ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಯಿಲದಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

|
Google Oneindia Kannada News

ಮಂಗಳೂರು, ಅಕ್ಟೋಬರ್. 11:ಬೆಳೆನಾಶ ಹಾಗೂ ಸಾಲಬಾಧೆಯಿಂದ ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಯೋಜನೆಗಳನ್ನು ರಾಜ್ಯಸರಕಾರ ಜಾರಿಗೆ ತರುತ್ತಿದೆ. ಆದರೆ ಇನ್ನೊಂದೆಡೆ ರೈತರ ಆತ್ಮಹತ್ಯಾ ಪ್ರಕರಣಗಳು ಮುಂದುವರೆಯುತ್ತಲೇ ಇವೆ.

ರೈತರ ಸರಣಿ ಆತ್ಮಹತ್ಯಾ ಪ್ರಕರಣಗಳಿಗೆ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ರೈತನ ಆತ್ಮಹತ್ಯಾ ಪ್ರಕರಣ ಸೇರ್ಪಡೆಗೊಂಡಿದೆ.

ಅಪ್ಪನ ಆಸ್ಪತ್ರೆ ಬಿಲ್ ಪಾವತಿಸದೆ ಮಗ ಆತ್ಮಹತ್ಯೆ, ಇತ್ತ ಅಪ್ಪನೂ ಸಾವುಅಪ್ಪನ ಆಸ್ಪತ್ರೆ ಬಿಲ್ ಪಾವತಿಸದೆ ಮಗ ಆತ್ಮಹತ್ಯೆ, ಇತ್ತ ಅಪ್ಪನೂ ಸಾವು

ಸಾಲ ಬಾಧೆಯಿಂದ ಬೇಸತ್ತ ರೈತರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯಿಲದಲ್ಲಿ ಬುಧವಾರ (ಅ10) ನಡೆದಿದೆ. ಕುಶಾಲಪ್ಪ ಗೌಡ (53) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ಕೃಷಿಕ.

Farmer committed suicide in Koila

ಬ್ಯಾಂಕ್ ಹಾಗೂ ಕೈ ಸಾಲಗಳಿಂದಾಗಿ ಕುಶಾಲಪ್ಪ ಗೌಡ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ : ರೈತ ನಂದೀಶ್ ಕುಟುಂಬಕ್ಕೆ ಪರಿಹಾರ ವಿತರಿಸಿದ ಸಿಎಂಮಂಡ್ಯ : ರೈತ ನಂದೀಶ್ ಕುಟುಂಬಕ್ಕೆ ಪರಿಹಾರ ವಿತರಿಸಿದ ಸಿಎಂ

ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸಾಲ ಮನ್ನಾ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ರೈತರ 713 ಕೋಟಿ ರೂಪಾಯಿ ಸಾಲ ಮನ್ನಾ ಆಗಲಿದೆ.

ಸಾಲಬಾಧೆ: ಮಂಡ್ಯದಲ್ಲಿ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆಸಾಲಬಾಧೆ: ಮಂಡ್ಯದಲ್ಲಿ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ಸಂದರ್ಭದಲ್ಲಿ ಸಾಲ ಮನ್ನಾದಡಿ ಜಿಲ್ಲೆಯ 380 ಕೋಟಿ ರೂಪಾಯಿ ರೈತರ ಸಾಲ ಮನ್ನಾ ಆಗಿದೆ. ಆದರೂ ಕುಶಾಲಪ್ಪ ಗೌಡ ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೂ ಏಕೆ ?ಎಂಬ ಪ್ರಶ್ನೆ ಉದ್ಬವವಾಗಿದೆ.

English summary
Farmer Kushalappa Gowda committed suicide in Kadaba, Dakshina Kannada district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X