ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಮಳೆ ಅಬ್ಬರ: ಮರ ಧರೆಗುರುಳಿ ನಾಲ್ವರಿಗೆ ಗಾಯ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು ಜೂನ್ 08: ಮಂಗಳೂರಿನಲ್ಲಿ ಮಳೆ ಬಿರುಸುಗೊಂಡಿದೆ. ಶುಕ್ರವಾರ ರಾತ್ರಿ ಸುರಿದ ಗಾಳಿ ಸಹಿತ ಮಳೆಗೆ ಬೃಹತ್ ಅಶ್ವತ್ಥ ಮರ ಉರುಳಿದ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.

ನಗರದ ಮಂಗಳಾದೇವಿ ದೇವಸ್ಥಾನದ ಮುಂಭಾಗದಲ್ಲಿರುವ ಬೃಹತ್ ಅಶ್ವತ್ಥ ವೃಕ್ಷ ಏಕಾಏಕಿ ಉರುಳಿಬಿದ್ದಿದೆ. ಈ ಸಂದರ್ಭದಲ್ಲಿ ದೇವಾಲಯದ ಆವರಣದಲ್ಲಿದ್ದ 4 ಮಂದಿ ಗಾಯಗೊಂಡಿದ್ದಾರೆ.

ಮುಂಗಾರು ಬಿರುಸು: ಮಹಾರಾಷ್ಟ್ರ ಕರಾವಳಿ, ಗೋವಾದಲ್ಲಿ ಭಾರಿ ಮಳೆ ಸಂಭವ ಮುಂಗಾರು ಬಿರುಸು: ಮಹಾರಾಷ್ಟ್ರ ಕರಾವಳಿ, ಗೋವಾದಲ್ಲಿ ಭಾರಿ ಮಳೆ ಸಂಭವ

ಗಾಯಗೊಂಡವರನ್ನು ಸುರೇಖ (63), ಪ್ರವೀಣ್ ಸುವರ್ಣ (49), ನವೀನ್ (45), ತೇಜಸ್ವಿನಿ (20) ಎಂದು ಗುರುತಿಸಲಾಗಿದೆ.

heavy rain in mangaluru four injured when a tree fell on them

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯರು ಮತ್ತು ಪೊಲೀಸರು ತೆರವು ಕಾರ್ಯಾಚರಣೆ ನಡೆಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ .

ಹೆಚ್ಚಾಯಿತು ಮಳೆಯ ಅಬ್ಬರ
ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುತ್ತಿದ್ದು, ಸಮುದ್ರ ಪ್ರಕ್ಷುಬ್ಧಗೊಂಡಿದೆ. ಶನಿವಾರ ಮುಂಜಾನೆಯಿಂದ ಮಂಗಳೂರು ಸೇರಿದಂತೆ ಜಿಲ್ಲೆಯ ಇತರೆಡೆ ಉತ್ತಮ ಮಳೆಯಾಗುತ್ತಿದೆ. ಈ ಪರಿಣಾಮ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತ ಗೊಂಡಿದೆ.

heavy rain in mangaluru four injured when a tree fell on them

ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಮಳೆಯೊಂದಿಗೆ ವೇಗವಾಗಿ ಜೋರಾದ ಗಾಳಿಯೂ ಬೀಸುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಬಿರುಸಿನ ಮಳೆಯೊಂದಿಗೆ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಜಿಲ್ಲೆಯ ಹಲವೆಡೆ ಮರಗಳು ನೆಲಕ್ಕುರುಳಿವೆ.

ಕರಾವಳಿಯ ಜೀವನಾಡಿ ಕೊಂಕಣ ರೈಲ್ವೆ ಮುಂಗಾರು ಮಳೆಗೆ ಸನ್ನದ್ಕರಾವಳಿಯ ಜೀವನಾಡಿ ಕೊಂಕಣ ರೈಲ್ವೆ ಮುಂಗಾರು ಮಳೆಗೆ ಸನ್ನದ್

ಜಿಲ್ಲೆಯ ಹಲವು ಭಾಗದಲ್ಲಿ ವಿದ್ಯುತ್ ಕೈಕೊಟ್ಟಿದೆ. ಗಾಳಿಯ ರಭಸದಿಂದಾಗಿ ಸಮುದ್ರ ತೀರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಾಗಿದ್ದು ಕಡಲು ಭೋರ್ಗರೆಯುತ್ತ ದಡಕ್ಕೆ ಅಪ್ಪಳಿಸುತ್ತಿದೆ.

heavy rain in mangaluru four injured when a tree fell on them

ಕೇಂದ್ರ ಹವಾಮಾನ ಇಲಾಖೆ ಶುಕ್ರವಾರ ರಾಜ್ಯ ಸರಕಾರಕ್ಕೆ ಪತ್ರ ಬರೆದು ಕರಾವಳಿಯಲ್ಲಿ ಜೂನ್ 12 ರವರೆಗೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದ್ದು, ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದೆ.

heavy rain in mangaluru four injured when a tree fell on them

ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಭಾರಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಹೊಳೆ, ನದಿಗಳು ತುಂಬಿ ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.

English summary
Heavy rain continues to effect on the daily life of people in Mangaluru, Udupi and Dakshina Kannada districts. Four people were injured when a big tree fell on them on Friday night in Mangaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X