ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳ್ತಂಗಡಿಯಲ್ಲಿ ಗ್ಯಾಂಗ್ ವಾರ್: ಮೂವರಿಗೆ ಗಂಭೀರ ಗಾಯ

|
Google Oneindia Kannada News

ಮಂಗಳೂರು, ಡಿಸೆಂಬರ್ 05 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಗ್ಯಾಂಗ್ ವಾರ್ ನಡೆದಿದೆ.ಮಸೀದಿ ವಿಚಾರದಲ್ಲಿ ಎರಡು ತಂಡಗಳ ನಡುವೆ ಮನಸ್ತಾಪದ ಹಿನ್ನೆಲೆಯಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದಿದೆ

ಬೆಳ್ತಂಗಡಿಯಲ್ಲಿ ಯುವಕರಿಬ್ಬರಿಗೆ ಥಳಿತ, ಮರುಕಳಿಸಿದ ನೈತಿಕ ಪೊಲೀಸ್ ಗಿರಿಬೆಳ್ತಂಗಡಿಯಲ್ಲಿ ಯುವಕರಿಬ್ಬರಿಗೆ ಥಳಿತ, ಮರುಕಳಿಸಿದ ನೈತಿಕ ಪೊಲೀಸ್ ಗಿರಿ

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಸೋಮವಾರ(ಡಿ.04) ರಾತ್ರಿ ಈ ಘಟನೆ ನಡೆದಿದ್ದು. 10 ಜನರ ತಂಡ 3 ಯುವಕರ ಮೇಲೆ ದಾಳಿ ನಡೆಸಿದೆ. ಲಾಂಗು ಮಚ್ಚುಗಳಿಂದ ತಂಡ ದಾಳಿ ನಡೆಸಿದದ್ದು ಗೇರುಕಟ್ಟೆ ಬಸ್ ಸ್ಟಾಂಡ್ ಬಳಿ ಸಾರ್ವಜನಿಕರ ಎದುರೇ ಗ್ಯಾಂಗ್ ವಾರ್ ನಡೆದಿದೆ.

Gang war in Belthangady . 3 hospitalised with serious injuries

ಘಟನೆಯಲ್ಲಿ 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಸ್ಲೀಂ,ಹಾರಿಸ್,ಶಿಹಾಬ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರು ಖಾಸಾಗಿ ಆಸ್ಪತ್ರೆ ಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಯಾಕೂಬ್,ಉಮರಬ್ಬ, ರವೂಫ್,ಇರ್ಫಾನ್

ರಿಝ್ವಾನ್, ಅಬೂಬಕರ್, ಆದಂ ಶಾಫಿ ,ಹೈದರ್ ಎಂಬವರು ಈ ತಲವಾರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಸೀದಿಯ ವಿಚಾರದಲ್ಲಿ ಎರಡೂ ತಂಡಗಳ ನಡುವೆ ಮನಸ್ತಾಪ ವಿದ್ದು ಮೊನ್ನೆ ಭಾನುವಾರದಂದು ಈ ಎರಡು ತಂಡಗಳ ನಡುವೆ ಘರ್ಷಣೆ ಸಂಭವಿಸಿತ್ತು ಎಂದು ಹೇಳಲಾಗಿದೆ. ಈ ಘಟನೆಯ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

English summary
Gang war in Belthangady . 3 hospitalised with serious injuries.Again gang war reported in DK.The gang war broke out between two groups in Gerukatte near Belthangady.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X