ಕಾಂಗ್ರೆಸ್ ವಿರುದ್ಧ ಜೆಡಿಎಸ್ನ ಬೋಜೇಗೌಡ ಹೇಳಿಕೆ: ಖಾದರ್ ಆಕ್ಷೇಪ
ಮಂಗಳೂರು, ಆಗಸ್ಟ್ 04: ಕಾಂಗ್ರೆಸ್ ವಿರುದ್ಧ ಜೆ.ಡಿ.ಎಸ್ ಮುಖಂಡ ಬೋಜೆಗೌಡ ನೀಡಿರುವ ಹೇಳಿಕೆ ಕಾಂಗ್ರೆಸ್ ಮುಖಂಡರನ್ನು ಕೆರಳಿಸಿದೆ. ಬೋಜೆ ಗೌಡರ ಹೇಳಿಕೆ ವಿರುದ್ಧ ಕಿಡಿಕಾರಿರುವ ಸಚಿವ ಯು.ಟಿ ಖಾದರ್ ಕಿಡಿಕಾರಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೋಜೆಗೌಡ ಅವರು ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ . ಇನ್ನೊಂದು ಪಕ್ಷದ ಬಗ್ಗೆ ಮಾತನಾಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಕುಟುಕಿದರು.
ಕಾಂಗ್ರೆಸ್ ಸೋಲಲು ಹಿಂದುಗಳ ಕಡೆಗಣನೆಯೇ ಕಾರಣ: ಜೆಡಿಎಸ್ನ ಭೋಜೇಗೌಡ
ಕಾಂಗ್ರೆಸ್ ಎಲ್ಲಾ ಜಾತಿ,ಧರ್ಮ,ಮತ ಗಳನ್ನು ಒಗ್ಗುಡಿಸಿದ ಪಕ್ಷ. ಕಾಂಗ್ರೆಸ್ ಎಂದಿಗೂ ಜಾತಿ,ಧರ್ಮ , ಆಧಾರದ ಮೇಲೆ ಭೇದಭಾವ ಮಾಡಿಲ್ಲ. ಬೋಜೇಗೌಡರು ಈ ರೀತಿ ಹೇಳಿರುವುದು ಸರಿಯಲ್ಲ ಎಂದಿದ್ದಾರೆ.
ಇಂತಹ ಹೇಳಿಕೆ ಬೋಜೇಗೌಡ ಅವರಿಗೆ ಶೋಭೆ ತರುವಂತಹದ್ದಲ್ಲ. ಈ ಹೇಳಿಕೆ ಅವರ ಗೌರವಕ್ಕೆ ಧಕ್ಕೆ ತರಲಿದೆ, ಇಂತಹ ಹೇಳಿಕೆಯಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಸಾಧ್ಯವಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
Comments
English summary
Minister UT Khader unhappy with JDS leader Boje Gowda who talked against of congress. Khader says, 'Boje Gowda should talk responsibly'.
Story first published: Saturday, August 4, 2018, 17:21 [IST]