ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೃಹ ಬಂಧನದಲ್ಲಿದ್ದ ವೃದ್ಧನನ್ನು ರಕ್ಷಿಸಿ ಮಾನವೀಯತೆ ಮೆರೆದ ಉಪ್ಪಿನಂಗಡಿ ಎಸ್ ಐ

|
Google Oneindia Kannada News

ಮಂಗಳೂರು, ಅಕ್ಟೋಬರ್. 01: ಸೊಸೆಯ ಗೃಹಬಂಧನದಲ್ಲಿ ಕರುಣಾಜನಕ ಸ್ಥಿತಿಯಲ್ಲಿದ್ದ ವೃದ್ಧ ಮಾವನನ್ನು ರಕ್ಷಿಸಿದ ಪೊಲೀಸ್ ಅಧಿಕಾರಿ ತನ್ನ ಮನೆಯಲ್ಲೇ ಆ ಹಿರಿಯ ಜೀವಕ್ಕೆ ಆಶ್ರಯ ನೀಡಿದ ಪ್ರಸಂಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಉಪ್ಪಿನಂಗಡಿ ಸಮೀಪದ ನಟ್ಟಿಬೈಲ್ ನಿವಾಸಿಯಾದ ಸುಲೈಮಾನ್ ಹಲವಾರು ದಿನಗಳಿಂದ ಸೊಸೆ ಹಾಗೂ ಮಗನ ಕಿರುಕುಳದಿಂದ ಗೃಹಬಂಧನದಲ್ಲಿದ್ದು, ಊಟ ಉಪಚಾರವಿಲ್ಲದೆ ನಿತ್ರಾಣ ಗೊಂಡಿದ್ದರು.

ಬೆಳಗಾವಿಯ ದಿವಾನನ ಮಗಳು, ಬೆಂಗಳೂರಿನ ಬಿಸಿಲ ಝಳದಲ್ಲಿ ಕರಗಿದ ನೈಜ ಕತೆ!ಬೆಳಗಾವಿಯ ದಿವಾನನ ಮಗಳು, ಬೆಂಗಳೂರಿನ ಬಿಸಿಲ ಝಳದಲ್ಲಿ ಕರಗಿದ ನೈಜ ಕತೆ!

ಆಹಾರವಿಲ್ಲದೇ ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಆ ಹಿರಿಯ ಜೀವದ ಬಗ್ಗೆ ಸ್ಥಳೀಯರು ಉಪ್ಪಿನಂಗಡಿ ಸಬ್ ಇನ್ಸ್ ಪೆಕ್ಟರ್ ನಂದ ಕುಮಾರ್ ಅವರಿಗೆ ಮಾಹಿತಿ ನೀಡಿದ್ದರು.

DK cop sets himself as an example in by giving shelter to the needy

ಘಟನೆಯ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಿದ ಎಸ್ ಐ ನಂದಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಊರವರೊಂದಿಗೆ ಮಾನಾಡಿದ್ದಾರೆ . ನಂತರ ಸುಲೈಮಾನ್ ಅವರನ್ನು ಗೃಹಬಂಧನದಿಂದ ಮುಕ್ತಗೊಳಿಸಿ, ತನ್ನ ಸ್ವಂತಮನೆಗೆ ಕರೆತಂದು ಅಲ್ಲಿ ಆಶ್ರಯ ನೀಡಿದ್ದಾರೆ.

DK cop sets himself as an example in by giving shelter to the needy

ಮನಮಿಡಿವ 'ಆ ಸುದ್ದಿ'ಗೆ ಒನ್ಇಂಡಿಯಾ ಓದುಗರ ಹೃದಯಸ್ಪರ್ಶಿ ಪ್ರತಿಕ್ರಿಯೆಮನಮಿಡಿವ 'ಆ ಸುದ್ದಿ'ಗೆ ಒನ್ಇಂಡಿಯಾ ಓದುಗರ ಹೃದಯಸ್ಪರ್ಶಿ ಪ್ರತಿಕ್ರಿಯೆ

ನೊಂದ ಜೀವಕ್ಕೆ ಊಟ ಉಪಚಾರ ನೀಡಿ, ಮಾನವಿಯತೆ ಮೆರೆದಿದ್ದಾರೆ. ಎಸ್ ಐ ನಂದಕುಮಾರ್ ಅವರ ಈ ಕಾರ್ಯವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಆದರೆ ಮಾವ ಸುಲೈಮಾನ್ ಅವರನ್ನು ಗೃಹ ಬಂಧನದಿಂದ ರಕ್ಷಿಸಿದ್ದಕ್ಕೆ ಎಸ್. ಐ ನಂದಕುಮಾರ್ ಅವರ ವಿರುದ್ಧ ಸುಲೈಮಾನ್ ಸೊಸೆ ಹಾಗೂ ಮಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Dakshina Kannada police officer sets as an example in giving shelter to a father who was mentally & Physically tortured by his own son. The news about the cop has gone viral on social media.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X