ಬೆಳ್ತಂಗಡಿಯಲ್ಲಿ ಗ್ಯಾಂಗ್ ವಾರ್: ಮೂವರಿಗೆ ಗಂಭೀರ ಗಾಯ
ಮಂಗಳೂರು, ಡಿಸೆಂಬರ್ 05 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಗ್ಯಾಂಗ್ ವಾರ್ ನಡೆದಿದೆ.ಮಸೀದಿ ವಿಚಾರದಲ್ಲಿ ಎರಡು ತಂಡಗಳ ನಡುವೆ ಮನಸ್ತಾಪದ ಹಿನ್ನೆಲೆಯಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದಿದೆ
ಬೆಳ್ತಂಗಡಿಯಲ್ಲಿ ಯುವಕರಿಬ್ಬರಿಗೆ ಥಳಿತ, ಮರುಕಳಿಸಿದ ನೈತಿಕ ಪೊಲೀಸ್ ಗಿರಿ
ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಸೋಮವಾರ(ಡಿ.04) ರಾತ್ರಿ ಈ ಘಟನೆ ನಡೆದಿದ್ದು. 10 ಜನರ ತಂಡ 3 ಯುವಕರ ಮೇಲೆ ದಾಳಿ ನಡೆಸಿದೆ. ಲಾಂಗು ಮಚ್ಚುಗಳಿಂದ ತಂಡ ದಾಳಿ ನಡೆಸಿದದ್ದು ಗೇರುಕಟ್ಟೆ ಬಸ್ ಸ್ಟಾಂಡ್ ಬಳಿ ಸಾರ್ವಜನಿಕರ ಎದುರೇ ಗ್ಯಾಂಗ್ ವಾರ್ ನಡೆದಿದೆ.
ಘಟನೆಯಲ್ಲಿ 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಸ್ಲೀಂ,ಹಾರಿಸ್,ಶಿಹಾಬ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರು ಖಾಸಾಗಿ ಆಸ್ಪತ್ರೆ ಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಯಾಕೂಬ್,ಉಮರಬ್ಬ, ರವೂಫ್,ಇರ್ಫಾನ್
ರಿಝ್ವಾನ್, ಅಬೂಬಕರ್, ಆದಂ ಶಾಫಿ ,ಹೈದರ್ ಎಂಬವರು ಈ ತಲವಾರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಸೀದಿಯ ವಿಚಾರದಲ್ಲಿ ಎರಡೂ ತಂಡಗಳ ನಡುವೆ ಮನಸ್ತಾಪ ವಿದ್ದು ಮೊನ್ನೆ ಭಾನುವಾರದಂದು ಈ ಎರಡು ತಂಡಗಳ ನಡುವೆ ಘರ್ಷಣೆ ಸಂಭವಿಸಿತ್ತು ಎಂದು ಹೇಳಲಾಗಿದೆ. ಈ ಘಟನೆಯ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.