ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿರಾಡಿ ಘಾಟ್ ರಸ್ತೆಯಲ್ಲಿ ಭಾರೀ ವಾಹನಗಳಿಗೆ ನಿಷೇಧ

By Gururaj
|
Google Oneindia Kannada News

ಮಂಗಳೂರು, ಜುಲೈ 16 : ಕಾಂಕ್ರೀಟ್ ರಸ್ತೆ ಕಾಮಗಾರಿ ಬಳಿಕ ಶಿರಾಡಿ ಘಾಟ್ ಮಾರ್ಗ ವಾಹನಗಳಿಗೆ ಮುಕ್ತವಾಗಿದೆ. ಆದರೆ, ಲಘು ವಾಹನಗಳು ಮಾತ್ರ ಸಂಚಾರ ನಡೆಸಬಹುದು. ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅಭಿವೃದ್ಧಿಗೊಂಡಿರುವ ಶಿರಾಢಿ ಘಾಟ್ ರಸ್ತೆಯನ್ನು ಉದ್ಘಾಟಿಸಿದ್ದಾರೆ. ಭಾನುವಾರ ಮಧ್ಯಾಹ್ನ 3ಗಂಟೆಯಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಶಿರಾಡಿ ಘಾಟ್ ಭಾನುವಾರ ಸಂಚಾರಕ್ಕೆ ಮುಕ್ತ, ಮೈಮರೆತರೆ ಪ್ರಪಾತಕ್ಕೆ ಖಚಿತಶಿರಾಡಿ ಘಾಟ್ ಭಾನುವಾರ ಸಂಚಾರಕ್ಕೆ ಮುಕ್ತ, ಮೈಮರೆತರೆ ಪ್ರಪಾತಕ್ಕೆ ಖಚಿತ

ಮೊದಲ ದಿನ ಸಾವಿರಕ್ಕೂ ಅಧಿಕ ವಾಹನಗಳು ಕಾಂಕ್ರೀಟ್‌ರಸ್ತೆಯಲ್ಲಿ ಸಂಚಾರ ನಡೆಸಿದವು. ಮೊದಲ ದಿನ ಕಾರು, ಬಸ್, ಕಂಟೈನರ್ ಸೇರಿದಂತೆ ಎಲ್ಲಾ ವಿಧದ ವಾಹನಕ್ಕೆ ಅವಕಾಶ ನೀಡಲಾಯಿತು. ಆದರೆ, ರಸ್ತೆಯ ಕೆಲಭಾಗದಲ್ಲಿ ತಡೆಗೋಡೆ ಕುಸಿತಗೊಂಡಿದೆ.

Entry of heavy vehicles restricted in shiradi ghat

ಆದ್ದರಿಂದ, ಭಾರೀ ವಾಹನಗಳ ಸಂಚಾರಕ್ಕೆ ನಿಷೇದ ಹೇರುವ ತೀರ್ಮಾನ ಕೈಗೊಳ್ಳಲಾಗಿದೆ. 15 ದಿನಗಳ ಕಾಲ ಶಿರಾಡಿ ಘಾಟ್ ರಸ್ತೆಯಲ್ಲಿ ಭಾರೀ ವಾಹನಗಳು ಸಂಚಾರವನ್ನು ನಡೆಸುವಂತಿಲ್ಲ.

ಶಿರಾಡಿ ಘಾಟ್ ನಲ್ಲಿ ಸ್ಥಳೀಯರಿಂದ ಅಧಿಕಾರಿಗಳಿಗೆ ದಿಗ್ಬಂಧನಶಿರಾಡಿ ಘಾಟ್ ನಲ್ಲಿ ಸ್ಥಳೀಯರಿಂದ ಅಧಿಕಾರಿಗಳಿಗೆ ದಿಗ್ಬಂಧನ

ಸಚಿವ ಯು.ಟಿ.ಖಾದರ್ ಈ ಕುರಿತು ಮಾಹಿತಿ ನೀಡಿದ್ದು, 'ಶಿರಾಡಿ ಘಾಟ್‌ನಲ್ಲಿ ತಡೆಗೋಡೆ ನಿರ್ಮಾಣ ಕೆಲಸ ಇನ್ನೂ ಬಾಕಿ ಇದೆ. ಆದ್ದರಿಂದ, 15 ದಿನಗಳ ಕಾಲ ಭಾರೀ ವಾಹನ ನಿಷೇಧಿಸಲಾಗಿದೆ' ಎಂದು ಹೇಳಿದ್ದಾರೆ.

ಅಪಾಯಕಾರಿ ವಲಯದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು 15 ದಿನದಲ್ಲಿ ಪೂರ್ಣಗೊಳಿಸಬೇಕು ಎಂದು ಟೆಂಡರ್ ಪಡೆದವರಿಗೆ ಸೂಚನೆ ನೀಡಲಾಗಿದೆ. ಹೊಸದಾಗಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯುದ್ದಕ್ಕೂ 50 ಕಿ.ಮೀ. ವೇಗದ ಮಿತಿ ನಿಗದಿಗೊಳಿಸಲಾಗಿದೆ.

English summary
Bengaluru-Mangaluru connecting Shiradi Ghat stretch was opened to light vehicles on Sunday, July 16, 2018. Heavy vehicles restricted for next 15 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X