ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊನೆಗೂ ಮುಚ್ಚಿದ ಕಡಬದ ಕಲ್ಲುಗುಡ್ಡೆಯ ಮದ್ಯದಂಗಡಿ

|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 22 : ಪುತ್ತೂರು ತಾಲೂಕಿನ ಕಡಬದ ಕಲ್ಲುಗುಡ್ಡೆಯ ಸರಕಾರಿ ಜಮೀನಿನ ಕಟ್ಟಡದಲ್ಲಿ ತಲೆ ಎತ್ತಿದ್ದ ಮದ್ಯದಂಗಡಿ ಕೊನೆಗೂ ಬಂದ್ ಆಗಿದೆ.

ಮದ್ಯದಂಗಡಿ ವಿರುದ್ಧ ಸಿಡಿದೆದ್ದ ಪುತ್ತೂರಿನ ಕಡಬದ ಗ್ರಾಮಸ್ಥರುಮದ್ಯದಂಗಡಿ ವಿರುದ್ಧ ಸಿಡಿದೆದ್ದ ಪುತ್ತೂರಿನ ಕಡಬದ ಗ್ರಾಮಸ್ಥರು

ಮದ್ಯದಂಗಡಿಯನ್ನು ಮುಚ್ಚಬೇಕೆಂದು ಆಗ್ರಹಿಸಿ ಕಳೆದ 10 ದಿನಗಳಿಂದ ಇಲ್ಲಿನ ಗ್ರಾಮಸ್ಥರು ಹಾಗೂ ವಿವಿಧ ಸಂಘ ಸಂಸ್ಥೆಗಳ ನಡೆಸುತ್ತಿದ್ದ ನಿರಂತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

Finally Kadaba wine shop closed after peoples aggressive protest

ಹೋರಾಟಗಾರಿಗೆ ಮಣಿದು ಜಿಲ್ಲಾಡಳಿತ ನಿನ್ನೆ (ಸೆ,21) ಸ್ಥಳದ ಸರ್ವೆಯನ್ನು ನಡೆಸಿತ್ತು. ಸರ್ವೆಯಲ್ಲಿ ಮದ್ಯದಂಗಡಿ ಇರುವ ಜಾಗ ಸರಕಾರಿ ಜಾಗವೆಂದು ತಿಳಿದುಬಂದ ಹಿನ್ನಲೆಯಲ್ಲಿ ಇದೀಗ ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳು ಮದ್ಯದಂಗಡಿ ಹಾಗೂ ಕಟ್ಟಡವನ್ನು ನೆಲಸಮಗೊಳಿಸಲು ಆದೇಶ ನೀಡಿದ್ದಾರೆ.

ಇದೀಗ ಸ್ಥಳೀಯ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಅಧಿಕೃತ ಆದೇಶ ಪ್ರತಿಗಾಗಿ ಕಾಯುತ್ತಿದ್ದು, ಆದೇಶ ಪ್ರತಿ ಕೈಸೇರಿದ ಕೂಡಲೇ ಕಟ್ಟಡ ನೆಲಸಮ ಕಾರ್ಯ ನಡೆಯಲಿದೆ.

ಕಳೆದೆರಡು ದಿನಗಳಿಂದ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಮಕ್ಕಳನ್ನೂ ಸೇರಿಸಿಕೊಂಡಿದ್ದರು. ಅಲ್ಲದೆ ಸ್ಥಳಕ್ಕೆ ಆಗಮಿಸಿದ ಅಬಕಾರಿ ಇಲಾಖೆ ಹಾಗೂ ಪುತ್ತೂರು ಸಹಾಯಕ ಕಮಿಷನರ್ ಗೂ ದಿಗ್ಭಂಧನ ಹಾಕಿ ಹೋರಾಟ ಮುಂದುವರೆಸಿದ್ದರು, ಇದೀಗ ಅಂಗಡಿ ಮುಚ್ಚುವುದರಿಂದ ಹೋರಾಟಗಾರರಲ್ಲಿ ಸಂತಸ ತಂದಿದೆ.

English summary
The Kadaba residents who were protesting since a week for the demolish of wine shop at Government property have finally eneded up in getting victory by DC order to demolish the wine shop here on Sep 22.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X