ಫಲಿತಾಂಶ : ಬೆಳ್ತಂಗಡಿಯ ಸುಶ್ರುತ್ ರಾಜ್ಯಕ್ಕೆ ದ್ವಿತೀಯ
ಮಂಗಳೂರು, ಮೇ 16 : ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಸುಶ್ರುತ್ 624 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ.
ಸುಶ್ರುತ್ ಬೆಳ್ತಂಗಡಿ ತಾಲೂಕಿನ ಲ್ಯಾಲ ಸೈಂಟ್ ಮೇರೀಸ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ. ಯು.ವಿ. ಕಿಶೋರ್ ಕುಮಾರ್, ಸುರೇಖಾ ದಂಪತಿಯ ಪುತ್ರ ಸುಶ್ರುತ್ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ಮಗನ ಸಾಧನೆ ಬಗ್ಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. [SSLC ಫಲಿತಾಂಶ ಆನ್ ಲೈನ್ ನಲ್ಲಿ ಲಭ್ಯ]

ಒನ್ ಇಂಡಿಯಾ ಜೊತೆ ಮಾತನಾಡಿದ ಸುಶ್ರುತ್ ಪೋಷಕರು, 'ಸುಶ್ರುತ್ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುವುದಕ್ಕೆ ಹೆಮ್ಮೆ ಇದೆ. ಅವನಿಗೆ ಹಿಂದಿ ಕಠಿಣವಾದ ವಿಷಯವಾಗಿತ್ತು' ಎಂದು ಹೇಳಿದರು. [ಸರ್ಕಾರಿ ವೆಬ್ ಸೈಟ್ ನಲ್ಲಿ ಮಾತ್ರ ಫಲಿತಾಂಶ]
'624 ಅಂಕಗಳನ್ನು ನೋಡಿ ಭಾರೀ ಸಂತಸವಾಗಿದೆ. ಪಿಯುಸಿಯಲ್ಲಿ ವಿಜ್ಞಾನ ವಿಷಯ ತೆಗೆದುಕೊಂಡು ಫಾರ್ಮಸಿ ಅಧ್ಯಯನ ಮಾಡಬೇಕು ಎಂಬ ಆಸೆ ಇದೆ' ಎಂದರು ಶುಶ್ರುತ್.
ಸುಶ್ರುತ್ ಬೆಳಗ್ಗೆ 5 ಗಂಟೆಯಿಂದ 8 ಗಂಟೆ ತನಕ ಮತ್ತು ರಾತ್ರಿ 8 ರಿಂದ 11 ರ ತನಕ ಅಭ್ಯಾಸ ಮಾಡುತ್ತಿದ್ದ. ಸುಶ್ರುತ್ ಯಾವುದೇ ಟ್ಯೂಷನ್ಗೆ ಹೋಗಿಲ್ಲ. ತಾಯಿ ಸುರೇಖಾ ಅವರು ಗುರುವಾಯನಕೆರೆ ಹೈಸ್ಕೂಲ್ ಶಿಕ್ಷಕಿಯಾಗಿದ್ದು, ಮಗನ ಓದಿಗೆ ಸಹಕಾರ ನೀಡುತ್ತಿದ್ದರು. [SSLC ಫಲಿತಾಂಶ : ಯಾವ ಜಿಲ್ಲೆ ಪ್ರಥಮ, ಯಾವುದು ಕೊನೆ]
-
SSLC ಪರೀಕ್ಷೆ 2026: ಪರೀಕ್ಷಾ ಹಾಲ್ಗೆ ಹೋಗುವ ಮುನ್ನ ನಿಮ್ಮ ಕೈಯಲ್ಲಿ ಈ ವಸ್ತುಗಳಿವೆಯಾ? ಒಮ್ಮೆ ಚೆಕ್ ಮಾಡಿಕೊಳ್ಳಿ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
SSLC Exam 2026: ಕೊನೆಯ ಕ್ಷಣದಲ್ಲಿ ಒತ್ತಡವಿಲ್ಲದೆ ರಿವಿಷನ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ












Click it and Unblock the Notifications