ರಾಜ್ಯ ಸರ್ಕಾರದಿಂದ ದಕ್ಷಿಣ ಕನ್ನಡ ಕಾರ್ಮಿಕರಿಗೆ ಸಿಹಿ ಸುದ್ದಿ!
ಮಂಗಳೂರು, ಎಪ್ರಿಲ್ 18: ಮೇ 1 ಕಾರ್ಮಿಕರ ದಿನ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ದಿನದ ಪ್ರಯುಕ್ತ ಮಂಗಳೂರು ಕಾರ್ಮಿಕರಿಗೆ ಒಂದೊಳ್ಳೆ ಉಡುಗೊರೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಹೌದು. ಕರಾವಳಿಗೊಂದು ಕಾರ್ಮಿಕರ ಭವನ ನಿರ್ಮಿಸಬೇಕೆಂಬ ಅನೇಕ ವರ್ಷಗಳಿಂದ ಕೇಳಿ ಬರುತ್ತಿದ್ದ ಕೂಗೆಗೆ ಕೊನೆಗೂ ರಾಜ್ಯ ಸರ್ಕಾರ ಕಿವಿಗೊಟ್ಟಿದೆ. ಕಾರ್ಮಿಕ ಭವನ ನಿರ್ಮಿಸೋಕೇ ಆದೇಶ ನೀಡುವುದರ ಜತೆಗೆ 2.50 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇರುವ ಜಿಲ್ಲಾ ಕಾರ್ಮಿಕ ಕಲ್ಯಾಣ ಇಲಾಖೆಗೆ ಸ್ವಂತ ಕಟ್ಟಡವಿಲ್ಲದೆ 1 ಲಕ್ಷ ಬಾಡಿಗೆ ಕೊಟ್ಟು ಈ ಕಚೇರಿ ಕಾರ್ಯನಿರ್ವಹಿಸುತ್ತಿದೆ.
ಈ ಕುರಿತು ಮಾತನಾಡಿದ ಮುಖ್ಯ ಸಚೇತಕ ಐವನ್ ಡಿಸೋಜಾ, 'ಮಂಗಳೂರಿನ ಕದ್ರಿಯಲ್ಲಿ ಕಾರ್ಮಿಕರ ಭವನ ನಿರ್ಮಾಣವಾಗಲಿದೆ. ಮೇ 1ರಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಈ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದು ರಾಜ್ಯದ ಏಳನೇ ಭವನವಾಗಲಿದೆ' ಎಂದರು.
Comments
English summary
“There was a demand to have a Karmika Bhavan from many organizations. I had kept the demand in the Council and the government has accepted our demands and sanctioned Rs 4 crore to construct the Karmika Bhavan at Kadri Hills”, said the Chief Whip Ivan D’Souza in a press meet held at his office, MCC here on April 17.
Story first published: Tuesday, April 18, 2017, 19:57 [IST]