರೆ. ಒಂದು ವೇಳೆ ಅವರು ಮುಂದೆ ಚಲಿಸುತ್ತಿದ್ದರೆ ಭಾರೀ ಅಪಾಯ ಸಂಭವಿಸುತ್ತಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರೈಲ್ವೆ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

English summary
Residents of Nettan at Puttur had a lucky escape from death as the railway gate man didn't close the gate. Luckily no harm took place as the train passed by here on Wednesday 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X